ETV Bharat / city

ಮಂಗಳೂರಿನಲ್ಲಿ ಅಂಬೇಡ್ಕರ್ ಫ್ಲೆಕ್ಸ್​​ಗೆ ಹಾನಿ: ಇಬ್ಬರ ಬಂಧನ!

author img

By

Published : Mar 24, 2022, 12:07 PM IST

ಅಸೈಗೋಳಿಯಲ್ಲಿ ಅಂಬೇಡ್ಕರ್ ಜಯಂತಿಗೆ ಹಾಕಲಾದ ಫ್ಲೆಕ್ಸ್ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ.

two accused arrested who damaged Ambedkar Flex in Mangalore
ಅಂಬೇಡ್ಕರ್ ಫ್ಲೆಕ್ಸ್​​ ಹಾನಿ ಪ್ರಕರಣದ ಆರೋಪಿಗಳು ಅರೆಸ್ಟ್

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅಸೈಗೋಳಿಯಲ್ಲಿ ಅಂಬೇಡ್ಕರ್ ಜಯಂತಿಗೆ ಹಾಕಲಾದ ಫ್ಲೆಕ್ಸ್ ಅನ್ನು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕೋಣಾಜೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಸೈಗೋಳಿಯ ಶರಣ್ (24), ಹರೇಕಳದ ಸುಜಿತ್ (26) ಬಂಧಿತ ಆರೋಪಿಗಳು.

ಇದನ್ನೂ ಓದಿ: ಶ್ರೀರಾಮುಲು ಮನೆ ಬಳಿ ಸಾರಿಗೆ ನೌಕರರಿಂದ ಅಹೋರಾತ್ರಿ ಉಪವಾಸ ಸತ್ಯಾಗ್ರಹ: ಅಧ್ಯಕ್ಷ ಚಂದ್ರಶೇಖರ್

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಿರುವ ದಕ್ಷಿಣಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಸಂಘಟನೆಯು ಮಂಗಳೂರಿನ ಅಸೈಗೋಳಿಯಲ್ಲಿ ಫ್ಲೆಕ್ಸ್ ಅಳವಡಿಸಿದ್ದರು. ಈ ಫ್ಲೆಕ್ಸ್ ಅನ್ನು ಹರಿದು ಹಾನಿ ಮಾಡಿರುವ ಬಗ್ಗೆ ಕೋಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅಸೈಗೋಳಿಯಲ್ಲಿ ಅಂಬೇಡ್ಕರ್ ಜಯಂತಿಗೆ ಹಾಕಲಾದ ಫ್ಲೆಕ್ಸ್ ಅನ್ನು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕೋಣಾಜೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಅಸೈಗೋಳಿಯ ಶರಣ್ (24), ಹರೇಕಳದ ಸುಜಿತ್ (26) ಬಂಧಿತ ಆರೋಪಿಗಳು.

ಇದನ್ನೂ ಓದಿ: ಶ್ರೀರಾಮುಲು ಮನೆ ಬಳಿ ಸಾರಿಗೆ ನೌಕರರಿಂದ ಅಹೋರಾತ್ರಿ ಉಪವಾಸ ಸತ್ಯಾಗ್ರಹ: ಅಧ್ಯಕ್ಷ ಚಂದ್ರಶೇಖರ್

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜಿಸಿರುವ ದಕ್ಷಿಣಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಸಂಘಟನೆಯು ಮಂಗಳೂರಿನ ಅಸೈಗೋಳಿಯಲ್ಲಿ ಫ್ಲೆಕ್ಸ್ ಅಳವಡಿಸಿದ್ದರು. ಈ ಫ್ಲೆಕ್ಸ್ ಅನ್ನು ಹರಿದು ಹಾನಿ ಮಾಡಿರುವ ಬಗ್ಗೆ ಕೋಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.