ETV Bharat / city

ಉದ್ದೇಶಪೂರ್ವಕವಾಗಿಯೇ ಸಿದ್ದರಾಮಯ್ಯ ನನಗೆ ಸಚಿವ ಸ್ಥಾನ ತಪ್ಪಿಸಿದ್ರು: ಬಿ.ಸಿ. ಪಾಟೀಲ್

author img

By

Published : Oct 21, 2019, 7:47 PM IST

ಅನರ್ಹ ಶಾಸಕರು ಪಕ್ಷ ಬಿಡಲು ಕಾರಣವೇನೆಂದು ಕಾಂಗ್ರೆಸ್​ನವರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ. ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​​ನಲ್ಲಿ ತಾಯಿಯಂತೆ ನಡೆದುಕೊಳ್ಳಲಿಲ್ಲ. ಉದ್ದೇಶಪೂರ್ವಕವಾಗಿ ನನಗೆ ಸಚಿವ ಸ್ಥಾನ ಕೈ ತಪ್ಪುವಂತೆ ಮಾಡಿದ್ರು ಎಂದು ಅನರ್ಹ ಶಾಸಕ ಶಾಸಕ ಬಿ.ಸಿ.ಪಾಟೀಲ್ ಆರೋಪಿಸಿದ್ದಾರೆ.

ಅನರ್ಹ ಶಾಸಕ ಶಾಸಕ ಬಿ.ಸಿ.ಪಾಟೀಲ್

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​​ನಲ್ಲಿ ತಾಯಿಯಂತೆ ನಡೆದುಕೊಳ್ಳಲಿಲ್ಲ, ಉದ್ದೇಶಪೂರ್ವಕವಾಗಿ ನನಗೆ ಸಚಿವ ಸ್ಥಾನ ಕೈ ತಪ್ಪುವಂತೆ ಮಾಡಿದ್ರು ಎಂದು ಅನರ್ಹ ಶಾಸಕ ಶಾಸಕ ಬಿ.ಸಿ. ಪಾಟೀಲ್ ಆರೋಪಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರು ಪಕ್ಷ ಬಿಡಲು ಕಾರಣವೇನೆಂದು ಕಾಂಗ್ರೆಸ್​ನವರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ. ಆರಂಭದ ದಿನಗಳಲ್ಲಿ ನಮಗೆ ಆಸೆ ಆಮಿಷಗಳನ್ನ ಒಡ್ಡಿದ್ದರೂ ನಾವು ಪಕ್ಷ ಬಿಟ್ಟಿರಲಿಲ್ಲ. ಆದರೆ ಒಂದು ವರ್ಷ 2 ತಿಂಗಳು ಕಾದು ದೃಢ ತೀರ್ಮಾನ ತೆಗೆದುಕೊಂಡಿದ್ದೇವೆ. ನಮ್ಮ ನಿರ್ಧಾರದ ಹಿಂದೆ ಸಮಗ್ರ ಕರ್ನಾಟಕದ ಅಭಿವೃದ್ಧಿಯ ಹಿತ, ಚಿಂತನೆ ಇದೆ. ಸಮ್ಮಿಶ್ರ ಸರ್ಕಾರದಿಂದ ಸಮಗ್ರ ಅಭಿವೃದ್ಧಿ ಸಾಧ್ಯವಿರಲಿಲ್ಲ. ಬಿಜೆಪಿ ಸರ್ಕಾರದಲ್ಲಿ ನಾವು ನಿರೀಕ್ಷಿಸಿದಂತೆ ಉತ್ತರ ಕರ್ನಾಟಕಕ್ಕೆ ಹೆಚ್ಚು ಒತ್ತು ಸಿಗುತ್ತಿದೆ. ನನ್ನದೇ ಕ್ಷೇತ್ರಕ್ಕೆ ಮೆಡಿಕಲ್‌ ಕಾಲೇಜು ಮಂಜೂರಾಗಿದೆ. ಬಹು‌ ದಿನಗಳ ಕನಸಾಗಿದ್ದ ಏತ ನೀರಾವರಿ ಯೋಜನೆ ಜಾರಿಗೆ ಬರುತ್ತಿದೆ ಎಂದರು.

ಅನರ್ಹ ಶಾಸಕ ಶಾಸಕ ಬಿ.ಸಿ. ಪಾಟೀಲ್

ಇನ್ನು, ಶಾಸಕರನ್ನು ದನ, ಕುರಿ, ಕೋಳಿಗಳಂತೆ ಬಿಜೆಪಿಯವರು ಖರೀದಿ ಮಾಡಿದ್ದಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯರ ಟೀಕೆಗೆ ಉತ್ತರಿಸಿದ ಬಿ.ಸಿ. ಪಾಟೀಲ್, ಅವರ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್​ನಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ ನಮ್ಮನ್ನ ಹೇಗೆ ನಡೆಸಿಕೊಂಡರು ಅನ್ನೋದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ. ಇನ್ನು ಕುಮಾರಸ್ವಾಮಿ ಅವರಂತು ಕುಟುಂಬಕ್ಕೆ ಮಾತ್ರ ಸೀಮಿತರಾದರು. ಅಲ್ಲಿ ಎಲ್ಲವೂ ಸರಿಯಾಗಿದ್ದರೆ 14 ಮಂದಿ ಪಕ್ಷದಿಂದ ಹೊರಬರುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು.

ಈಗಲೂ ಸಹ‌ ನಾವೆಲ್ಲಾ ಒಟ್ಟಾಗಿಯೇ ಇದ್ದೇವೆ,‌ ಪರಿಸ್ಥಿತಿಯನ್ನು ಒಟ್ಟಾಗಿಯೇ ಎದುರಿಸುತ್ತೇವೆ. 17 ಮಂದಿ ಶಾಸಕರನ್ನು ಅನರ್ಹಗೊಳಿಸಿದ ಅಂದಿನ ಸ್ಪೀಕರ್ ನಿಲುವು ಸಂವಿಧಾನ ಬಾಹಿರವಾದುದು. ಹೀಗಾಗಿ ನಾವು ಚುನಾವಣೆಗೆ ಸ್ಪರ್ಧಿಸಲು ಯಾವುದೇ ಅಭ್ಯಂತರವಿಲ್ಲ ಎಂದು ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್​ನಲ್ಲಿ ನಮ್ಮ ಪರವಾಗಿ ತೀರ್ಪು ಹೊರ ಬೀಳುವ ವಿಶ್ವಾಸವಿದೆ‌. ಉಪ ಚುನಾವಣೆಯಲ್ಲಿ ನಾನು ಖಂಡಿತ ಗೆಲ್ಲುತ್ತೇನೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ ಎಂದು ಬಿ ಸಿ ಪಾಟೀಲ್​ ಅಭಿಪ್ರಾಯಪಟ್ಟರು.

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​​ನಲ್ಲಿ ತಾಯಿಯಂತೆ ನಡೆದುಕೊಳ್ಳಲಿಲ್ಲ, ಉದ್ದೇಶಪೂರ್ವಕವಾಗಿ ನನಗೆ ಸಚಿವ ಸ್ಥಾನ ಕೈ ತಪ್ಪುವಂತೆ ಮಾಡಿದ್ರು ಎಂದು ಅನರ್ಹ ಶಾಸಕ ಶಾಸಕ ಬಿ.ಸಿ. ಪಾಟೀಲ್ ಆರೋಪಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕರು ಪಕ್ಷ ಬಿಡಲು ಕಾರಣವೇನೆಂದು ಕಾಂಗ್ರೆಸ್​ನವರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ. ಆರಂಭದ ದಿನಗಳಲ್ಲಿ ನಮಗೆ ಆಸೆ ಆಮಿಷಗಳನ್ನ ಒಡ್ಡಿದ್ದರೂ ನಾವು ಪಕ್ಷ ಬಿಟ್ಟಿರಲಿಲ್ಲ. ಆದರೆ ಒಂದು ವರ್ಷ 2 ತಿಂಗಳು ಕಾದು ದೃಢ ತೀರ್ಮಾನ ತೆಗೆದುಕೊಂಡಿದ್ದೇವೆ. ನಮ್ಮ ನಿರ್ಧಾರದ ಹಿಂದೆ ಸಮಗ್ರ ಕರ್ನಾಟಕದ ಅಭಿವೃದ್ಧಿಯ ಹಿತ, ಚಿಂತನೆ ಇದೆ. ಸಮ್ಮಿಶ್ರ ಸರ್ಕಾರದಿಂದ ಸಮಗ್ರ ಅಭಿವೃದ್ಧಿ ಸಾಧ್ಯವಿರಲಿಲ್ಲ. ಬಿಜೆಪಿ ಸರ್ಕಾರದಲ್ಲಿ ನಾವು ನಿರೀಕ್ಷಿಸಿದಂತೆ ಉತ್ತರ ಕರ್ನಾಟಕಕ್ಕೆ ಹೆಚ್ಚು ಒತ್ತು ಸಿಗುತ್ತಿದೆ. ನನ್ನದೇ ಕ್ಷೇತ್ರಕ್ಕೆ ಮೆಡಿಕಲ್‌ ಕಾಲೇಜು ಮಂಜೂರಾಗಿದೆ. ಬಹು‌ ದಿನಗಳ ಕನಸಾಗಿದ್ದ ಏತ ನೀರಾವರಿ ಯೋಜನೆ ಜಾರಿಗೆ ಬರುತ್ತಿದೆ ಎಂದರು.

ಅನರ್ಹ ಶಾಸಕ ಶಾಸಕ ಬಿ.ಸಿ. ಪಾಟೀಲ್

ಇನ್ನು, ಶಾಸಕರನ್ನು ದನ, ಕುರಿ, ಕೋಳಿಗಳಂತೆ ಬಿಜೆಪಿಯವರು ಖರೀದಿ ಮಾಡಿದ್ದಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯರ ಟೀಕೆಗೆ ಉತ್ತರಿಸಿದ ಬಿ.ಸಿ. ಪಾಟೀಲ್, ಅವರ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಕಾಂಗ್ರೆಸ್​ನಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ ನಮ್ಮನ್ನ ಹೇಗೆ ನಡೆಸಿಕೊಂಡರು ಅನ್ನೋದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ. ಇನ್ನು ಕುಮಾರಸ್ವಾಮಿ ಅವರಂತು ಕುಟುಂಬಕ್ಕೆ ಮಾತ್ರ ಸೀಮಿತರಾದರು. ಅಲ್ಲಿ ಎಲ್ಲವೂ ಸರಿಯಾಗಿದ್ದರೆ 14 ಮಂದಿ ಪಕ್ಷದಿಂದ ಹೊರಬರುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು.

ಈಗಲೂ ಸಹ‌ ನಾವೆಲ್ಲಾ ಒಟ್ಟಾಗಿಯೇ ಇದ್ದೇವೆ,‌ ಪರಿಸ್ಥಿತಿಯನ್ನು ಒಟ್ಟಾಗಿಯೇ ಎದುರಿಸುತ್ತೇವೆ. 17 ಮಂದಿ ಶಾಸಕರನ್ನು ಅನರ್ಹಗೊಳಿಸಿದ ಅಂದಿನ ಸ್ಪೀಕರ್ ನಿಲುವು ಸಂವಿಧಾನ ಬಾಹಿರವಾದುದು. ಹೀಗಾಗಿ ನಾವು ಚುನಾವಣೆಗೆ ಸ್ಪರ್ಧಿಸಲು ಯಾವುದೇ ಅಭ್ಯಂತರವಿಲ್ಲ ಎಂದು ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ. ಸುಪ್ರೀಂ ಕೋರ್ಟ್​ನಲ್ಲಿ ನಮ್ಮ ಪರವಾಗಿ ತೀರ್ಪು ಹೊರ ಬೀಳುವ ವಿಶ್ವಾಸವಿದೆ‌. ಉಪ ಚುನಾವಣೆಯಲ್ಲಿ ನಾನು ಖಂಡಿತ ಗೆಲ್ಲುತ್ತೇನೆ. ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ ಎಂದು ಬಿ ಸಿ ಪಾಟೀಲ್​ ಅಭಿಪ್ರಾಯಪಟ್ಟರು.

Intro:ಬಿ.ಸಿ.ಪಾಟೀಲ್Body:ಉದ್ದೇಶ ಪೂರ್ವಕವಾಗಿ ಮಂತ್ರಿ ಸ್ಥಾನ ತಪ್ಸಿದ್ರು: ಬಿ.ಸಿ.ಪಾಟೀಲ್ ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ನಲ್ಲಿ ತಾಯಿಯಂತೆ ನಡೆದುಕೊಳ್ಳಲಿಲ್ಲ.ಉದ್ದೇಶಪೂರ್ವಕವಾಗಿ ನನಗೆ ಮಂತ್ರಿ ಸ್ಥಾನ ಕೈತಪ್ಪುವಂತೆ ಮಾಡಿದ್ರು ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಹೇಳಿದ್ರು.
ಮೈಸೂರಿಗೆ ಭೇಟಿ ನೀಡಿದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ,ಅನರ್ಹ ಶಾಸಕರು ಕಾಂಗ್ರೆಸ್ ಬಿಡಲು ಕಾರಣವೇನೂಂತ ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ.ಆರಂಭ ದಿನಗಳಲ್ಲಿ ನಮಗೆ ಆಸೆ ಆಮಿಷಗಳನ್ನ ಒಡ್ಡಿದ್ರು ನಾವು ಪಕ್ಷ ಬಿಟ್ಟಿರಲಿಲ್ಲ.ಆದ್ರೆ 1 ವರ್ಷ 2 ತಿಂಗಳು ಕಾದು ತೀರ್ಮಾನ ತೆಗೆದುಕೊಂಡಿದ್ದೇವೆ.ನಮ್ಮ‌ ನಿರ್ಧಾರದ ಹಿಂದೆ ಸಮಗ್ರ ಕರ್ನಾಟಕದ ಅಭಿವೃದ್ದಿಯ ಹಿತ ಚಿಂತನೆ ಇದೆ ಎಂದರು.

ಸಮ್ಮಿಶ್ರ ಸರ್ಕಾರದಿಂದ ಸಮಗ್ರ ಅಭಿವೃದ್ದಿ ಸಾಧ್ಯವಿರಲಿಲ್ಲ.ಬಿಜೆಪಿ ಸರ್ಕಾರದಲ್ಲಿ ನಾವು ನಿರೀಕ್ಷಿಸಿದಂತೆ ಉತ್ತರ ಕರ್ನಾಟಕಕ್ಕೆ ಹೆಚ್ಚು ಒತ್ತು ಸಿಗುತ್ತಿದೆ.ನನ್ನದೇ ಕ್ಷೇತ್ರಕ್ಕೆ ಮೆಡಿಕಲ್‌ ಕಾಲೇಜು ಮಂಜೂರಾಗಿದೆ.ಬಹು‌ ದಿನಗಳ ಕನಸಾಗಿದ್ದ ಏತ ನೀರಾವರಿ ಯೋಜನೆ ಜಾರಿಗೆ ಬರುತ್ತಿದೆ.ಉತ್ತರ ಕರ್ನಾಟಕ ಅಭಿವೃದ್ದಿ ಆಶಯ‌ ಕೂಡ ಈಡೇರುತ್ತಿದೆ ಎಂದರು.

ಶಾಸಕರನ್ನು ದನ, ಕುರಿ, ಕೋಳೆಗಳಂತೆ ಬಿಜೆಪಿಯವರು ಖರೀದಿ ಮಾಡಿದ್ದಾರೆಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆಗೆ ಉತ್ತರಿಸಿದ ಬಿ.ಸಿ.ಪಾಟೀಲ್,ಅವರ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ.ಕಾಂಗ್ರೆಸ್ ನಲ್ಲಿ ನಮ್ಮನ್ನ ಹೇಗೆ ನಡೆಸಿಕೊಂಡರು ಅನ್ನೋದನ್ನ ನೋಡಲಿ.ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಾಗಿದ್ದರೆ 14 ಮಂದಿ ಪಕ್ಷದಿಂದ ಹೊರಬರುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದರು.

ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಹೇಗೆ ನಡೆದುಕೊಂಡ್ರು ಅನ್ನೋದು ಎಲ್ಲರಿಗೂ ಗೊತ್ತಿದೆ.ಇನ್ನು ಕುಮಾರಸ್ವಾಮಿ ಅವರಂತು ಕುಟುಂಬಕ್ಕೆ ಮಾತ್ರ ಸೀಮಿತರಾದರು.ಪಕ್ಷದಲ್ಲಿ ನಮ್ಮ ಕಷ್ಟ ಸುಖ ಕೇಳೋರೆ ದಿಕ್ಕಿರಲಿಲ್ಲ.
ಹಾಗಾಗಿ ನಾವೆಲ್ಲ‌ ಧೃಡ ತೀರ್ಮಾನ ಮಾಡಬೇಕಾಯಿತು ಎಂದರು.

ಈಗಲೂ ಸಹ‌ ನಾವೆಲ್ಲಾ ಒಟ್ಟಾಗಿಯೇ ಇದ್ದೇವೆ.‌ ಪರಿಸ್ಥಿತಿಯನ್ನು ಒಟ್ಟಾಗಿಯೇ ಎದುರಿಸುತ್ತೇವೆ.ಸುಪ್ರೀಂಕೋರ್ಟ್ ನಲ್ಲಿ ನಮ್ಮ ಪರವಾಗಿ ತೀರ್ಪು ಹೊರ ಬೀಳುವ ವಿಶ್ವಾಸವಿದೆ‌ ಎಂದು ತಿಳಿಸಿದರು.
17 ಮಂದಿ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ನಿಲುವು ಸಂವಿಧಾನ ಬಾಹೀರವಾದುದು.ಸ್ಪೀಕರ್ ನೈಸರ್ಗಿಕವಾಗಿ ನ್ಯಾಯ ಕೊಟ್ಟಿಲ್ಲ.ಇದೇ ಕಾರಣದಿಂದಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಲು ಯಾವುದೇ ಅಭ್ಯಂತರವಿಲ್ಲ ಎಂದು ಚುನಾವಣಾ ಆಯೋಗವು ಸ್ಪಷ್ಟಪಡಿಸಿದೆ ಎಂದರು.

ತೀರ್ಪು ಹೊರ ಬೀಳುತ್ತಿರುವುದರಿಂದ ಬಹುತೇಕ ಅನರ್ಹ ಶಾಸಕರು ದೆಹಲಿಗೆ ಹೋಗಿದ್ದಾರೆ.ನಮ್ಮ ಪರವಾಗಿಯೇ ತೀರ್ಪು ಬರುವ ವಿಶ್ವಾಸವಿದೆ.ನನ್ನ ಸ್ವಕ್ಷೇತ್ರದಲ್ಲಿ ಭಾರೀ ಮಳೆಯಾಗಿ ಹಾನಿ ಸಂಭವಿಸಿದೆ.ಹಾಗಾಗಿ ನಾನು ದೆಹಲಿಗೆ ಹೋಗುತ್ತಿಲ್ಲ.ಮೈಸೂರಿನಿಂದ ನೇರವಾಗಿ ನನ್ನ ಸ್ವಕ್ಷೇತ್ರಕ್ಕೆ ಹೋಗುತ್ತೇನೆ ಎಂದು ಹೇಳಿದರು.

ಉಪ ಚುನಾವಣೆಯಲ್ಲಿ ನಾನು ಖಂಡಿತ ಗೆಲ್ಲುತ್ತೇನೆ.ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ ಎಂದರು.Conclusion:ಬಿ.ಸಿ.ಪಾಟೀಲ್

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.