ಮೈಸೂರು: ಕೋವಿಡ್-19 ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವ್ಯಕ್ತಿಯೊಬ್ಬನಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಸಾರ್ವಜನಿಕರು ಎಚ್ಚೆತ್ತುಕೊಳ್ಳಲು ಜಿಲ್ಲಾಡಳಿತ ಸೂಚನೆ ನೀಡಿದೆ. ತುರ್ತು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು, ನಗರದ 35 ವರ್ಷದ ವ್ಯಕ್ತಿಯೊಬ್ಬರು ದುಬೈನಿಂದ ಮಾ.19ರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರಿಗೆ ಸ್ಕ್ರೀನಿಂಗ್ ಮಾಡಲಾಗಿದ್ದು, ಅಲ್ಲಿಂದ ಟ್ಯಾಕ್ಸಿ ಮೂಲಕ ಮೈಸೂರಿಗೆ ಬಂದಿದ್ದಾರೆ ಎಂದು ಹೇಳಿದರು.
ಜ್ವರ ಕಾಣಿಸಿಕೊಂಡ ಪರಿಣಾಮ ಮನೆಗೆ ಹೋಗದೆ ನೇರವಾಗಿ ಕೆ.ಆರ್.ಆಸ್ಪತ್ರೆಗೆ ದಾಖಲಾಗಿದ್ದಾರೆ. ವ್ಯಕ್ತಿಯ ರಕ್ತ ಮತ್ತು ಗಂಟಲು ದ್ರವದ ಮಾದರಿ ವರದಿ ಬಂದ ಬಳಿಕ ಸೋಂಕು ಇರುವುದು ದೃಢ ಆಗಿದೆ. ಆತನಿಗೆ ಕೆ.ಆರ್.ಆಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ನೇರವಾಗಿ ಆಸ್ಪತ್ರೆಗೆ ದಾಖಲಾದ ಪರಿಣಾಮ ಅವರ ಮನೆಯವರಿಗೆ ಆತ ಮಾಹಿತಿ ನೀಡಿಲ್ಲ. ಈಗಾಗಲೇ ಟ್ಯಾಕ್ಸಿ ಚಾಲಕನ ಮಾಹಿತಿ ಸಿಕ್ಕಿದ್ದು, ತಪಾಸಣೆ ಮಾಡಿಸಲಾಗುವುದು ಎಂದರು.
- ಮೈಸೂರಿನಲ್ಲಿ ನಿಗಾದಲ್ಲಿದ್ದವರ ಸಂಖ್ಯೆ 240
- ಮನೆಯಲ್ಲಿ ನಿಗಾದಲ್ಲಿದ್ದವರ ಸಂಖ್ಯೆ 170
- 14 ದಿನ ನಿಗಾ ಮುಗಿಸಿದವರು 69 ಮಂದಿ