ETV Bharat / city

ಇಂದು ಸಂಜೆ 7 ಗಂಟೆಯಿಂದ ಬೀಚ್​​ಗಳಿಗೆ ಪ್ರವೇಶ ನಿಷೇಧ: ದ.ಕ ಡಿಸಿ ಆದೇಶ

author img

By

Published : Dec 31, 2021, 4:40 PM IST

ಒಮಿಕ್ರಾನ್ ಆತಂಕದ ನಡುವೆ ಮಂಗಳೂರು ಬೀಚ್​​ಗಳಲ್ಲಿ ಹೊಸ ವರ್ಷಾಚರಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರಿನ ಪ್ರಮುಖ ಬೀಚ್‌ಗಳಿಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

mangalore
ಮಂಗಳೂರು

ಮಂಗಳೂರು: ನಗರದ ಸುತ್ತಮುತ್ತಲಿರುವ ಬೀಚ್​​ಗಳಿಗೆ ಇಂದು (ಶುಕ್ರವಾರ) ಸಂಜೆ 7 ಗಂಟೆಯ ಬಳಿಕ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ದಕ್ಚಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ಮಂಗಳೂರಿನ ಪ್ರಮುಖ ಬೀಚ್‌ಗಳಿಗೆ ಸಾರ್ವಜನಿಕರಿಗೆ ನಿರ್ಬಂಧ

ಕೋವಿಡ್ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಇಂದು ಸಂಜೆ 7 ಗಂಟೆಯಿಂದ ದ.ಕ. ಜಿಲ್ಲಾದ್ಯಂತ ಬೀಚ್​ಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಮೂಲಕ ಕಿನಾರೆಯಲ್ಲಿ ಹೊಸ ವರ್ಷಾಚರಣೆ ನಡೆಸುವುದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

ಮಂಗಳೂರಿನ ಪಣಂಬೂರು, ತಣ್ಣೀರು ಬಾವಿ, ಸೋಮೇಶ್ವರ, ಉಳ್ಳಾಲ, ಮುಕ್ಕ, ಸುರತ್ಕಲ್, ಕೆಆರ್​​ಇಸಿ ಬೀಚ್​ಗಳಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಬ್ಯಾರಿಕೇಡ್​​ಗಳನ್ನು ಅಳವಡಿಸಿ ಯಾರೂ ಬೀಚ್​​ಗಳಲ್ಲಿ ಮೋಜು ಮಸ್ತಿಯಲ್ಲಿ ತೊಡಗದಂತೆ ಕಟ್ಟೆಚ್ಚರ ವಹಿಸಲಾಗುತ್ತದೆ ಎಂದು ಆದೇಶ ಹೊರಡಿಸಿದ್ದಾರೆ‌. ಅಲ್ಲದೇ ಈ ನಿರ್ಬಂಧ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕೋವಿಡ್​​ ಏರಿಕೆ: ಸಮಾರಂಭಗಳಿಗೆ 50 ಜನರಿಗೆ ಮಾತ್ರ ಅವಕಾಶ

ಮಂಗಳೂರು: ನಗರದ ಸುತ್ತಮುತ್ತಲಿರುವ ಬೀಚ್​​ಗಳಿಗೆ ಇಂದು (ಶುಕ್ರವಾರ) ಸಂಜೆ 7 ಗಂಟೆಯ ಬಳಿಕ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ದಕ್ಚಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ಮಂಗಳೂರಿನ ಪ್ರಮುಖ ಬೀಚ್‌ಗಳಿಗೆ ಸಾರ್ವಜನಿಕರಿಗೆ ನಿರ್ಬಂಧ

ಕೋವಿಡ್ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಇಂದು ಸಂಜೆ 7 ಗಂಟೆಯಿಂದ ದ.ಕ. ಜಿಲ್ಲಾದ್ಯಂತ ಬೀಚ್​ಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಮೂಲಕ ಕಿನಾರೆಯಲ್ಲಿ ಹೊಸ ವರ್ಷಾಚರಣೆ ನಡೆಸುವುದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.

ಮಂಗಳೂರಿನ ಪಣಂಬೂರು, ತಣ್ಣೀರು ಬಾವಿ, ಸೋಮೇಶ್ವರ, ಉಳ್ಳಾಲ, ಮುಕ್ಕ, ಸುರತ್ಕಲ್, ಕೆಆರ್​​ಇಸಿ ಬೀಚ್​ಗಳಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಬ್ಯಾರಿಕೇಡ್​​ಗಳನ್ನು ಅಳವಡಿಸಿ ಯಾರೂ ಬೀಚ್​​ಗಳಲ್ಲಿ ಮೋಜು ಮಸ್ತಿಯಲ್ಲಿ ತೊಡಗದಂತೆ ಕಟ್ಟೆಚ್ಚರ ವಹಿಸಲಾಗುತ್ತದೆ ಎಂದು ಆದೇಶ ಹೊರಡಿಸಿದ್ದಾರೆ‌. ಅಲ್ಲದೇ ಈ ನಿರ್ಬಂಧ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕೋವಿಡ್​​ ಏರಿಕೆ: ಸಮಾರಂಭಗಳಿಗೆ 50 ಜನರಿಗೆ ಮಾತ್ರ ಅವಕಾಶ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.