ಮೈಸೂರು: ಮದುವೆ ಮುಗಿಸಿಕೊಂಡು ಬರುತ್ತಿದ್ದ ವೇಳೆ ಬೈಕ್ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿ ತಾಯಿ-ಮಗ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೆ.ಆರ್. ನಗರ ತಾಲೂಕಲ್ಲಿ ನಡೆದಿದೆ.
ಸುಭದ್ರಮ್ಮ (55), ಅವರ ಮಗ ಶಿವಣ್ಣ (35) ರಸ್ತೆ ಅಪಘಾತದಲ್ಲಿ ಮೃತಪಟ್ಟವರು. ತಾಯಿ-ಮಗ ಬೈಕ್ನಲ್ಲಿಯೇ ರುದ್ರಪಟ್ಟಣಕ್ಕೆ ಮದುವೆಗೆ ಹೋಗಿದ್ದರು. ಮದುವೆ ಮುಗಿಸಿ ವಾಪಸ್ ಬರುವಾಗ ಕೆ.ಆರ್. ನಗರ ತಾಲೂಕಿನ ಚುಂಚನಕಟ್ಟೆ ಬಳಿ ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಅಪಘಾತದಿಂದ ಇಬ್ಬರಿಗೂ ತಲೆಗೆ ತೀವ್ರ ಪೆಟ್ಟಾಗಿ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಕೆ.ಆರ್. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.