ETV Bharat / city

ಅಕ್ಕನಂತೆ ತನಗೆ ದುಬಾರಿ ಮೊಬೈಲ್ ಕೊಡಿಸಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಬಾಲಕ!

author img

By

Published : Jun 22, 2020, 6:12 PM IST

ಈತ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣವೇ ಆತನನ್ನು ಹೆಚ್ ಡಿ ಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಿದ್ರೂ ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ..

Boy commits suicide in Mysore
ಆತ್ಮಹತ್ಯೆ ಮಾಡಿಕೊಂಡ ಬಾಲಕ

ಮೈಸೂರು : ತನಗಿಂತ ತನ್ನ ಅಕ್ಕನಿಗೆ ದುಬಾರಿ ಬೆಲೆಯ ಮೊಬೈಲ್ ಕೊಡಿಸಿದ್ದಕ್ಕೆ ಕೋಪಗೊಂಡ ಬಾಲಕನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಚ್ ಡಿ ಕೋಟೆಯ ಬೆಳಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕನ ಹೆಸರು ಆದಿತ್ಯ (15). ಈತನ ಅಕ್ಕನಿಗೆ ತಂದೆ ದುಬಾರಿ ಬೆಲೆಯ ಮೊಬೈಲ್ ಕೊಡಿಸಿದ್ದರಂತೆ. ಆದರೆ, ತನಗೆ ಕಡಿಮೆ ಬೆಲೆಯ ಮೊಬೈಲ್ ಕೊಡಿಸಿದ್ದಾರೆ ಎಂದು ಅಕ್ಕನ ಜೊತೆ ಜಗಳ ಮಾಡಿದ್ದಾನೆ. ಇದರಿಂದ ಇವನ ತಂದೆ-ತಾಯಿ ಬಾಲಕನಿಗೆ ಬೈದಿದ್ದಾರೆ. ಇದರಿಂದ ಕೋಪಗೊಂಡ ಈತ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣವೇ ಆತನನ್ನು ಹೆಚ್ ಡಿ ಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಿದ್ರೂ ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

Boy commits suicide in Mysore
ಆತ್ಮಹತ್ಯೆ ಮಾಡಿಕೊಂಡ ಬಾಲಕ

ಈ ಸಂಬಂಧ ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು : ತನಗಿಂತ ತನ್ನ ಅಕ್ಕನಿಗೆ ದುಬಾರಿ ಬೆಲೆಯ ಮೊಬೈಲ್ ಕೊಡಿಸಿದ್ದಕ್ಕೆ ಕೋಪಗೊಂಡ ಬಾಲಕನೊಬ್ಬ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಚ್ ಡಿ ಕೋಟೆಯ ಬೆಳಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಬಾಲಕನ ಹೆಸರು ಆದಿತ್ಯ (15). ಈತನ ಅಕ್ಕನಿಗೆ ತಂದೆ ದುಬಾರಿ ಬೆಲೆಯ ಮೊಬೈಲ್ ಕೊಡಿಸಿದ್ದರಂತೆ. ಆದರೆ, ತನಗೆ ಕಡಿಮೆ ಬೆಲೆಯ ಮೊಬೈಲ್ ಕೊಡಿಸಿದ್ದಾರೆ ಎಂದು ಅಕ್ಕನ ಜೊತೆ ಜಗಳ ಮಾಡಿದ್ದಾನೆ. ಇದರಿಂದ ಇವನ ತಂದೆ-ತಾಯಿ ಬಾಲಕನಿಗೆ ಬೈದಿದ್ದಾರೆ. ಇದರಿಂದ ಕೋಪಗೊಂಡ ಈತ ಮನೆಯಲ್ಲಿದ್ದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣವೇ ಆತನನ್ನು ಹೆಚ್ ಡಿ ಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಿದ್ರೂ ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

Boy commits suicide in Mysore
ಆತ್ಮಹತ್ಯೆ ಮಾಡಿಕೊಂಡ ಬಾಲಕ

ಈ ಸಂಬಂಧ ಹೆಚ್ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.