ETV Bharat / city

ಹಿಜಾಬ್ ವಿವಾದ.. 16 ವಿದ್ಯಾರ್ಥಿನಿಯರಿಗೆ ಕಾಲೇಜ್​​ ಪ್ರವೇಶ ನಿರಾಕರಣೆ, 6 ವಿದ್ಯಾರ್ಥಿನಿಯರು ಅಮಾನತು​​!

author img

By

Published : Jun 2, 2022, 1:27 PM IST

Updated : Jun 2, 2022, 2:04 PM IST

Hijab row in Mangaluru: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹಿಜಾಬ್ ಧರಿಸಿ ಬಂದಿದ್ದ 22 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳಿಗೆ ಕಾಲೇಜ್​ ಪ್ರವೇಶ ನಿರಾಕರಿಸಿದ್ರೆ, ಇನ್ನುಳಿದ 6 ವಿದ್ಯಾರ್ಥಿಗಳನ್ನು ಅಮಾನತು​ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

Six students debar over hijab issue, Six students debar over hijab issue in Mangaluru, Mangaluru hijab news, ಹಿಜಾಬ್ ವಿಚಾರವಾಗಿ ಆರು ವಿದ್ಯಾರ್ಥಿಗಳು ಡಿಬಾರ್, ಮಂಗಳೂರಿನಲ್ಲಿ ಹಿಜಾಬ್ ವಿಚಾರವಾಗಿ ವಿದ್ಯಾರ್ಥಿಗಳು ಡಿಬಾರ್, ಮಂಗಳೂರು ಹಿಜಾಬ್ ಸುದ್ದಿ,
ಮಂಗಳೂರಿನಲ್ಲಿ ಹಿಜಾಬ್ ವಿವಾದ

ಮಂಗಳೂರು: ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ ಧರಿಸಲು ನಿರ್ಬಂಧ ಹೇರಿರುವ ಮಧ್ಯೆಯೇ ಇಂದು ಮತ್ತೆ 16 ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿಯೇ ಕಾಲೇಜಿಗೆ ಆಗಮಿಸಿದ್ದರು. ಆದ್ರೆ ಈ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶವನ್ನು ನಿರಾಕರಿಸಲಾಗಿದೆ. ಅಷ್ಟೇ ಅಲ್ಲದೇ ಉಪ್ಪಿನಂಗಡಿಯಲ್ಲಿ ಹಿಜಾಬ್ ನಿರ್ಬಂಧವನ್ನು ಉಲ್ಲಂಘಿಸಿದ ಆರು ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯ ಮಾಡಲಾಗಿತ್ತು. ಇದರ ವಿರುದ್ಧ 16 ವಿದ್ಯಾರ್ಥಿನಿಯರು ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ಹೋರಾಟ ನಡೆಸುತ್ತಿದ್ದರು. ಜಿಲ್ಲಾಧಿಕಾರಿ ಜೊತೆಗೆ ಕಳೆದ ಸೋಮವಾರ ನಡೆದ ಮಾತುಕತೆಯಲ್ಲಿ ಜಿಲ್ಲಾಧಿಕಾರಿಗಳು ಸಿಂಡಿಕೇಟ್ ನಿರ್ಧಾರವನ್ನು ಪಾಲಿಸಬೇಕು ಎಂದು ಸೂಚಿಸಿದ್ದರು.

ಓದಿ: ಬುರ್ಖಾ ಧರಿಸಿ ನೃತ್ಯ ಮಾಡಿದ ಯುವಕರು: ಮುಸ್ಲಿಂ ಮುಖಂಡರ ಆಕ್ಷೇಪ, ಖಂಡನೆ

ಜಿಲ್ಲಾಧಿಕಾರಿ ಹೇಳಿಕೆ ಬಳಿಕ ಆ ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮಿಸಿರಲಿಲ್ಲ. ಇಂದು ಮತ್ತೆ ಈ ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಿಸಿ ಆಗಮಿಸಿದ್ದರು. ಆದ್ರೆ ಪ್ರಾಂಶುಪಾಲರಾದ ಡಾ. ಅನಸೂಯ ರೈ ಅವರು ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರವೇಶ ನೀಡಲು ನಿರಾಕರಿಸಿದ್ದಾರೆ. ಪ್ರವೇಶ ನಿರಾಕರಣೆ ಹಿನ್ನೆಲೆ ವಿದ್ಯಾರ್ಥಿನಿಯರು ಕಾಲೇಜು ಲೈಬ್ರರಿ ಬಳಿ ಕುಳಿತುಕೊಂಡಿದ್ದರು.

ಉಪ್ಪಿನಂಗಡಿಯಲ್ಲಿ ಅಮಾನತು: ಉಪ್ಪಿನಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ನಿರ್ಬಂಧವನ್ನು ಸತತವಾಗಿ ಉಲ್ಲಂಘಿಸಿದ ಆರು ಮಂದಿ ವಿದ್ಯಾರ್ಥಿನಿಯರನ್ನು ಸಸ್ಪೆಂಡ್​ ಮಾಡಲಾಗಿದೆ. ಹಿಜಾಬ್ ಧರಿಸಿ ತರಗತಿಗೆ ಪ್ರವೇಶ ಮಾಡಬಾರದು ಎಂಬ ಸರ್ಕಾರ ಮತ್ತು ಹೈಕೋರ್ಟ್ ಆದೇಶವನ್ನು ಇವರು ಉಲ್ಲಂಘಿಸಿದ್ದರು. ಕಾಲೇಜು ಉಪನ್ಯಾಸಕರ ಸಭೆಯ ತೀರ್ಮಾನದಂತೆ ಆರು ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಅಮಾನತು ಮಾಡಿದ್ದಾರೆ.

ಮಂಗಳೂರು: ಮಂಗಳೂರು ವಿವಿ ಕಾಲೇಜಿನಲ್ಲಿ ಹಿಜಾಬ್ ಧರಿಸಲು ನಿರ್ಬಂಧ ಹೇರಿರುವ ಮಧ್ಯೆಯೇ ಇಂದು ಮತ್ತೆ 16 ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿಯೇ ಕಾಲೇಜಿಗೆ ಆಗಮಿಸಿದ್ದರು. ಆದ್ರೆ ಈ ವಿದ್ಯಾರ್ಥಿನಿಯರಿಗೆ ತರಗತಿ ಪ್ರವೇಶವನ್ನು ನಿರಾಕರಿಸಲಾಗಿದೆ. ಅಷ್ಟೇ ಅಲ್ಲದೇ ಉಪ್ಪಿನಂಗಡಿಯಲ್ಲಿ ಹಿಜಾಬ್ ನಿರ್ಬಂಧವನ್ನು ಉಲ್ಲಂಘಿಸಿದ ಆರು ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯ ಮಾಡಲಾಗಿತ್ತು. ಇದರ ವಿರುದ್ಧ 16 ವಿದ್ಯಾರ್ಥಿನಿಯರು ತರಗತಿಯಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ಹೋರಾಟ ನಡೆಸುತ್ತಿದ್ದರು. ಜಿಲ್ಲಾಧಿಕಾರಿ ಜೊತೆಗೆ ಕಳೆದ ಸೋಮವಾರ ನಡೆದ ಮಾತುಕತೆಯಲ್ಲಿ ಜಿಲ್ಲಾಧಿಕಾರಿಗಳು ಸಿಂಡಿಕೇಟ್ ನಿರ್ಧಾರವನ್ನು ಪಾಲಿಸಬೇಕು ಎಂದು ಸೂಚಿಸಿದ್ದರು.

ಓದಿ: ಬುರ್ಖಾ ಧರಿಸಿ ನೃತ್ಯ ಮಾಡಿದ ಯುವಕರು: ಮುಸ್ಲಿಂ ಮುಖಂಡರ ಆಕ್ಷೇಪ, ಖಂಡನೆ

ಜಿಲ್ಲಾಧಿಕಾರಿ ಹೇಳಿಕೆ ಬಳಿಕ ಆ ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮಿಸಿರಲಿಲ್ಲ. ಇಂದು ಮತ್ತೆ ಈ ವಿದ್ಯಾರ್ಥಿನಿಯರು ಕಾಲೇಜಿಗೆ ಹಿಜಾಬ್ ಧರಿಸಿ ಆಗಮಿಸಿದ್ದರು. ಆದ್ರೆ ಪ್ರಾಂಶುಪಾಲರಾದ ಡಾ. ಅನಸೂಯ ರೈ ಅವರು ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಪ್ರವೇಶ ನೀಡಲು ನಿರಾಕರಿಸಿದ್ದಾರೆ. ಪ್ರವೇಶ ನಿರಾಕರಣೆ ಹಿನ್ನೆಲೆ ವಿದ್ಯಾರ್ಥಿನಿಯರು ಕಾಲೇಜು ಲೈಬ್ರರಿ ಬಳಿ ಕುಳಿತುಕೊಂಡಿದ್ದರು.

ಉಪ್ಪಿನಂಗಡಿಯಲ್ಲಿ ಅಮಾನತು: ಉಪ್ಪಿನಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ನಿರ್ಬಂಧವನ್ನು ಸತತವಾಗಿ ಉಲ್ಲಂಘಿಸಿದ ಆರು ಮಂದಿ ವಿದ್ಯಾರ್ಥಿನಿಯರನ್ನು ಸಸ್ಪೆಂಡ್​ ಮಾಡಲಾಗಿದೆ. ಹಿಜಾಬ್ ಧರಿಸಿ ತರಗತಿಗೆ ಪ್ರವೇಶ ಮಾಡಬಾರದು ಎಂಬ ಸರ್ಕಾರ ಮತ್ತು ಹೈಕೋರ್ಟ್ ಆದೇಶವನ್ನು ಇವರು ಉಲ್ಲಂಘಿಸಿದ್ದರು. ಕಾಲೇಜು ಉಪನ್ಯಾಸಕರ ಸಭೆಯ ತೀರ್ಮಾನದಂತೆ ಆರು ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಅಮಾನತು ಮಾಡಿದ್ದಾರೆ.

Last Updated : Jun 2, 2022, 2:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.