ETV Bharat / city

ದೇವನೂರು ರಾಹುಲ್ ಗಾಂಧಿ ಭಾಷಣದಿಂದ ಪ್ರೇರಿತರಾಗಿ ಕೃತಿ ಬರೆದಂತಿದೆ: ಪ್ರತಾಪ್‌ ಸಿಂಹ ವ್ಯಂಗ್ಯ

author img

By

Published : Jul 14, 2022, 7:39 AM IST

'ಆರ್​ಎಸ್​ಎಸ್​ ಆಳ-ಅಗಲ' ಕೃತಿ ವಿಚಾರವಾಗಿ ಹಿರಿಯ ಸಾಹಿತಿ ದೇವನೂರ ಮಹಾದೇವ ವಿರುದ್ಧ ಸಂಸದ ಪ್ರತಾಪ್‌ ಸಿಂಹ ಕಿಡಿ ಕಾರಿದರು.

BJP MP Pratap Simha
ಪ್ರತಾಪ್ ಸಿಂಹ

ಮೈಸೂರು: ಕಾಂಗ್ರೆಸ್‌ನ ಆಳಾಗಿ ದೇವನೂರು ಮಹಾದೇವ ಬರೆದಿರುವ 'ಆರ್​ಎಸ್​ಎಸ್​ ಆಳ-ಅಗಲ' ಕೃತಿಯಲ್ಲ, ಅದೊಂದು ವಿಕೃತಿ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. 'ಕುಸುಮ ಬಾಲೆ'ಯ ನಂತರ ದೇವನೂರು ಒಂದಿಷ್ಟು ಸೃಜನಶೀಲತೆ ಉಳಿಸಿಕೊಂಡಿದ್ದಾರೆ ಎಂದುಕೊಂಡಿದ್ದೆ. ಆದರೆ, ಆರ್​ಎಸ್​ಎಸ್ ಕುರಿತು ಬರೆಯಲು ಹೋಗಿ ತಮ್ಮ ಘನತೆ ಕಳೆದುಕೊಂಡಿದ್ದಾರೆ ಎಂದರು. ಜೊತೆಗೆ, ರಾಹುಲ್‌ ಗಾಂಧಿ ಭಾಷಣದಿಂದ ಪ್ರೇರಿತರಾಗಿ ಕೃತಿ ಬರೆದಂತಿದೆ ಎಂದು ವ್ಯಂಗ್ಯವಾಡಿದರು.


ಚತುರ್ವರ್ಣ ಪದ್ಧತಿ ಬಗ್ಗೆ ಬರೆಯಲು ಹೋಗಿದ್ದಾರೆ. ಇದರಲ್ಲಿ ಒಂದು ಧರ್ಮ, ಒಬ್ಬ ನಾಯಕ, ಒಂದು ದೇಶವನ್ನು ಆರ್.ಎಸ್.ಎಸ್ ಪ್ರತಿಪಾದಿಸುತ್ತದೆ ಎಂದು ಹೇಳಿದ್ದಾರೆ. ಇದನ್ನು ನಾನು ಸಹ ಓದಿದ್ದೇನೆ. ಚತುರ್ವರ್ಣ ಪದ್ಧತಿ ಎಲ್ಲಾ ಧರ್ಮದಲ್ಲೂ ಇದೆ. ಒಬ್ಬ ವ್ಯಕ್ತಿ, ಒಂದು ಪುಸ್ತಕ, ಒಂದು ದೇಶದಿಂದ ಇಡೀ ಪ್ರಪಂಚದಲ್ಲಿ ಭಯೋತ್ಪಾದನೆ ಹೆಚ್ಚಾಗಿದೆ. ಈ ಬಗ್ಗೆ ಸಾಹಿತಿ ಮಹಾದೇವ ಯಾಕೆ ಮಾತನಾಡುತ್ತಿಲ್ಲ?. ಚತುರ್ವರ್ಣ ಪದ್ಧತಿ ಕೇವಲ ಹಿಂದೂ ಧರ್ಮದಲ್ಲಿ ಇಲ್ಲ, ಕ್ರಿಶ್ಚಿಯನ್, ಇಸ್ಲಾಮಿಕ್ ಧರ್ಮದಲ್ಲೂ ಇದೆ ಎಂದು ತಿಳಿಸಿದರು.

ಚತುರ್ವರ್ಣ ವಿರೋಧಿಸುವುದಾದರೆ ಎಲ್ಲ ಧರ್ಮಗಳ ಬಗ್ಗೆಯೂ ಮಾತನಾಡಿ ಎಂದ ಪ್ರತಾಪ್ ಸಿಂಹ, ಈ ಕೃತಿಯನ್ನು ಗಮನಿಸಿದ್ರೆ ಕಾಂಗ್ರೆಸ್ ಕಾರ್ಯಕರ್ತ ರಾಹುಲ್ ಗಾಂಧಿ ಭಾಷಣದಿಂದ ಪ್ರೇರಿತನಾಗಿ ಬರೆದಂತಿದೆ. ಜೊತೆಗೆ ಬ್ಯಾಂಕ್ ಸಾಲ ಹಾಗೂ ಅಂಬಾನಿ, ಅದಾನಿ ಆದಾಯ ಜಾಸ್ತಿ ಆಗಿರುವ ಕುರಿತು ಉಲ್ಲೇಖಿಸಿದ್ದಾರೆ ಎಂದು ಟೀಕಾಸಮರ ನಡೆಸಿದರು.

ಇದನ್ನೂ ಓದಿ: ಪಠ್ಯಕ್ರಮದಲ್ಲಿ ನನ್ನ ಬರಹ ಸೇರಿಸಬೇಡಿ : ಸಾಹಿತಿ ದೇವನೂರ ಮಹಾದೇವ

ಮೈಸೂರು: ಕಾಂಗ್ರೆಸ್‌ನ ಆಳಾಗಿ ದೇವನೂರು ಮಹಾದೇವ ಬರೆದಿರುವ 'ಆರ್​ಎಸ್​ಎಸ್​ ಆಳ-ಅಗಲ' ಕೃತಿಯಲ್ಲ, ಅದೊಂದು ವಿಕೃತಿ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. 'ಕುಸುಮ ಬಾಲೆ'ಯ ನಂತರ ದೇವನೂರು ಒಂದಿಷ್ಟು ಸೃಜನಶೀಲತೆ ಉಳಿಸಿಕೊಂಡಿದ್ದಾರೆ ಎಂದುಕೊಂಡಿದ್ದೆ. ಆದರೆ, ಆರ್​ಎಸ್​ಎಸ್ ಕುರಿತು ಬರೆಯಲು ಹೋಗಿ ತಮ್ಮ ಘನತೆ ಕಳೆದುಕೊಂಡಿದ್ದಾರೆ ಎಂದರು. ಜೊತೆಗೆ, ರಾಹುಲ್‌ ಗಾಂಧಿ ಭಾಷಣದಿಂದ ಪ್ರೇರಿತರಾಗಿ ಕೃತಿ ಬರೆದಂತಿದೆ ಎಂದು ವ್ಯಂಗ್ಯವಾಡಿದರು.


ಚತುರ್ವರ್ಣ ಪದ್ಧತಿ ಬಗ್ಗೆ ಬರೆಯಲು ಹೋಗಿದ್ದಾರೆ. ಇದರಲ್ಲಿ ಒಂದು ಧರ್ಮ, ಒಬ್ಬ ನಾಯಕ, ಒಂದು ದೇಶವನ್ನು ಆರ್.ಎಸ್.ಎಸ್ ಪ್ರತಿಪಾದಿಸುತ್ತದೆ ಎಂದು ಹೇಳಿದ್ದಾರೆ. ಇದನ್ನು ನಾನು ಸಹ ಓದಿದ್ದೇನೆ. ಚತುರ್ವರ್ಣ ಪದ್ಧತಿ ಎಲ್ಲಾ ಧರ್ಮದಲ್ಲೂ ಇದೆ. ಒಬ್ಬ ವ್ಯಕ್ತಿ, ಒಂದು ಪುಸ್ತಕ, ಒಂದು ದೇಶದಿಂದ ಇಡೀ ಪ್ರಪಂಚದಲ್ಲಿ ಭಯೋತ್ಪಾದನೆ ಹೆಚ್ಚಾಗಿದೆ. ಈ ಬಗ್ಗೆ ಸಾಹಿತಿ ಮಹಾದೇವ ಯಾಕೆ ಮಾತನಾಡುತ್ತಿಲ್ಲ?. ಚತುರ್ವರ್ಣ ಪದ್ಧತಿ ಕೇವಲ ಹಿಂದೂ ಧರ್ಮದಲ್ಲಿ ಇಲ್ಲ, ಕ್ರಿಶ್ಚಿಯನ್, ಇಸ್ಲಾಮಿಕ್ ಧರ್ಮದಲ್ಲೂ ಇದೆ ಎಂದು ತಿಳಿಸಿದರು.

ಚತುರ್ವರ್ಣ ವಿರೋಧಿಸುವುದಾದರೆ ಎಲ್ಲ ಧರ್ಮಗಳ ಬಗ್ಗೆಯೂ ಮಾತನಾಡಿ ಎಂದ ಪ್ರತಾಪ್ ಸಿಂಹ, ಈ ಕೃತಿಯನ್ನು ಗಮನಿಸಿದ್ರೆ ಕಾಂಗ್ರೆಸ್ ಕಾರ್ಯಕರ್ತ ರಾಹುಲ್ ಗಾಂಧಿ ಭಾಷಣದಿಂದ ಪ್ರೇರಿತನಾಗಿ ಬರೆದಂತಿದೆ. ಜೊತೆಗೆ ಬ್ಯಾಂಕ್ ಸಾಲ ಹಾಗೂ ಅಂಬಾನಿ, ಅದಾನಿ ಆದಾಯ ಜಾಸ್ತಿ ಆಗಿರುವ ಕುರಿತು ಉಲ್ಲೇಖಿಸಿದ್ದಾರೆ ಎಂದು ಟೀಕಾಸಮರ ನಡೆಸಿದರು.

ಇದನ್ನೂ ಓದಿ: ಪಠ್ಯಕ್ರಮದಲ್ಲಿ ನನ್ನ ಬರಹ ಸೇರಿಸಬೇಡಿ : ಸಾಹಿತಿ ದೇವನೂರ ಮಹಾದೇವ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.