ETV Bharat / city

ಸಿಹಿನೀರು ಘಟಕಕ್ಕೆ ನುಗ್ಗಿದ ಸಮುದ್ರ ನೀರು; ಶಾಸಕ ಡಾ. ಭರತ್ ಶೆಟ್ಟಿ ಪರಿಶೀಲನೆ

author img

By

Published : Aug 7, 2020, 8:24 PM IST

ಎಂಆರ್​ಪಿಎಲ್ ಸಂಸ್ಥೆಯು ತಣ್ಣೀರುಬಾವಿ ಕಡಲತೀರದಲ್ಲಿ ನಿರ್ಮಿಸುತ್ತಿರುವ ಸಿಹಿನೀರಿನ ಘಟಕಕ್ಕೆ ಸಮುದ್ರದ ನೀರು ನುಗ್ಗಿದ್ದು, ಸ್ಥಳಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು.

MLA Dr. Bharat Shetty visit  To Tannirbhavi beach
ಸಿಹಿನೀರು ಘಟಕಕ್ಕೆ ನುಗ್ಗಿದ ಸಮುದ್ರ ನೀರು: ಸ್ಥಳಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಭೇಟಿ, ಪರಿಶೀಲನೆ

ಮಂಗಳೂರು: ಎಂಆರ್​ಪಿಎಲ್ ಸಂಸ್ಥೆಯು ತಣ್ಣೀರುಬಾವಿ ಕಡಲತೀರದಲ್ಲಿ ನಿರ್ಮಿಸುತ್ತಿರುವ ಸಿಹಿನೀರಿನ ಘಟಕಕ್ಕೆ ಸಮುದ್ರದ ನೀರು ನುಗ್ಗಿದ್ದು, ಸ್ಥಳೀಯ ಮೂರು ಮನೆಗಳು ಅಪಾಯದ ಅಂಚಿನಲ್ಲಿವೆ. ಹೀಗಾಗಿ ಸ್ಥಳಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ ನೀಡಿ ಅಧಿಕಾರಿಗಳು ಕೈಗೊಂಡ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಿದರು.

ಸಿಹಿನೀರು ಘಟಕಕ್ಕೆ ನುಗ್ಗಿದ ಸಮುದ್ರ ನೀರು: ಸ್ಥಳಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಭೇಟಿ, ಪರಿಶೀಲನೆ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಸಮುದ್ರ ನೀರು ಉಕ್ಕೇರಿದ್ದು, ಕಡಲ್ಕೊರೆತ ಉಂಟಾಗುತ್ತಿದೆ. ಹೀಗಾಗಿ, ಸಮುದ್ರದಂಚಿನಲ್ಲಿ ನಿರ್ಮಾಣವಾಗುತ್ತಿರುವ ಸಿಹಿ ನೀರಿನ ಘಟಕದ ಒಂದು ಬದಿಯಲ್ಲಿ ನೀರು ನುಗ್ಗಿದೆ. ಇದೀಗ ತಡೆಗೋಡೆಗೆ ಅಪಾಯವಿದ್ದು, ಅದರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಿದೆ. ಸ್ಥಳೀಯ ಮನೆಗಳ ಬಳಿಯಿರುವ ತಡೆಗೋಡೆಯನ್ನು ಭದ್ರಗೊಳಿಸಲು ಸೂಚಿಸಲಾಗಿದೆ ಎಂದರು.

ಇನ್ನು, ಅಪಾಯದ ಕುರಿತು ಸ್ಥಳೀಯ ನಿವಾಸಿಗಳಿಗೆ ಮಾಹಿತಿ ನೀಡಲಾಗಿದ್ದು, ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಲಾಗಿದೆ. ಪಣಂಬೂರು, ಚಿತ್ರಾಪುರ ಸುತ್ತಮುತ್ತ ಕಡಲ್ಕೊರೆತ ತಡೆಗೆ ಕ್ರಮ ಕೈಗೊಳ್ಳುವ ಕುರಿತು ಕಂದಾಯ ಸಚಿವ ಆರ್. ಅಶೋಕ್ ಹಾಗೂ ನಾನು ಶನಿವಾರ ಭೇಟಿ ನೀಡಿ, ತುರ್ತುಕ್ರಮ ಕೈಗೊಳ್ಳುವ ಬಗ್ಗೆ ಯೋಜನೆ ರೂಪಿಸಲಾಗುವುದು ಎಂದರು.

ಮಂಗಳೂರು: ಎಂಆರ್​ಪಿಎಲ್ ಸಂಸ್ಥೆಯು ತಣ್ಣೀರುಬಾವಿ ಕಡಲತೀರದಲ್ಲಿ ನಿರ್ಮಿಸುತ್ತಿರುವ ಸಿಹಿನೀರಿನ ಘಟಕಕ್ಕೆ ಸಮುದ್ರದ ನೀರು ನುಗ್ಗಿದ್ದು, ಸ್ಥಳೀಯ ಮೂರು ಮನೆಗಳು ಅಪಾಯದ ಅಂಚಿನಲ್ಲಿವೆ. ಹೀಗಾಗಿ ಸ್ಥಳಕ್ಕೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ ನೀಡಿ ಅಧಿಕಾರಿಗಳು ಕೈಗೊಂಡ ಮುಂಜಾಗ್ರತಾ ಕ್ರಮದ ಬಗ್ಗೆ ಮಾಹಿತಿ ನೀಡಿದರು.

ಸಿಹಿನೀರು ಘಟಕಕ್ಕೆ ನುಗ್ಗಿದ ಸಮುದ್ರ ನೀರು: ಸ್ಥಳಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಭೇಟಿ, ಪರಿಶೀಲನೆ

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಸಮುದ್ರ ನೀರು ಉಕ್ಕೇರಿದ್ದು, ಕಡಲ್ಕೊರೆತ ಉಂಟಾಗುತ್ತಿದೆ. ಹೀಗಾಗಿ, ಸಮುದ್ರದಂಚಿನಲ್ಲಿ ನಿರ್ಮಾಣವಾಗುತ್ತಿರುವ ಸಿಹಿ ನೀರಿನ ಘಟಕದ ಒಂದು ಬದಿಯಲ್ಲಿ ನೀರು ನುಗ್ಗಿದೆ. ಇದೀಗ ತಡೆಗೋಡೆಗೆ ಅಪಾಯವಿದ್ದು, ಅದರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಿದೆ. ಸ್ಥಳೀಯ ಮನೆಗಳ ಬಳಿಯಿರುವ ತಡೆಗೋಡೆಯನ್ನು ಭದ್ರಗೊಳಿಸಲು ಸೂಚಿಸಲಾಗಿದೆ ಎಂದರು.

ಇನ್ನು, ಅಪಾಯದ ಕುರಿತು ಸ್ಥಳೀಯ ನಿವಾಸಿಗಳಿಗೆ ಮಾಹಿತಿ ನೀಡಲಾಗಿದ್ದು, ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಲಾಗಿದೆ. ಪಣಂಬೂರು, ಚಿತ್ರಾಪುರ ಸುತ್ತಮುತ್ತ ಕಡಲ್ಕೊರೆತ ತಡೆಗೆ ಕ್ರಮ ಕೈಗೊಳ್ಳುವ ಕುರಿತು ಕಂದಾಯ ಸಚಿವ ಆರ್. ಅಶೋಕ್ ಹಾಗೂ ನಾನು ಶನಿವಾರ ಭೇಟಿ ನೀಡಿ, ತುರ್ತುಕ್ರಮ ಕೈಗೊಳ್ಳುವ ಬಗ್ಗೆ ಯೋಜನೆ ರೂಪಿಸಲಾಗುವುದು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.