ETV Bharat / city

ನಾಗಬನ ಧ್ವಂಸ ಪ್ರಕರಣ : 8 ಮಂದಿ ಆರೋಪಿಗಳನ್ನ ಬಂಧಿಸಿದ ಮಂಗಳೂರು ಪೊಲೀಸರು

author img

By

Published : Nov 27, 2021, 3:14 PM IST

ನಾಗಬನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿರುವ ಪೊಲೀಸ್ ತಂಡಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. 25 ಸಾವಿರ ರೂ. ಬಹುಮಾನ ನೀಡಿದ್ದಾರೆ..

Nagabana Defiled Case Accused Arrested By Police
ನಾಗಬನ ಧ್ವಂಸ ಪ್ರಕರಣ: ಬಂಧಿತ ಆರೋಪಿಗಳು

ಮಂಗಳೂರು : ನಗರದ ಬಂಗ್ರ ಕೂಳೂರು ಹಾಗೂ ಕೋಡಿಕಲ್ ಪ್ರದೇಶದ ನಾಗಬನಕ್ಕೆ ಅಕ್ರಮ ಪ್ರವೇಶ ಮಾಡಿದ್ದಲ್ಲದೇ ಅಲ್ಲಿನ ನಾಗರ ಕಲ್ಲು ಧ್ವಂಸಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ನಾಗಬನ ಧ್ವಂಸ ಪ್ರಕರಣ.. ಮಂಗಳೂರು ಪೊಲೀಸ್ ಆಯುಕ್ತ ಎನ್‌ ಶಶಿಕುಮಾರ್ ಮಾಹಿತಿ ನೀಡಿರುವುದು..

ಕಾವೂರು ಶಾಂತಿ ನಗರ ನಿವಾಸಿಗಳಾದ ಸಫ್ವಾನ್(25), ಮೊಹಮ್ಮದ್ ಸುಹೈಬ್(23), ನಿಖಿಲೇಶ್(22), ಪಂಜಿಮೊಗರು ನಿವಾಸಿ ಪ್ರವೀಣ್ ಅನಿಲ್ ಮೊಂತೆರೊ(27), ಸುರತ್ಕಲ್ ನಿವಾಸಿ ಜಯಂತ್ ಕುಮಾರ್(30), ಬಂಟ್ವಾಳ ತಾಲೂಕಿನ ಪಡೂರು ಗ್ರಾಮದ ಪ್ರತೀಕ್(24), ಕೂಳೂರು ಪಡುಕೋಡಿ ಗ್ರಾಮದ ಮಂಜುನಾಥ(30) ಹಾಗೂ ಹಾಸನ ಜಿಲ್ಲೆ ಬೇಳೂರು ಗ್ರಾಮ ಮೂಲದ ನೌಷಾದ್ ಅರೇಹಳ್ಳಿ( 30) ಬಂಧಿತ ಆರೋಪಿಗಳು.

ಆರೋಪಿಗಳು ಕೋಮುಗಲಭೆ ಸೃಷ್ಟಿಸಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹುನ್ನಾರದಿಂದ ನಾಗರಕಲ್ಲನ್ನು ಧ್ವಂಸಗೈದಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಪ್ರಕರಣದ ಪ್ರಮುಖ ಆರೋಪಿ‌ ಪ್ರವೀಣ್ ಅನಿಲ್ ಮೊಂತೆರೋ 10 ಸಾವಿರ ರೂ. ಆಮಿಷವೊಡ್ಡಿ ಈ ವಿಧ್ವಂಸಕ ಕೃತ್ಯ ಎಸಗಲು‌ ಸಫ್ವಾನ್ ಎಂಬ ಆರೋಪಿಯೊಂದಿಗೆ ಚರ್ಚಿಸಿದ್ದಾನೆ. ಆ ಬಳಿಕ‌ ಎಲ್ಲರೂ ಸೇರಿ ರಾತ್ರಿ ವೇಳೆ ಕೃತ್ಯ ಎಸಗಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಮಾಹಿತಿ ನೀಡಿದ್ಧಾರೆ.

ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿರುವ ಪೊಲೀಸ್ ತಂಡಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. 25 ಸಾವಿರ ರೂ. ಬಹುಮಾನ ನೀಡಿ ಅಭಿನಂದಿಸಿದರು.

ಇದನ್ನೂ ಓದಿ: ನಕಲಿ ಡೆಪ್ಯೂಟಿ ಕಮಿಷರ್ ವೇಷದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಕೋಟಿಗಟ್ಟಲೇ ವಂಚಿಸಿದವ ಅಂದರ್

ಮಂಗಳೂರು : ನಗರದ ಬಂಗ್ರ ಕೂಳೂರು ಹಾಗೂ ಕೋಡಿಕಲ್ ಪ್ರದೇಶದ ನಾಗಬನಕ್ಕೆ ಅಕ್ರಮ ಪ್ರವೇಶ ಮಾಡಿದ್ದಲ್ಲದೇ ಅಲ್ಲಿನ ನಾಗರ ಕಲ್ಲು ಧ್ವಂಸಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ನಾಗಬನ ಧ್ವಂಸ ಪ್ರಕರಣ.. ಮಂಗಳೂರು ಪೊಲೀಸ್ ಆಯುಕ್ತ ಎನ್‌ ಶಶಿಕುಮಾರ್ ಮಾಹಿತಿ ನೀಡಿರುವುದು..

ಕಾವೂರು ಶಾಂತಿ ನಗರ ನಿವಾಸಿಗಳಾದ ಸಫ್ವಾನ್(25), ಮೊಹಮ್ಮದ್ ಸುಹೈಬ್(23), ನಿಖಿಲೇಶ್(22), ಪಂಜಿಮೊಗರು ನಿವಾಸಿ ಪ್ರವೀಣ್ ಅನಿಲ್ ಮೊಂತೆರೊ(27), ಸುರತ್ಕಲ್ ನಿವಾಸಿ ಜಯಂತ್ ಕುಮಾರ್(30), ಬಂಟ್ವಾಳ ತಾಲೂಕಿನ ಪಡೂರು ಗ್ರಾಮದ ಪ್ರತೀಕ್(24), ಕೂಳೂರು ಪಡುಕೋಡಿ ಗ್ರಾಮದ ಮಂಜುನಾಥ(30) ಹಾಗೂ ಹಾಸನ ಜಿಲ್ಲೆ ಬೇಳೂರು ಗ್ರಾಮ ಮೂಲದ ನೌಷಾದ್ ಅರೇಹಳ್ಳಿ( 30) ಬಂಧಿತ ಆರೋಪಿಗಳು.

ಆರೋಪಿಗಳು ಕೋಮುಗಲಭೆ ಸೃಷ್ಟಿಸಿ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹುನ್ನಾರದಿಂದ ನಾಗರಕಲ್ಲನ್ನು ಧ್ವಂಸಗೈದಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಪ್ರಕರಣದ ಪ್ರಮುಖ ಆರೋಪಿ‌ ಪ್ರವೀಣ್ ಅನಿಲ್ ಮೊಂತೆರೋ 10 ಸಾವಿರ ರೂ. ಆಮಿಷವೊಡ್ಡಿ ಈ ವಿಧ್ವಂಸಕ ಕೃತ್ಯ ಎಸಗಲು‌ ಸಫ್ವಾನ್ ಎಂಬ ಆರೋಪಿಯೊಂದಿಗೆ ಚರ್ಚಿಸಿದ್ದಾನೆ. ಆ ಬಳಿಕ‌ ಎಲ್ಲರೂ ಸೇರಿ ರಾತ್ರಿ ವೇಳೆ ಕೃತ್ಯ ಎಸಗಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಮಾಹಿತಿ ನೀಡಿದ್ಧಾರೆ.

ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿರುವ ಪೊಲೀಸ್ ತಂಡಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. 25 ಸಾವಿರ ರೂ. ಬಹುಮಾನ ನೀಡಿ ಅಭಿನಂದಿಸಿದರು.

ಇದನ್ನೂ ಓದಿ: ನಕಲಿ ಡೆಪ್ಯೂಟಿ ಕಮಿಷರ್ ವೇಷದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಕೋಟಿಗಟ್ಟಲೇ ವಂಚಿಸಿದವ ಅಂದರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.