ಮಂಗಳೂರು: ಲಕ್ಷದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ. ಕಡಲು ಕೂಡ ಪ್ರಕ್ಷುದ್ಧಗೊಂಡಿದ್ದು, ಅಲೆಗಳ ಅಬ್ಬರವೂ ಹೆಚ್ಚಾಗಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ನಾಳೆಯೊಳಗೆ ಮುಂಗಾರು ತೀವ್ರಗೊಳ್ಳಲಿದ್ದು, ಚಂಡಮಾರುತ ಬೀಸುವ ಸಂಭವವಿದೆ. ಮುಂಗಾರು ಪ್ರವೇಶ ಹಾಗೂ ಚಂಡಮಾರುತದ ಹಿನ್ನೆಲೆ ಕರಾವಳಿಯಲ್ಲಿ ಭಾರಿ ಗಾಳಿ ಬೀಸುತ್ತಿದೆ.
ಪಣಂಬೂರು, ತಣ್ಣೀರುಬಾವಿ, ಉಳ್ಳಾಲ ಹಾಗೂ ಸೋಮೇಶ್ವರ ಸಮುದ್ರ ತೀರಗಳಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ಪ್ರವಾಸಿಗರಿಗೆ ಸಮುದ್ರಕ್ಕಿಳಿದು ಆಟವಾಡುವುದನ್ನು ನಿಷೇಧಿಸಲಾಗಿದೆ. ಅಲ್ಲದೆ ಲೈಫ್ಗಾರ್ಡ್ಗಳಿಗೆ ನಿಗಾ ಇಡಲು ಸೂಚಿಸಲಾಗಿದೆ.