ETV Bharat / city

ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರ ಪ್ರತಿಭಟನೆ - ಪ್ರತಿಭಟನೆ

ಎಲ್ಲ ನಾಲೆಗಳಿಗೆ ಕೆಎಸ್​ಆರ್​ ಜಲಾಶಯದಿಂದ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸದಸ್ಯರ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.

farmers demand KRS water release to the canals
author img

By

Published : Aug 1, 2019, 5:06 PM IST

ಮೈಸೂರು: ಜಿಲ್ಲೆಯ ನಾಲೆಗಳಿಗೆ ಕೆಎಸ್​ಆರ್​ ಜಲಾಶಯದಿಂದ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸದಸ್ಯರ ನೇತೃತ್ವದಲ್ಲಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಈ ಬಾರಿ ಬರ ಅಧಿಕವಾದ ಪರಿಣಾಮ ರೈತರು ಹಾಗೂ ಜನರು ತತ್ತರಿಸಿ ಹೋಗಿದ್ದು, ಅತ್ಯಂತ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಮುಂಗಾರು ಫಸಲು ಬೆಳೆಯಲು ಅಚ್ಚುಕಟ್ಟು ನಾಲೆಗಳಿಗೆ ನೀರು ಬಿಡದ ಕಾರಣ ರೈತಾಪಿ ವರ್ಗ ಮತ್ತಷ್ಟು ಸಂಕಷ್ಟದ ದಿನಗಳನ್ನು ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಾಲೆಗಳಿಗೆ ನೀರು ಹರಿಸುವಂತೆ ಪ್ರತಿಭಟನೆ ನಡೆಸಿದ ರೈತರು

ರೈತರ ಬೇಡಿಕೆಗಳೇನು?

ಜಲಾಶಯಗಳು ಭರ್ತಿಯಾಗದ ಪರಿಣಾಮ ತಮಿಳುನಾಡಿಗೆ ಹರಿಸುವ ನೀರನ್ನು ತಕ್ಷಣವೇ ನಿಲ್ಲಿಸಬೇಕು. ಕಬಿನಿ ಜಲಾಶಯದಿಂದ ಎಡ ಮತ್ತು ಬಲದಂಡೆ ನಾಲೆಗೆ ನೀರು ಬಿಡಬೇಕು. ಹುಲ್ಲಹಳ್ಳಿ-ರಾಂಪುರ ನಾಲೆಗೆ ನೀರು ಒದಗಿಸಬೇಕು. ತಾರಕ ಜಲಾಶಯಕ್ಕೆ ಕಬಿನಿ ಹಿನ್ನೀರಿನಿಂದ ನೀರು ತುಂಬಿಸಿ, ಆ ಜಲಾಶಯದಿಂದ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸಬೇಕು. ಜಲಾಶಯಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಕೆರೆಗಳನ್ನು ತುಂಬಿಸಬೇಕು. ಹಾರಂಗಿ ಜಲಾಶಯದಿಂದ ಅಚ್ಚುಕಟ್ಟು ನಾಲೆಗೆ ನೀರು ಒದಗಿಸಬೇಕು ಎಂದು ಆಗ್ರಹಿಸಿದರು

ಮೈಸೂರು: ಜಿಲ್ಲೆಯ ನಾಲೆಗಳಿಗೆ ಕೆಎಸ್​ಆರ್​ ಜಲಾಶಯದಿಂದ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸದಸ್ಯರ ನೇತೃತ್ವದಲ್ಲಿ ರೈತರು ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಈ ಬಾರಿ ಬರ ಅಧಿಕವಾದ ಪರಿಣಾಮ ರೈತರು ಹಾಗೂ ಜನರು ತತ್ತರಿಸಿ ಹೋಗಿದ್ದು, ಅತ್ಯಂತ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಮುಂಗಾರು ಫಸಲು ಬೆಳೆಯಲು ಅಚ್ಚುಕಟ್ಟು ನಾಲೆಗಳಿಗೆ ನೀರು ಬಿಡದ ಕಾರಣ ರೈತಾಪಿ ವರ್ಗ ಮತ್ತಷ್ಟು ಸಂಕಷ್ಟದ ದಿನಗಳನ್ನು ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ನಾಲೆಗಳಿಗೆ ನೀರು ಹರಿಸುವಂತೆ ಪ್ರತಿಭಟನೆ ನಡೆಸಿದ ರೈತರು

ರೈತರ ಬೇಡಿಕೆಗಳೇನು?

ಜಲಾಶಯಗಳು ಭರ್ತಿಯಾಗದ ಪರಿಣಾಮ ತಮಿಳುನಾಡಿಗೆ ಹರಿಸುವ ನೀರನ್ನು ತಕ್ಷಣವೇ ನಿಲ್ಲಿಸಬೇಕು. ಕಬಿನಿ ಜಲಾಶಯದಿಂದ ಎಡ ಮತ್ತು ಬಲದಂಡೆ ನಾಲೆಗೆ ನೀರು ಬಿಡಬೇಕು. ಹುಲ್ಲಹಳ್ಳಿ-ರಾಂಪುರ ನಾಲೆಗೆ ನೀರು ಒದಗಿಸಬೇಕು. ತಾರಕ ಜಲಾಶಯಕ್ಕೆ ಕಬಿನಿ ಹಿನ್ನೀರಿನಿಂದ ನೀರು ತುಂಬಿಸಿ, ಆ ಜಲಾಶಯದಿಂದ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸಬೇಕು. ಜಲಾಶಯಗಳ ವ್ಯಾಪ್ತಿಯಲ್ಲಿ ಬರುವ ಎಲ್ಲ ಕೆರೆಗಳನ್ನು ತುಂಬಿಸಬೇಕು. ಹಾರಂಗಿ ಜಲಾಶಯದಿಂದ ಅಚ್ಚುಕಟ್ಟು ನಾಲೆಗೆ ನೀರು ಒದಗಿಸಬೇಕು ಎಂದು ಆಗ್ರಹಿಸಿದರು

Intro:ರೈತರ ಪ್ರತಿಭಟನೆ


Body:ರೈತರ ಪ್ರತಿಭಟನೆ


Conclusion:ಜಲಾಶಯಗಳಿಂದ ಎಲ್ಲ ನಾಲೆಗಳಿಗೆ ನೀರು ಹರಿಸುವಂತೆ ರೈತರ ಪ್ರತಿಭಟನೆ
ಮೈಸೂರು: ಜಿಲ್ಲೆಯಲ್ಲಿರುವ ಎಲ್ಲ ನಾಲೆಗಳಿಗೆ ಜಲಾಶಯಗಳಿಂದ ನೀರು ಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಕಾಡಾ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲೆಯಲ್ಲಿ ಉದ್ಭವವಾಗಿರುವ ಬರದಿಂದಾಗಿ ರೈತರು ಮತ್ತು ಸಾಮಾನ್ಯ ಜನರು ತತ್ತರಿಸಿ ಹೋಗಿದ್ದು, ಅತ್ಯಂತ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಮುಂಗಾರು ಫಸಲು ಬೆಳೆಯಲು ಅಚ್ಚುಕಟ್ಟು ನಾಲೆಗಳಿಗೆ ನೀರು ಒದಗಿಸದಿದ್ದಲ್ಲಿ ರೈತಾಪಿ ವರ್ಗ ಮತ್ತಷ್ಟು ಸಂಕಷ್ಟವನ್ನು ಅನುಭವಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಲಾಶಯಗಳು ಭರ್ತಿ ಆಗದೇ ಇರುವುದರಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣವೇ ನಿಲ್ಲಿಸಬೇಕು.ಕಬಿನಿ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗೆ ನೀರು ಬೀಡಬೇಕು.ಹುಲ್ಲಹಳ್ಳಿ-ರಾಂಪುರ ನಾಲೆಗೆ ನೀರು ಒದಗಿಸಬೇಕು.ತಾರಕ ಜಲಾಶಯಕ್ಕೆ ಕಬಿನಿ ಹಿನ್ನೀರಿನಿಂದ ನೀರು ತುಂಬಿಸಿ, ಆ ಜಲಾಶಯದಿಂದ ಅಚ್ಚುಕಟ್ಟು ನಾಲೆಗಳಿಗೆ ನೀರು ಹರಿಸಬೇಕು.ಜಲಾಶಯಗಳ ವ್ಯಾಪ್ತಿಯ ಬರುವ ಎಲ್ಲ ಕೆರೆಗಳನ್ನು ತುಂಬಿಸಬೇಕು.ಹಾರಂಗಿ ಜಲಾಶಯದಿಂದ ಅಚ್ಚುಕಟ್ಟು ನಾಲೆಗೆ ನೀರು ಒದಗಿಸಬೇಕು ಎಂದು ತಮ್ಮ ಬೇಡಿಕೆಗಳಿಗೆ ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಕೆಫೆ ಕಾಫಿ ಡೇ ಮಾಲೀಕ ಸಿ.ಜಿ.ಸಿದ್ಧಾಥ್೯ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.