ಮಂಗಳೂರು: ಯುವತಿಗೆ ಚೂರಿ ಇರಿದು ಯುವಕನೊಬ್ಬ ತನ್ನ ಕುತ್ತಿಗೆಯನ್ನೂ ಕೊಯ್ದುಕೊಂಡ ಘಟನೆ ನಗರದ ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲದಲ್ಲಿ ನಡೆದಿದೆ.
ಬಗಂಬಿಲದಲ್ಲಿ ಯುವತಿಯೊಬ್ಬಳಿಗೆ ಚೂರಿಯಿಂದ ಇರಿದು, ಸುಶಾಂತ್ (22) ತನ್ನ ಕುತ್ತಿಗೆಗೆ ಅದೇ ಚೂರಿಯಿಂದ ಇರಿದುಕೊಂಡಿದ್ದಾನೆ.
ಇಬ್ಬರನ್ನೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರೇಮ ವೈಫಲ್ಯದಿಂದ ಈ ಘಟನೆ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ದುರಂತ ಘಟನೆಯ ಭಯಾನಕ ವಿಡಿಯೋವೊಂದು ವೈರಲ್ ಆಗಿದೆ.