ETV Bharat / city

53 ದೇಗುಲಗಳ ಸಿಬ್ಬಂದಿಗೆ 6ನೇ ವೇತನ ಆಯೋಗದಂತೆ ಸಂಬಳ: ಸಚಿವ ಕೋಟ ಶ್ರೀನಿವಾಸ ಪೂಜಾರಿ - ಆರನೇ ವೇತನ ಆಯೋಗ

ರಾಜ್ಯದ 53 ದೇವಸ್ಥಾನಗಳಲ್ಲಿನ ಸಿಬ್ಬಂದಿಗಳಿಗೆ ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ನೀಡಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ .

ಸಚಿವ ಕೋಟ ಶ್ರೀನಿವಾಸ ಪೂಜಾರಿ
author img

By

Published : Nov 21, 2019, 7:32 PM IST

ಮಂಗಳೂರು: ರಾಜ್ಯದ 53 ದೇವಸ್ಥಾನಗಳಲ್ಲಿನ ಸಿಬ್ಬಂದಿಗೆ ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ನೀಡಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ .

53 ದೇವಸ್ಥಾನಗಳ ಸಿಬ್ಬಂದಿಗೆ ಆರನೇ ವೇತನ ಆಯೋಗದಂತೆ ವೇತನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ದೇವಸ್ಥಾನಗಳ ಆದಾಯದ 35 ಶೇಕಡಾ ಮೀರದಂತೆ ವೇತನ ನೀಡುವಂತೆ ನಿಯಮವಿದೆ. ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ನೀಡುವಂತೆ ಸಿಬ್ಬಂದಿ ಹಲವು ಸಮಯದಿಂದ ಒತ್ತಾಯಿಸಿದ್ದಾರೆ. ಅದರಂತೆ 53 ದೇವಸ್ಥಾನದ ಸಿಬ್ಬಂದಿಗೆ ಆರನೇ ವೇತನ ನೀಡಲು ನಿರ್ಧರಿಸಲಾಗಿದೆ. ಇದರಿಂದ 1100 ಸಿಬ್ಬಂದಿ ಪ್ರಯೋಜನ ಪಡೆಯಲಿದ್ದಾರೆ ಎಂದರು.

ಇನ್ನು, 100 ದೇವಸ್ಥಾನಗಳಲ್ಲಿ ಸಾಮೂಹಿಕ ಮದುವೆ ಮಾಡಲು ನಿರ್ಧರಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಇರುವುದರಿಂದ ನೀತಿ ಸಂಹಿತೆ ಇರುವ ಪ್ರದೇಶಗಳ ದೇವಸ್ಥಾನದ ಪಟ್ಟಿಯನ್ನು ಚುನಾವಣಾ ಆಯೋಗದ ಅನುಮತಿ ಪಡೆದು ಪ್ರಕಟಿಸಲಾಗುವುದು. ಈ ವರ್ಷದಲ್ಲಿ 1 ಸಾವಿರ ಜೋಡಿಗಳಿಗೆ ಸಾಮೂಹಿಕ ಮದುವೆ ನಡೆಯುವ ವಿಶ್ವಾಸವಿದೆ ಎಂದರು.

ಮಂಗಳೂರು: ರಾಜ್ಯದ 53 ದೇವಸ್ಥಾನಗಳಲ್ಲಿನ ಸಿಬ್ಬಂದಿಗೆ ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ನೀಡಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ .

53 ದೇವಸ್ಥಾನಗಳ ಸಿಬ್ಬಂದಿಗೆ ಆರನೇ ವೇತನ ಆಯೋಗದಂತೆ ವೇತನ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ದೇವಸ್ಥಾನಗಳ ಆದಾಯದ 35 ಶೇಕಡಾ ಮೀರದಂತೆ ವೇತನ ನೀಡುವಂತೆ ನಿಯಮವಿದೆ. ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ನೀಡುವಂತೆ ಸಿಬ್ಬಂದಿ ಹಲವು ಸಮಯದಿಂದ ಒತ್ತಾಯಿಸಿದ್ದಾರೆ. ಅದರಂತೆ 53 ದೇವಸ್ಥಾನದ ಸಿಬ್ಬಂದಿಗೆ ಆರನೇ ವೇತನ ನೀಡಲು ನಿರ್ಧರಿಸಲಾಗಿದೆ. ಇದರಿಂದ 1100 ಸಿಬ್ಬಂದಿ ಪ್ರಯೋಜನ ಪಡೆಯಲಿದ್ದಾರೆ ಎಂದರು.

ಇನ್ನು, 100 ದೇವಸ್ಥಾನಗಳಲ್ಲಿ ಸಾಮೂಹಿಕ ಮದುವೆ ಮಾಡಲು ನಿರ್ಧರಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಇರುವುದರಿಂದ ನೀತಿ ಸಂಹಿತೆ ಇರುವ ಪ್ರದೇಶಗಳ ದೇವಸ್ಥಾನದ ಪಟ್ಟಿಯನ್ನು ಚುನಾವಣಾ ಆಯೋಗದ ಅನುಮತಿ ಪಡೆದು ಪ್ರಕಟಿಸಲಾಗುವುದು. ಈ ವರ್ಷದಲ್ಲಿ 1 ಸಾವಿರ ಜೋಡಿಗಳಿಗೆ ಸಾಮೂಹಿಕ ಮದುವೆ ನಡೆಯುವ ವಿಶ್ವಾಸವಿದೆ ಎಂದರು.

Intro:ಮಂಗಳೂರು: ರಾಜ್ಯದ 53 ದೇವಸ್ಥಾನಗಳಲ್ಲಿನ ಸಿಬ್ಬಂದಿಗಳಿಗೆ ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ನೀಡಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.



Body:ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇವಸ್ಥಾನಗಳ ಆದಾಯದ 35 ಶೇಕಡಾ ಮೀರದಂತೆ ವೇತನ ನೀಡುವಂತೆ ನಿಯಮವಿದೆ. ಆರನೇ ವೇತನ ಆಯೋಗದ ಶಿಪಾರಸ್ಸಿನಂತೆ ವೇತನ ನೀಡುವಂತೆ ಸಿಬ್ಬಂದಿಗಳು ಹಲವು ಸಮಯದಿಂದ ಒತ್ತಾಯಿಸಿದ್ದಾರೆ. ಅದರಂತೆ 53 ದೇವಸ್ಥಾನದ ಸಿಬ್ಬಂದಿಗಳಿಗೆ ಆರನೇ ವೇತನ ನೀಡಲು ನಿರ್ಧರಿಸಲಾಗಿದೆ. ಇದರಿಂದ 1100 ಸಿಬ್ಬಂದಿಗಳು ಪ್ರಯೋಜನ ಪಡೆಯಲಿದ್ದಾರೆ ಎಂದರು.
100 ದೇವಸ್ಥಾನಗಳಲ್ಲಿ ಸಾಮೂಹಿಕ ಮದುವೆ ಮಾಡಲು ನಿರ್ಧರಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಇರುವುದರಿಂದ ನೀತಿ ಸಂಹಿತೆ ಇರುವ ಪ್ರದೇಶಗಳ ದೇವಸ್ಥಾನ ಉಳಿದ ದೇವಸ್ಥಾನದ ಪಟ್ಟಿಯನ್ನು ಚುನಾವಣಾ ಆಯೋಗದ ಅನುಮತಿ ಪಡೆದು ಪ್ರಕಟಿಸಲಾಗುವುದು ಎಂದರು. ಈ ವರ್ಷದಲ್ಲಿ 1 ಸಾವಿರ ಜೋಡಿಗಳಿಗೆ ಸಾಮೂಹಿಕ ಮದುವೆ ನಡೆಯುವ ವಿಶ್ವಾಸವಿದೆ ಎಂದರು.
ಬೈಟ್- ಕೋಟ ಶ್ರೀನಿವಾಸ ಪೂಜಾರಿ, ಮುಜರಾಯಿ ಸಚಿವರು




Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.