ಪುತ್ತೂರು : ಮಾಜಿ ಶಾಸಕ ಉರಿಮಜಲು ರಾಮ್ ಭಟ್ ಅವರು ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಡಿ.6ರಂದು ಉರಿಮಜಲು ರಾಮ್ ಭಟ್ ಅವರು ನಿಧನರಾಗಿದ್ದರು. ತಮ್ಮ ಮರಣದ ಬಳಿಕ ನೇತ್ರದಾನ ಮಾಡಬೇಕು ಎಂಬುದು ಅವರ ಮಹದಾಸೆಯಾಗಿತ್ತು. ಅದರಂತೆ ನೇತ್ರದಾನ ಮಾಡಲಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.
ರಾಮ್ ಭಟ್ ಅವರ ನಿಧನ ವಾರ್ತೆ ತಿಳಿದ ಬಳಿಕ ಕೆ ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ವೈದ್ಯರು ರಾಮ್ ಭಟ್ ಅವರ ಕಣ್ಣು ಪಡೆದುಕೊಂಡಿದ್ದಾರೆ.