ETV Bharat / city

ಮಾನಸಿಕ ಅಸ್ವಸ್ಥನ ಮೇಲೆ ಪೊಲೀಸ್​ ಹಲ್ಲೆ ಆರೋಪ: ಜನರ ಆಕ್ರೋಶ - undefined

ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮಾನಸಿಕ ಅಸ್ವಸ್ಥನ ಮೇಲೆ ಪೊಲೀಸ್​ ಹಲ್ಲೆ ನಡೆಸಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ

ಮಾನಸಿಕ ಅಸ್ವಸ್ಥನ ಮೇಲೆ ಪೊಲೀಸ್​ ಹಲ್ಲೆ
author img

By

Published : Apr 21, 2019, 9:30 PM IST

ಮಂಗಳೂರು: ಮಾನಸಿಕ ಅಸ್ವಸ್ಥನನ್ನು ಪೋಲೀಸ್ ಪೇದೆಯೊಬ್ಬರು ಅಮಾನವೀಯವಾಗಿ ಲಾಠಿಯಿಂದ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ‌.

ಕಡಬ ಜಾತ್ರೆ ಸಂದರ್ಭ ಮುಖ್ಯ ರಸ್ತೆಯಲ್ಲಿ ದೇವರ ಮೆರವಣಿಗೆ ಸಾಗುತ್ತಿದ್ದ ವೇಳೆ, ಮಾನಸಿಕ ಅಸ್ವಸ್ಥನಿಗೆ ಪೇದೆ ಲಾಠಿಯಿಂದ ಹೊಡೆಯುತ್ತಿರುವ ದೃಶ್ಯ ಸೆರೆಯಾಗಿದೆ.

ಮಾನಸಿಕ ಅಸ್ವಸ್ಥನ ಮೇಲೆ ಪೊಲೀಸ್​ ಹಲ್ಲೆ

ಮಾನಸಿಕ ಅಸ್ವಸ್ಥನಾಗಿದ್ದ ಈ ವೃದ್ಧ ಯಾರಿಗೋ ಬೈಯುತ್ತ ಕೈಯಲ್ಲಿ ಕಲ್ಲು ಹಿಡಿದುಕೊಂದಿದ್ದ ಎನ್ನುವ ಕಾರಣಕ್ಕೆ ಪೇದೆ ಆತನಿಗೆ ಲಾಠಿಯಿಂದ ಹೊಡೆದಿದ್ದಾರೆ. ಬಿರು ಬಿಸಿಲಿನಲ್ಲಿ ನೆಲಕ್ಕೆ ಕೆಡವಿ ಕಾಲಿನಿಂದ ಒದ್ದಿರುವ ದೃಶ್ಯಗಳು ವಿಡಿಯೋದಲ್ಲಿದ್ದು, ಈ ಘಟನೆ ಇದೀಗ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ವೃದ್ಧನ ಮೇಲೆ ಹಲ್ಲೆ ಮಾಡಿದ ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಪಂಪಾಪತಿ ವಿರುದ್ಧ ಮೇಲಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಇದೇ ಸುದ್ದಿ ಹರಿದಾಡುತ್ತಿದೆ.

ಮಂಗಳೂರು: ಮಾನಸಿಕ ಅಸ್ವಸ್ಥನನ್ನು ಪೋಲೀಸ್ ಪೇದೆಯೊಬ್ಬರು ಅಮಾನವೀಯವಾಗಿ ಲಾಠಿಯಿಂದ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ‌.

ಕಡಬ ಜಾತ್ರೆ ಸಂದರ್ಭ ಮುಖ್ಯ ರಸ್ತೆಯಲ್ಲಿ ದೇವರ ಮೆರವಣಿಗೆ ಸಾಗುತ್ತಿದ್ದ ವೇಳೆ, ಮಾನಸಿಕ ಅಸ್ವಸ್ಥನಿಗೆ ಪೇದೆ ಲಾಠಿಯಿಂದ ಹೊಡೆಯುತ್ತಿರುವ ದೃಶ್ಯ ಸೆರೆಯಾಗಿದೆ.

ಮಾನಸಿಕ ಅಸ್ವಸ್ಥನ ಮೇಲೆ ಪೊಲೀಸ್​ ಹಲ್ಲೆ

ಮಾನಸಿಕ ಅಸ್ವಸ್ಥನಾಗಿದ್ದ ಈ ವೃದ್ಧ ಯಾರಿಗೋ ಬೈಯುತ್ತ ಕೈಯಲ್ಲಿ ಕಲ್ಲು ಹಿಡಿದುಕೊಂದಿದ್ದ ಎನ್ನುವ ಕಾರಣಕ್ಕೆ ಪೇದೆ ಆತನಿಗೆ ಲಾಠಿಯಿಂದ ಹೊಡೆದಿದ್ದಾರೆ. ಬಿರು ಬಿಸಿಲಿನಲ್ಲಿ ನೆಲಕ್ಕೆ ಕೆಡವಿ ಕಾಲಿನಿಂದ ಒದ್ದಿರುವ ದೃಶ್ಯಗಳು ವಿಡಿಯೋದಲ್ಲಿದ್ದು, ಈ ಘಟನೆ ಇದೀಗ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ವೃದ್ಧನ ಮೇಲೆ ಹಲ್ಲೆ ಮಾಡಿದ ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಪಂಪಾಪತಿ ವಿರುದ್ಧ ಮೇಲಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲೂ ಇದೇ ಸುದ್ದಿ ಹರಿದಾಡುತ್ತಿದೆ.

Intro:ಪುತ್ತೂರು: ಪೋಲೀಸ್ ಪೇದೆಯೊಬ್ಬ
ಮಾನಸಿಕ ಅಸ್ವಸ್ಥ ವೃದ್ಧನ ಮೇಲೆ ಅಮಾನವೀಯವಾಗಿ ವರ್ತಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ‌.

ಕಡಬ ಜಾತ್ರೆಯ ಪ್ರಯುಕ್ತ ದೇವರ ಮೆರವಣಿಗೆ ಕಡಬ ಪೇಟೆಯ ಮುಖ್ಯ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಮಾನಸಿಕ ಅಸ್ವಸ್ಥನಾಗಿದ್ದ ಈ ವೃದ್ಧ ಯಾರಿಗೋ ಬೈಯುತ್ತ ಕೈಯಲ್ಲಿ ಕಲ್ಲು ಹಿಡಿದುಕೊಂದಿದ್ದ ಎನ್ನುವ ಕಾರಣಕ್ಕೆ ಆತನನ್ನು ಲಾಠಿ ಯಿಂದ ಹೊಡೆದು ಬಿರು ಬಿಸಿಲಿನಲ್ಲಿ ನೆಲಕ್ಕೆ ಕೆಡವಿ ಕಾಲಿನಿಂದ ತುಳಿದಿದ್ದ ಇದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

Body:ವೃದ್ಧನ ಮೇಲೆ ಕ್ರೌರ್ಯ ಮೆರೆದ ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಪಂಪಾಪತಿ ವಿರುದ್ಧ ಆತನ ಮೇಲಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎನ್ನುವ ಆಗ್ರಹ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ವೃದ್ಧ ಹಾಗೂ ಮಾನಸಿಕ ಎನ್ನುವ ಸೌಜನ್ಯವನ್ನೂ ತೋರಿಸದ ಈ ಪೊಲೀಸ್ ಪೇದೆಯ ಮೇಲೆ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಸಾಮಾಜಿಕ ಜಾಲತಾಣದಲ್ಲೂ ಕೇಳಲಾರಂಭಿಸಿದೆ.

Reporter_Vishwanath PanjimogaruConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.