ETV Bharat / city

ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ

ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಅಸಮರ್ಪಕ ಕಾಮಗಾರಿ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಕರೆ ನೀಡಿದ್ದ ರಸ್ತೆ ತಡೆ ಹಾಗೂ ಪ್ರತಿಭಟನೆಗೆ 23 ಕ್ಕೂ ಹೆಚ್ಚಿನ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು, ಚರ್ಚ್, ಮಸೀದಿ, ದೇವಸ್ಥಾನಗಳಿಂದಲೂ ಬೆಂಬಲ ನೀಡಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.

author img

By

Published : Oct 10, 2019, 2:59 PM IST

ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ

ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಅಸಮರ್ಪಕ ಕಾಮಗಾರಿ ವಿರೋಧಿಸಿ ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಕರೆ ನೀಡಿದ್ದ ರಸ್ತೆ ತಡೆ ಹಾಗೂ ಪ್ರತಿಭಟನೆಗೆ 23ಕ್ಕೂ ಹೆಚ್ಚಿನ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು, ಚರ್ಚ್, ಮಸೀದಿ, ದೇವಸ್ಥಾನಗಳಿಂದಲೂ ಬೆಂಬಲ ನೀಡಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆ ನಡೆಯುವ ಸ್ಧಳದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಉಪ್ಪಿನಂಗಡಿ, ಪುತ್ತೂರು, ನೆಲ್ಯಾಡಿ, ಬೆಳ್ಳಾರೆ, ಸಂಪ್ಯ ಪೊಲೀಸರಿಂದ ಬಿಗಿ ಭದ್ರತೆ ವಹಿಸಲಾಗಿತ್ತು.

ಪ್ರತಿಭಟನೆಯಲ್ಲಿ ಮಾತನಾಡಿದ ಪ್ರಮುಖರು ಕೂಡಲೇ ರಸ್ತೆ ಕಾಮಗಾರಿ ಆರಂಭಿಸಬೇಕು. ಇಲ್ಲದೇ ಹೋದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಭವಿಸುವ ಪ್ರತಿಯೊಂದು ದುರಂತಗಳಿಗೂ ಹೊಣೆ, ಹೆದ್ದಾರಿ ಪ್ರಾಧಿಕಾರವೇ ಆಗಿರುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಧಳಕಾಗಮಿಸಿ ಮನವಿ ಸ್ವೀಕರಿಸಿ ಕೂಡಲೇ ಎರಡು ತಿಂಗಳುಗಳ ಒಳಗಡೆ ರಸ್ತೆ ಸರಿಪಡಿಸುವ ಭರವಸೆ ನೀಡಿದ ನಂತರ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಉಪ್ಪಿನಂಗಡಿ ಪೊಲೀಸರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸುವ ಭರವಸೆ ನೀಡಿದ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಲಿಲ್ಲ.

ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಅಸಮರ್ಪಕ ಕಾಮಗಾರಿ ವಿರೋಧಿಸಿ ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಕರೆ ನೀಡಿದ್ದ ರಸ್ತೆ ತಡೆ ಹಾಗೂ ಪ್ರತಿಭಟನೆಗೆ 23ಕ್ಕೂ ಹೆಚ್ಚಿನ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು, ಚರ್ಚ್, ಮಸೀದಿ, ದೇವಸ್ಥಾನಗಳಿಂದಲೂ ಬೆಂಬಲ ನೀಡಲಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಪ್ರತಿಭಟನೆ ನಡೆಯುವ ಸ್ಧಳದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಉಪ್ಪಿನಂಗಡಿ, ಪುತ್ತೂರು, ನೆಲ್ಯಾಡಿ, ಬೆಳ್ಳಾರೆ, ಸಂಪ್ಯ ಪೊಲೀಸರಿಂದ ಬಿಗಿ ಭದ್ರತೆ ವಹಿಸಲಾಗಿತ್ತು.

ಪ್ರತಿಭಟನೆಯಲ್ಲಿ ಮಾತನಾಡಿದ ಪ್ರಮುಖರು ಕೂಡಲೇ ರಸ್ತೆ ಕಾಮಗಾರಿ ಆರಂಭಿಸಬೇಕು. ಇಲ್ಲದೇ ಹೋದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಭವಿಸುವ ಪ್ರತಿಯೊಂದು ದುರಂತಗಳಿಗೂ ಹೊಣೆ, ಹೆದ್ದಾರಿ ಪ್ರಾಧಿಕಾರವೇ ಆಗಿರುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಧಳಕಾಗಮಿಸಿ ಮನವಿ ಸ್ವೀಕರಿಸಿ ಕೂಡಲೇ ಎರಡು ತಿಂಗಳುಗಳ ಒಳಗಡೆ ರಸ್ತೆ ಸರಿಪಡಿಸುವ ಭರವಸೆ ನೀಡಿದ ನಂತರ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಉಪ್ಪಿನಂಗಡಿ ಪೊಲೀಸರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸುವ ಭರವಸೆ ನೀಡಿದ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿ ತಡೆ ಮಾಡಲಿಲ್ಲ.

Intro:ನೆಲ್ಯಾಡಿ

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಅಸಮರ್ಪಕ ಕಾಮಗಾರಿ ಹಿನ್ನೆಲೆಯಲ್ಲಿ ನೆಲ್ಯಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿಯಿಂದ ರಸ್ತೆ ತಡೆ ಹಾಗೂ ಪ್ರತಿಭಟನೆಗೆ ಕರೆ ನೀಡಲಾಗಿತ್ತು.
ಪ್ರತಿಭಟನೆಯಲ್ಲಿ 23 ಕ್ಕೂ ಹೆಚ್ಚಿನ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು,ಚರ್ಚ್, ಮಸೀದಿ, ದೇವಸ್ಥಾನಗಳಿಂದಲೂ ಬೆಂಬಲ ನೀಡಲಾಗಿತ್ತು.
ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನೆಗೆ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ಪ್ರಮುಖರು ಕೂಡಲೇ ರಸ್ತೆ ಕಾಮಗಾರಿ ಆರಂಭಿಸಬೇಕು ಇಲ್ಲದೇ ಹೋದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಭವಿಸುವ ಪ್ರತಿಯೊಂದು ದುರಂತಗಳಿಗೂ ಹೊಣೆ ಹೆದ್ದಾರಿ ಪ್ರಾಧಿಕಾರವೇ ಆಗಿರುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಲಾಯಿತ್ತು.
ಪ್ರತಿಭಟನೆ ನಡೆಯುವ ಸ್ಧಳದಲ್ಲಿ ಬಿಗಿ ಪೋಲಿಸ್ ಭದ್ರತೆ ಏರ್ಪಡಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಧಳಕಾಗಮಿಸಿ ಮನವಿ ಸ್ವೀಕರಿಸಿ ಕೂಡಲೇ ಎರಡು ತಿಂಗಳುಗಳ ಒಳಗಡೆ ರಸ್ತೆ ಸರಿಪಡಿಸುವ ಭರವಸೆ ನೀಡಿದ ನಂತರ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಉಪ್ಪಿನಂಗಡಿ ಪೋಲೀಸರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸುವ ಭರವಸೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ಕಾರ್ಯಕ್ರಮ ನಡೆಸಲಿಲ್ಲ.
ಉಪ್ಪಿನಂಗಡಿ,ಪುತ್ತೂರು, ನೆಲ್ಯಾಡಿ ,ಬೆಳ್ಳಾರೆ,ಸಂಪ್ಯ ಪೋಲೀಸರಿಂದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿತ್ತು.Body:ನೆಲ್ಯಾಡಿ ಪ್ರತಿಭಟನೆ Conclusion:ಪ್ರಕಾಶ್ ಕಡಬ, ಸುಳ್ಯ(ಮಂಗಳೂರು)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.