ETV Bharat / city

ಜಿಪಂ ಕೆಡಿಪಿ ಸಭೆಯಲ್ಲಿ ಪಂಪ್‌ವೆಲ್‌ ಮೇಲ್ಸೇತುವೆ ಕುರಿತ ಜಟಾಪಟಿ.. - ಮಂಗಳೂರು ಪಂಪ್​​ ವೆಲ್​ ಮೇಲ್ಸೇತುವೆ ಕಾಮಗಾರಿ ಸುದ್ದಿ

ಟೋಲ್‌ ನಿಲ್ಲಿಸಿರುವ ಬಗ್ಗೆ ಐವಾನ್‌ ಡಿಸೋಜ ಮತ್ತು ವೇದವ್ಯಾಸ ಕಾಮತ್‌ ನಡುವೆ ಮಾತಿನ ಚಕಮಕಿ ನಡೆಯಿತು. ಆಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಬ್ಬರನ್ನೂ ಸಮಾಧಾನಿಸಲು ಹರಸಾಹಸ ಪಡಬೇಕಾಯಿತು.

mangalore-district-panchayat-kdp-meeting
ಜಿ ಪಂ ಕೆಡಿಪಿ ಸಭೆ
author img

By

Published : Jan 20, 2020, 11:24 PM IST

ಮಂಗಳೂರು: ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ಜನವರಿ 31ಕ್ಕೆ ಪೂರ್ಣಗೊಂಡು ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಕೆಡಿಪಿ ಸಭೆಯಲ್ಲಿ ದಕ್ಷಿಣಕನ್ನಡ ಪಿಡಬ್ಲ್ಯೂಡಿ ಎಕ್ಸಿಕ್ಯೂಟಿವ್ ಇಂಜಿನಿಯರ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಸಮಕ್ಷಮ ಹೇಳಿದರು.

ಪಂಪ್ ವೆಲ್ ಕಾಮಗಾರಿ ವಿಳಂಬದ ಹಿನ್ನೆಲೆಯಲ್ಲಿ ಪಿಡಬ್ಲ್ಯೂಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಮತ್ತು ತಹಶೀಲ್ದಾರ್ ದಿನವೂ ಅದರ ಮಾಹಿತಿ ನೀಡಬೇಕೆಂದು ಆದೇಶಿಸಲಾಗಿತ್ತು. ಈ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್, ತಲಪಾಡಿ ಕಡೆಯಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಆದರೆ, ಸುರತ್ಕಲ್ ಕಡೆ ಇನ್ನೂ ಬಾಕಿ ಇದೆ. ಜನವರಿ 31ಕ್ಕೆ ಕಾಮಗಾರಿ ಪೂರ್ಣಗೊಳಿಸಿ ಪಂಪ್ ವೆಲ್ ಮೇಲ್ಸೇತುವೆಯನ್ನು ವಾಹನ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗುವುದು ಎಂದರು‌.

ಜಿಪಂ ಕೆಡಿಪಿ ಸಭೆಯಲ್ಲಿ ಪಂಪ್‌ವೆಲ್‌ ಮೇಲ್ಸೇತುವೆಯದ್ದೇ ಚರ್ಚೆ..

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, 'ನಾನು ಇಂಜಿನಿಯರ್ ಅಲ್ಲದಿದ್ದರೂ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ ಮೂರ್ನಾಲ್ಕು ತಿಂಗಳು ಬೇಕು'. ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಮಾಡಲು ಆರಂಭಿಸಿ ಹತ್ತು ವರ್ಷವಾಯಿತು. ಆದರೆ, ಇನ್ನೂ ಪೂರ್ಣವಾಗಿಲ್ಲ ಎಂದರು.

ತಕ್ಷಣ ಮಧ್ಯಪ್ರವೇಶಿಸಿದ ಶಾಸಕ ವೇದವ್ಯಾಸ ಕಾಮತ್, 'ಐವನ್ ಡಿಸೋಜ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಪಂಪ್‌ವೆಲ್ ವೃತ್ತದಲ್ಲಿ ಹಿಂದೆ ಇದ್ದ ಕಳಶವನ್ನು ತೆಗೆದದ್ದು 16 ನವೆಂಬರ್ 2016ನೇ ಇಸವಿಯಲ್ಲಿ. ಆದರೆ, ಪಿಡಬ್ಲ್ಯೂಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಹಾಗೂ ಜಿಲ್ಲಾಡಳಿತ ಮೇಲುಸ್ತುವಾರಿ ವಹಿಸಿದ ಮೇಲೆ ಬಹಳಷ್ಟು ವೇಗದಲ್ಲಿ ಕಾಮಗಾರಿಯ ನಡೆಯುತ್ತಿದೆ ಎಂದರು.

ಈ ಸಂದರ್ಭ ಟೋಲ್ ನಿಲ್ಲಿಸಿರುವ ಬಗ್ಗೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಆಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಬ್ಬರನ್ನೂ ಸಮಾಧಾನಿಸಲು ಹರಸಾಹಸ ಪಡಬೇಕಾಯಿತು.

ಮಂಗಳೂರು: ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ಜನವರಿ 31ಕ್ಕೆ ಪೂರ್ಣಗೊಂಡು ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಕೆಡಿಪಿ ಸಭೆಯಲ್ಲಿ ದಕ್ಷಿಣಕನ್ನಡ ಪಿಡಬ್ಲ್ಯೂಡಿ ಎಕ್ಸಿಕ್ಯೂಟಿವ್ ಇಂಜಿನಿಯರ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಸಮಕ್ಷಮ ಹೇಳಿದರು.

ಪಂಪ್ ವೆಲ್ ಕಾಮಗಾರಿ ವಿಳಂಬದ ಹಿನ್ನೆಲೆಯಲ್ಲಿ ಪಿಡಬ್ಲ್ಯೂಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಮತ್ತು ತಹಶೀಲ್ದಾರ್ ದಿನವೂ ಅದರ ಮಾಹಿತಿ ನೀಡಬೇಕೆಂದು ಆದೇಶಿಸಲಾಗಿತ್ತು. ಈ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್, ತಲಪಾಡಿ ಕಡೆಯಲ್ಲಿ ಕಾಮಗಾರಿ ಪೂರ್ಣಗೊಂಡಿದೆ. ಆದರೆ, ಸುರತ್ಕಲ್ ಕಡೆ ಇನ್ನೂ ಬಾಕಿ ಇದೆ. ಜನವರಿ 31ಕ್ಕೆ ಕಾಮಗಾರಿ ಪೂರ್ಣಗೊಳಿಸಿ ಪಂಪ್ ವೆಲ್ ಮೇಲ್ಸೇತುವೆಯನ್ನು ವಾಹನ ಸಂಚಾರಕ್ಕೆ ಮುಕ್ತ ಅವಕಾಶ ನೀಡಲಾಗುವುದು ಎಂದರು‌.

ಜಿಪಂ ಕೆಡಿಪಿ ಸಭೆಯಲ್ಲಿ ಪಂಪ್‌ವೆಲ್‌ ಮೇಲ್ಸೇತುವೆಯದ್ದೇ ಚರ್ಚೆ..

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, 'ನಾನು ಇಂಜಿನಿಯರ್ ಅಲ್ಲದಿದ್ದರೂ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ ಮೂರ್ನಾಲ್ಕು ತಿಂಗಳು ಬೇಕು'. ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಮಾಡಲು ಆರಂಭಿಸಿ ಹತ್ತು ವರ್ಷವಾಯಿತು. ಆದರೆ, ಇನ್ನೂ ಪೂರ್ಣವಾಗಿಲ್ಲ ಎಂದರು.

ತಕ್ಷಣ ಮಧ್ಯಪ್ರವೇಶಿಸಿದ ಶಾಸಕ ವೇದವ್ಯಾಸ ಕಾಮತ್, 'ಐವನ್ ಡಿಸೋಜ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಪಂಪ್‌ವೆಲ್ ವೃತ್ತದಲ್ಲಿ ಹಿಂದೆ ಇದ್ದ ಕಳಶವನ್ನು ತೆಗೆದದ್ದು 16 ನವೆಂಬರ್ 2016ನೇ ಇಸವಿಯಲ್ಲಿ. ಆದರೆ, ಪಿಡಬ್ಲ್ಯೂಡಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಹಾಗೂ ಜಿಲ್ಲಾಡಳಿತ ಮೇಲುಸ್ತುವಾರಿ ವಹಿಸಿದ ಮೇಲೆ ಬಹಳಷ್ಟು ವೇಗದಲ್ಲಿ ಕಾಮಗಾರಿಯ ನಡೆಯುತ್ತಿದೆ ಎಂದರು.

ಈ ಸಂದರ್ಭ ಟೋಲ್ ನಿಲ್ಲಿಸಿರುವ ಬಗ್ಗೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಆಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಬ್ಬರನ್ನೂ ಸಮಾಧಾನಿಸಲು ಹರಸಾಹಸ ಪಡಬೇಕಾಯಿತು.

Intro:ಮಂಗಳೂರು: ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ಜನವರಿ 31ಕ್ಕೆ ಪೂರ್ಣಗೊಂಡು ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ದ.ಕ.ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಪಿಡಬ್ಲ್ಯೂಡಿ ಎಕ್ಸಿಕ್ಯುಟಿವ್ ಇಂಜಿನಿಯರ್, ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಸಮಕ್ಷಮ ಹೇಳಿದರು.

ಪಂಪ್ ವೆಲ್ ಕಾಮಗಾರಿ ವಿಳಂಬದ ಹಿನ್ನೆಲೆಯಲ್ಲಿ ಪಿಡಬ್ಲ್ಯೂಡಿ ಎಕ್ಸಿಕ್ಯುಟಿವ್ ಇಂಜಿನಿಯರ್, ತಹಶೀಲ್ದಾರ್ ದಿನಾ ಅದರ ಮಾಹಿತಿಯನ್ನು ನೀಡಬೇಕೆಂದು ಆದೇಶಿಸಲಾಗಿತ್ತು. ಈ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್ ತಲಪಾಡಿ ಕಡೆಯಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ಆದರೆ ಸುರತ್ಕಲ್ ಕಡೆಯಲ್ಲಿ ಇನ್ನೂ ಕಾಮಗಾರಿ ಬಾಕಿ ಇದೆ. ಆದರೆ ಜನವರಿ 31ಕ್ಕೆ ಕಾಮಗಾರಿ ಪೂರ್ಣಗೊಳಿಸಿ ಪಂಪ್ ವೆಲ್ ಮೇಲ್ಸೇತುವೆಯನ್ನು ವಾಹನ ಸಂಚಾರಕ್ಕೆ ಬಿಟ್ಟು ಕೊಡಲಾಗುವುದು ಎಂದು ಹೇಳಿದರು‌.


Body:ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಮಾತನಾಡಿ, 'ತಾನು ಇಂಜಿನಿಯರ್ ಅಲ್ಲದಿದ್ದರೂ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ ಮೂರ್ನಾಲ್ಕು ತಿಂಗಳು ಬೇಕು'. ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ಮಾಡಲು ಆರಂಭಿಸಿ ಹತ್ತು ವರ್ಷವಾಯಿತು. ಆದರೆ ಇನ್ನೂ ಪೂರ್ಣ ವಾಗಿಲ್ಲ ಎಂದು ಹೇಳಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ 'ಐವನ್ ಡಿಸೋಜ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಪಂಪ್ ವೆಲ್ ವೃತ್ತದಲ್ಲಿ ಹಿಂದೆ ಇದ್ದ ಕಳಶವನ್ನು ತೆಗೆದದ್ದು 16 ನವೆಂಬರ್ 2016ನೇ ಇಸವಿಯಲ್ಲಿ. ಆದರೆ ಪಿಡಬ್ಲ್ಯೂಡಿ ಎಕ್ಸಿಕ್ಯುಟಿವ್ ಇಂಜಿನಿಯರ್ ಹಾಗೂ ಜಿಲ್ಲಾಡಳಿತ ಪಂಪ್ ವೆಲ್ ಕಾಮಗಾರಿಯ ಮೇಲುಸ್ತುವಾರಿ ವಹಿಸಿದ ಮೇಲೆ ಕಾಮಗಾರಿ ಬಹಳಷ್ಟು ವೇಗದಲ್ಲಿ ನಡೆಯುತ್ತಿದೆ ಎಂದು ಹೇಳಿದರು.

ಈ ಸಂದರ್ಭ ಟೋಲ್ ನಿಲ್ಲಿಸಿರುವ ಬಗ್ಗೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಆಗ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಬ್ಬರನ್ನು ಸಮಾಧಾನಿಸಲು ಹರಸಾಹಸ ಪಡಬೇಕಾಯಿತು.

Reporter_Vishwanath Panjimogaru


Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.