ETV Bharat / city

70 ಕೋಟಿ ರೂ. ವೆಚ್ಚದ ಕಾಮಗಾರಿಗೆ ಡಿಸಿಎಂ‌ ಅಶ್ವಥ್ ನಾರಾಯಣ್​ರಿಂದ ಶಂಕುಸ್ಥಾಪನೆ - ಮೈಸೂರು ಮೆಡಿಕಲ್ ಕಾಲೇಜು ಆವರಣ

ಖಾಸಗಿ ಆಸ್ಪತ್ರೆಯಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಬೇಕಿದೆ ಎಂದು ಡಿಸಿಎಂ‌ ತಿಳಿಸಿದರು.

ಡಿಸಿಎಂ‌ ಅಶ್ವಥ್ ನಾರಾಯಣ್
author img

By

Published : Oct 6, 2019, 9:44 AM IST

ಮೈಸೂರು: ಮೈಸೂರು ಮೆಡಿಕಲ್ ಕಾಲೇಜು ಆವರಣದಲ್ಲಿ 70 ಕೋಟಿ ವೆಚ್ಚದ ಕಾಮಗಾರಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್​​ ಗುದ್ದಲಿ ಪೂಜೆ ನೆರವೇರಿಸಿದರು.

ನಗರದ ಜೆ.ಕೆ.ಮೈದಾನದಲ್ಲಿ ಹಳೆಯ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿಂಗ್ ಘಟಕದ ವತಿಯಿಂದ ಆಯೋಜಿಸಿದ್ದ ಉಪನ್ಯಾಸ, ಪರೀಕ್ಷಾ ಕೊಠಡಿ ಹಾಗೂ ಗ್ರಂಥಾಲಯ ಕಟ್ಟಡ, ಬಾಲಕರ ಹಾಸ್ಟೆಲ್ ಕಟ್ಟಡ ನಿರ್ಮಾಣ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಡಿಸಿಎಂ‌ ನೆರವೇರಿಸಿದರು.

70 ಕೋಟಿ ರೂ ವೆಚ್ಚದ ಕಾಮಗಾರಿಗೆ ಡಿಸಿಎಂ‌ ಅಶ್ವಥ್ ನಾರಾಯಣ್​ರಿಂದ ಶಂಕುಸ್ಥಾಪನೆ

ಬಳಿಕ ಮಾತನಾಡಿದ ಅವರು, ಮನುಕುಲಕ್ಕೆ ಉತ್ತಮ ಆರೋಗ್ಯ ಕಷ್ಟ. ಇದನ್ನು ಮನಗಂಡ ಮಹಾರಾಜರು ಜನರಲ್ಲಿ ಆರೋಗ್ಯವನ್ನು ಹೆಚ್ಚಿಸುವುದಕ್ಕಾಗಿ ಕೆ.ಆರ್.ಆಸ್ಪತ್ರೆಯನ್ನು ಕೊಡುಗೆಯಾಗಿ ನೀಡಿರುವುದನ್ನು ಸ್ಮರಿಸಿದರು. ಕರ್ನಾಟಕದಲ್ಲೇ ಮೊದಲನೇ ಮೆಡಿಕಲ್ ಕಾಲೇಜು ಅಂದರೆ ಅದು ಕೆ.ಆರ್.ಆಸ್ಪತ್ರೆ, 2024ಕ್ಕೆ ನೂರು ವರ್ಷ ತುಂಬಲಿದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳು ಕಡಿಮೆ ಇರುವುದರಿಂದ ಖಾಸಗಿ ಆಸ್ಪತ್ರೆಗಳಿಗೆ ಜನರು ಹೋಗುತ್ತಿದ್ದಾರೆ. ಆ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಬೇಕಿದೆ. ಆಸ್ಪತ್ರೆಯ ಬೋಧಕ, ಬೋಧಕೇತರ ಸಿಬ್ಬಂದಿ, ರೋಗಿಗಳು ತಮ್ಮ ಕೊರತೆಗಳನ್ನು ಹೇಳಿಕೊಂಡಿದ್ದಾರೆ. ಅವರಿಗೆ ಅವಶ್ಯವಿರುವ ಸೌಲಭ್ಯವನ್ನು ಒದಗಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಪುಷ್ಪಲತಾ ಜಗನಾಥ್, ಶಾಸಕರಾದ ಎಲ್.ನಾಗೇಂದ್ರ, ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರಾದ ಹೇಮಂತ್ ಕುಮಾರ್, ಮೈಸೂರು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ದಾಕ್ಷಾಯಣಿ, ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಡಾ.ಗಾಯತ್ರಿ, ವೈದ್ಯಕೀಯ ಕಾಲೇಜಿನ ಕಾರ್ಯದರ್ಶಿ ಪ್ರದೀಪ್ ಮತ್ತು ಇತರರು ಉಪಸ್ಥಿತರಿದ್ದರು.

ಮೈಸೂರು: ಮೈಸೂರು ಮೆಡಿಕಲ್ ಕಾಲೇಜು ಆವರಣದಲ್ಲಿ 70 ಕೋಟಿ ವೆಚ್ಚದ ಕಾಮಗಾರಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್​​ ಗುದ್ದಲಿ ಪೂಜೆ ನೆರವೇರಿಸಿದರು.

ನಗರದ ಜೆ.ಕೆ.ಮೈದಾನದಲ್ಲಿ ಹಳೆಯ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿಂಗ್ ಘಟಕದ ವತಿಯಿಂದ ಆಯೋಜಿಸಿದ್ದ ಉಪನ್ಯಾಸ, ಪರೀಕ್ಷಾ ಕೊಠಡಿ ಹಾಗೂ ಗ್ರಂಥಾಲಯ ಕಟ್ಟಡ, ಬಾಲಕರ ಹಾಸ್ಟೆಲ್ ಕಟ್ಟಡ ನಿರ್ಮಾಣ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಡಿಸಿಎಂ‌ ನೆರವೇರಿಸಿದರು.

70 ಕೋಟಿ ರೂ ವೆಚ್ಚದ ಕಾಮಗಾರಿಗೆ ಡಿಸಿಎಂ‌ ಅಶ್ವಥ್ ನಾರಾಯಣ್​ರಿಂದ ಶಂಕುಸ್ಥಾಪನೆ

ಬಳಿಕ ಮಾತನಾಡಿದ ಅವರು, ಮನುಕುಲಕ್ಕೆ ಉತ್ತಮ ಆರೋಗ್ಯ ಕಷ್ಟ. ಇದನ್ನು ಮನಗಂಡ ಮಹಾರಾಜರು ಜನರಲ್ಲಿ ಆರೋಗ್ಯವನ್ನು ಹೆಚ್ಚಿಸುವುದಕ್ಕಾಗಿ ಕೆ.ಆರ್.ಆಸ್ಪತ್ರೆಯನ್ನು ಕೊಡುಗೆಯಾಗಿ ನೀಡಿರುವುದನ್ನು ಸ್ಮರಿಸಿದರು. ಕರ್ನಾಟಕದಲ್ಲೇ ಮೊದಲನೇ ಮೆಡಿಕಲ್ ಕಾಲೇಜು ಅಂದರೆ ಅದು ಕೆ.ಆರ್.ಆಸ್ಪತ್ರೆ, 2024ಕ್ಕೆ ನೂರು ವರ್ಷ ತುಂಬಲಿದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳು ಕಡಿಮೆ ಇರುವುದರಿಂದ ಖಾಸಗಿ ಆಸ್ಪತ್ರೆಗಳಿಗೆ ಜನರು ಹೋಗುತ್ತಿದ್ದಾರೆ. ಆ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಬೇಕಿದೆ. ಆಸ್ಪತ್ರೆಯ ಬೋಧಕ, ಬೋಧಕೇತರ ಸಿಬ್ಬಂದಿ, ರೋಗಿಗಳು ತಮ್ಮ ಕೊರತೆಗಳನ್ನು ಹೇಳಿಕೊಂಡಿದ್ದಾರೆ. ಅವರಿಗೆ ಅವಶ್ಯವಿರುವ ಸೌಲಭ್ಯವನ್ನು ಒದಗಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಪುಷ್ಪಲತಾ ಜಗನಾಥ್, ಶಾಸಕರಾದ ಎಲ್.ನಾಗೇಂದ್ರ, ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರಾದ ಹೇಮಂತ್ ಕುಮಾರ್, ಮೈಸೂರು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ದಾಕ್ಷಾಯಣಿ, ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಡಾ.ಗಾಯತ್ರಿ, ವೈದ್ಯಕೀಯ ಕಾಲೇಜಿನ ಕಾರ್ಯದರ್ಶಿ ಪ್ರದೀಪ್ ಮತ್ತು ಇತರರು ಉಪಸ್ಥಿತರಿದ್ದರು.

Intro:ಡಿಸಿಎಂBody:ಉಪಮುಖ್ಯ ಮಂತ್ರಿಗಳಿಂದ 70 ಕೋಟಿ ರೂ ವೆಚ್ಚದ ಕಾಮಗಾರಿಗೆ ಗುದ್ದಲಿ ಪೂಜೆ

ಮೈಸೂರು: ಮೈಸೂರು ಮೆಡಿಕಲ್ ಕಾಲೇಜು ಆವರಣದಲ್ಲಿ 70 ಕೋಟಿ ವೆಚ್ಚದ ಕಾಮಗಾರಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ನಗರದ ಜೆ.ಕೆ ಮೈದಾನದಲ್ಲಿ ಹಳೆಯ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿಂಗ್ ಘಟಕ ವತಿಯಿಂದ ಆಯೋಜಿಸಿದ್ದ ಉಪನ್ಯಾಸ, ಪರೀಕ್ಷಾ ಕೊಠಡಿ ಹಾಗೂ ಗ್ರಂಥಾಲಯ ಕಟ್ಟಡ, ಬಾಲಕರ ಹಾಸ್ಟೆಲ್ ಕಟ್ಟಡ ನಿರ್ಮಾಣ ಕಾಮಗಾರಿಗಳ ಶಂಕುಸ್ಥಾಪನೆ ನಂತರ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮನುಕುಲಕ್ಕೆ ಉತ್ತಮ ಆರೋಗ್ಯ ಕಷ್ಟ. ಇದನ್ನು ಮನಗಂಡ ಮಹಾರಾಜರು ಜನರಲ್ಲಿ ಆರೋಗ್ಯವನ್ನು ಹೆಚ್ಚಿಸುವುದಕ್ಕಾಗಿ ಕೆ.ಆರ್. ಆಸ್ಪತ್ರೆಯನ್ನು ಕೊಡುಗೆಯಾಗಿ ನೀಡಿರುವುದನ್ನು ಸ್ಮರಿಸಿದರು.

ಕರ್ನಾಟಕದಲ್ಲೇ ಮೊದಲನೇ ಮೆಡಿಕಲ್ ಕಾಲೇಜು ಅಂದರೆ ಕೆ.ಆರ್ ಆಸ್ಪತ್ರೆ. ೨೦೨೪ಕ್ಕೆ ನೂರು ವರ್ಷ ತುಂಬಲಿದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳು ಕಡಿಮೆ ಇರುವುದರಿಂದ ಖಾಸಗಿ ಆಸ್ಪತ್ರೆಗಳಿಗೆ ಜನರು ಹೋಗುತ್ತಿದ್ದಾರೆ. ಆ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಬೇಕಿದೆ ಎಂದು ಹೇಳಿದರು.

ಬೋಧಕ, ಬೋಧಕೇತರ, ಸಿಬ್ಬಂದಿಗಳು, ರೋಗಿಗಳು ತಮ್ಮ ಕೊರತೆಗಳನ್ನು ಹೇಳಿಕೊಂಡಿದ್ದಾರೆ. ಅವರಿಗೆ ಅವಶ್ಯವಿರುವ ಸೌಲಭ್ಯವನ್ನು ಒದಗಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಕೆ.ಆರ್ ಆಸ್ಪತ್ರೆಯಲ್ಲಿ ಇರುವ ಶಿಥೀಲ ಕಟ್ಟಡವನ್ನು ಸರಿಪಡಿಸಲು, ಉತ್ತಮವಾದ ಹಾಗೂ ಸುಸಜ್ಜಿತವಾದ ಕಟ್ಟಡ ನಿರ್ಮಿಸಲು ಎಲ್ಲರ ಸಹಕಾರವನ್ನು ಕೋರಿದರು.

ಮೈಸೂರು ಇಂದಿಗೂ ಎಲ್ಲರನ್ನು ಆಕರ್ಷಿಸುವ ಸುಂದರ ಹಾಗೂ ಸ್ವಚ್ಛ ನಗರವಾಗಿದೆ. ಮೈಸೂರನ್ನು ರಾಜ್ಯದಲ್ಲಿ ಪ್ರಗತಿ ಪೂರಕ ನಾಡನ್ನಾಗಿ ಮಾಡಲು ಪ್ರಯತ್ನಿಸುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರಪಾಲಿಕೆ ಮಹಾಪೌರರಾದ ಪುಷ್ಪಲತಾ ಜಗನಾಥ್, ಶಾಸಕರಾದ ಎಲ್.ನಾಗೇಂದ್ರ, ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಹೇಮಂತ್ ಕುಮಾರ್, ಮೈಸೂರು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ದಾಕ್ಷಯಣಿ, ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಡಾ.ಗಾಯತ್ರಿ, ವೈದ್ಯಕೀಯ ಕಾಲೇಜಿನ ಕಾರ್ಯದರ್ಶಿ ಪ್ರದೀಪ್ ಮತ್ತು ಇತರರು ಉಪಸ್ಥಿತರಿದ್ದರು.Conclusion:ಡಿಸಿಎಂ‌
ETV Bharat Logo

Copyright © 2025 Ushodaya Enterprises Pvt. Ltd., All Rights Reserved.