ETV Bharat / city

ಮೈಸೂರಲ್ಲಿ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಅರೆಸ್ಟ್​

author img

By

Published : Nov 18, 2019, 7:49 AM IST

ಮೈಸೂರಿನ ಮದುವೆ ಸಮಾರಂಭ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದ ವೇಳೆ ಕಾಂಗ್ರೆಸ್​​ ಶಾಸಕ ತನ್ವೀರ್ ಸೇಠ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅರೆಸ್ಟ್​

ಮೈಸೂರು: ಭಾನುವಾರ ರಾತ್ರಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ವೇಳೆ ಕಾಂಗ್ರೆಸ್​​ ಶಾಸಕ ತನ್ವೀರ್ ಸೇಠ್ ಅವರ ಕತ್ತಿನ ಭಾಗಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಆರೋಪಿಯನ್ನ ಬಂಧಿಸಲಾಗಿದೆ.

ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿದ್ದ ವಿಡಿಯೋ

ಬನ್ನಿಮಂಟಪದ ಪಂಜಿನ ಕವಾಯತು ಮೈದಾನದ ಹಿಂಭಾಗವಿರುವ ಕಲ್ಯಾಣ ಮಂಟಪವೊಂದರಲ್ಲಿ ಶಾಸಕ ತನ್ವೀರ್ ಸೇಠ್ ಊಟ ಮಾಡಿ ನಂತರ ಸಮಾರಂಭದ ಹಾಲ್​ಗೆ ಬಂದು ಸ್ನೇಹಿತರೊಂದಿಗೆ ಸಂಗೀತ ಕಾರ್ಯಕ್ರಮ ವೀಕ್ಷಿಸುತ್ತಿದ್ದರು. ಇದೇ ವೇಳೆ ಕೆಂಪು ಬಣ್ಣದ ಜಾಕೆಟ್​ ಧರಿಸಿದ್ದ ಯುವಕನೋರ್ವ ಕೈಯಲ್ಲಿ ಮಾರಕಾಸ್ತ್ರ ಹಿಡಿದುಕೊಂಡು ನಿಧಾನವಾಗಿ ಬಂದು ವೇದಿಕೆಯ ಮುಂಭಾಗದಲ್ಲಿ ಕುಳಿತಿದ್ದ ಶಾಸಕರ ಮೇಲೆ ಮಚ್ಚಿನಿಂದ ಏಕಾಏಕಿ ಹಲ್ಲೆ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದ. ಆದರೆ ಕಾರ್ಯಕ್ರಮದಲ್ಲಿದ್ದವರು ಆತನನ್ನು ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಗೌಸಿಯಾ ನಗರದ ಫರ್ಹಾನ್ ಹಲ್ಲೆ ಮಾಡಿದ ಆರೋಪಿ. ಬಂಧಿತನಿಂದ ಹಲ್ಲೆಗೆ ಬಳಸಿದ್ದ ಮಚ್ಚನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲ್ಲೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ, ವಿಚಾರಣೆ ಮಾಡಲಾಗುತ್ತಿದೆ.

ಸದ್ಯ ತನ್ವೀರ್ ಸೇಠ್ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.‌ ಹಲ್ಲೆ ವಿಷಯ ತಿಳಿದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಸ್ಪತ್ರೆ ಮುಂದೆ ಜಮಾಯಿಸಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ, ಡಿಸಿಪಿ ಎಂ. ಮುತ್ತುರಾಜು, ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಆಸ್ಪತ್ರೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮೈಸೂರು: ಭಾನುವಾರ ರಾತ್ರಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ವೇಳೆ ಕಾಂಗ್ರೆಸ್​​ ಶಾಸಕ ತನ್ವೀರ್ ಸೇಠ್ ಅವರ ಕತ್ತಿನ ಭಾಗಕ್ಕೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಆರೋಪಿಯನ್ನ ಬಂಧಿಸಲಾಗಿದೆ.

ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ ನಡೆಸಿದ್ದ ವಿಡಿಯೋ

ಬನ್ನಿಮಂಟಪದ ಪಂಜಿನ ಕವಾಯತು ಮೈದಾನದ ಹಿಂಭಾಗವಿರುವ ಕಲ್ಯಾಣ ಮಂಟಪವೊಂದರಲ್ಲಿ ಶಾಸಕ ತನ್ವೀರ್ ಸೇಠ್ ಊಟ ಮಾಡಿ ನಂತರ ಸಮಾರಂಭದ ಹಾಲ್​ಗೆ ಬಂದು ಸ್ನೇಹಿತರೊಂದಿಗೆ ಸಂಗೀತ ಕಾರ್ಯಕ್ರಮ ವೀಕ್ಷಿಸುತ್ತಿದ್ದರು. ಇದೇ ವೇಳೆ ಕೆಂಪು ಬಣ್ಣದ ಜಾಕೆಟ್​ ಧರಿಸಿದ್ದ ಯುವಕನೋರ್ವ ಕೈಯಲ್ಲಿ ಮಾರಕಾಸ್ತ್ರ ಹಿಡಿದುಕೊಂಡು ನಿಧಾನವಾಗಿ ಬಂದು ವೇದಿಕೆಯ ಮುಂಭಾಗದಲ್ಲಿ ಕುಳಿತಿದ್ದ ಶಾಸಕರ ಮೇಲೆ ಮಚ್ಚಿನಿಂದ ಏಕಾಏಕಿ ಹಲ್ಲೆ ಮಾಡಿ ಅಲ್ಲಿಂದ ಕಾಲ್ಕಿತ್ತಿದ್ದ. ಆದರೆ ಕಾರ್ಯಕ್ರಮದಲ್ಲಿದ್ದವರು ಆತನನ್ನು ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಗೌಸಿಯಾ ನಗರದ ಫರ್ಹಾನ್ ಹಲ್ಲೆ ಮಾಡಿದ ಆರೋಪಿ. ಬಂಧಿತನಿಂದ ಹಲ್ಲೆಗೆ ಬಳಸಿದ್ದ ಮಚ್ಚನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಲ್ಲೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ, ವಿಚಾರಣೆ ಮಾಡಲಾಗುತ್ತಿದೆ.

ಸದ್ಯ ತನ್ವೀರ್ ಸೇಠ್ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.‌ ಹಲ್ಲೆ ವಿಷಯ ತಿಳಿದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಸ್ಪತ್ರೆ ಮುಂದೆ ಜಮಾಯಿಸಿದ್ದು, ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಕೆ.ಟಿ. ಬಾಲಕೃಷ್ಣ, ಡಿಸಿಪಿ ಎಂ. ಮುತ್ತುರಾಜು, ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಆಸ್ಪತ್ರೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Intro:ಸುದ್ದಿBody:ಮೈಸೂರು:ಮದುವೆ ಸಮಾರಂಭದಲ್ಲಿ ಭಾಗಿ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದ ವೇಳೆಯಲ್ಲಿ ಎನ್.ಆರ್.ಶಾಸಕ ತನ್ವೀರ್ ಸೇಠ್ ಅವರ ಕತ್ತಿನ ಭಾಗಕ್ಕೆ ಮಚ್ಚಿನಿಂದ ಯುವಕನೋರ್ವ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ  ನಡೆದಿದೆ.
ಬನ್ನಿಮಂಟಪದ ಪಂಜಿನ ಕವಾಯತು ಮೈದಾನದ ಹಿಂಭಾಗವಿರುವ ಕಲ್ಯಾಣ ಮಂಟಪವೊಂದರಲ್ಲಿ ಶಾಸಕ ತನ್ವೀರ್ ಸೇಠ್ ಊಟ ಮಾಡಿ ನಂತರ ಸಮಾರಂಭದ ಹಾಲ್ ಹೆ ಬಂದು ಸ್ನೇಹಿತರೊಂದಿಗೆ ಸಂಗೀತದ ಕೇಳುತ್ತಿದ್ದಾಗ‌ ಕೆಂಪು ಜರ್ನಿನ್ ಹಾಕಿ ಅಲ್ಲಿಗೆ ಬಂದ ಯುವಕನೋರ್ವ ಮಚ್ಚಿನಿಂದ ಏಕಾಏಕಿ ದಾಳಿ ಮಾಡಲು ಮುಂದಾಗಿ ಕತ್ತಿಗೆ ಹಲ್ಲೆ ಮಾಡಿದ್ದಾನೆ.ಇದರಿಂದ ತನ್ವೀರ್ ಸೇಠ್ ತಪ್ಪಿಸಿಕೊಳ್ಳಲು ಯತ್ನಿಸಿದಾಗ,ಅಲ್ಲಿಯೇ ಇದ್ದ ಸ್ನೇಹಿತರು ಆತನನ್ನು ಹಿಡಿದು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ತನ್ವೀರ್ ಸೇಠ್ ಅವರನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.‌ ತನ್ವೀರ್ ಸೇಠ್ ಅವರಿಗೆ ಹಲ್ಲೆಯಾಗಿರುವ ವಿಷಯ ತಿಳಿದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಸ್ಪತ್ರೆ ಮುಂದೆ ದೌಡಾಯಿಸಿದ್ದಾರೆ.ಪೊಲೀಸ್ ಭದ್ರತೆ ಹಾಕಲಾಗಿದೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ, ಡಿಸಿಪಿ ಎಂ.ಮುತ್ತುರಾಜು ,ಜಿಲ್ಲಾ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಆಸ್ಪತ್ರೆಗೆ ಆಗಮಿಸಿ ಪರಿಶೀಲನೆ ನಡೆಸಿದರು.

ಯಾವ ಕಾರಣಕ್ಕೆ ಯುವಕ ಹಲ್ಲೆ ಮಾಡಿದ್ದಾನೆ ಎಂಬುವುದರ ಬಗ್ಗೆ ವಿಚಾರಣೆ ಮಾಡಲಾಗುತ್ತಿದೆ. ತನ್ವೀರ್ ಸೇಠ್ ಅವರ ಆರೋಗ್ಯ ಚೇತರಿಕೆಯಾಗುತ್ತಿದೆ.
ಎಂ.ಮುತ್ತುರಾಜು, ಡಿಸಿಪಿ
ಗೌಸಿಯಾ ನಗರ ಫಾರಹನ್ ಎಂಬ ಯುವಕ ಹಾಗೂ ಹಲ್ಲೆ ಮಾಡಿದ ಮಚ್ಚು ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
(ತನ್ವೀರ್ ಸೇಠ್ ಹಲ್ಲೆ ಮಾಡಿದ ಯುವಕನ ವಿಡಿಯೋ)Conclusion:ಸುದ್ದಿ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.