ETV Bharat / city

ಕಟ್ಟಡ ಕಾರ್ಮಿಕರಿಗೆ ನೆರವಾಗಲು ಉಚಿತ ಬಸ್​ ಪಾಸ್​: ಕೆಎಸ್​ಆರ್​ಟಿಸಿ ಅಧ್ಯಕ್ಷ ಚಂದ್ರಪ್ಪ

ಕಟ್ಟಡ ಕಾರ್ಮಿಕರು ರಾಜ್ಯಾದ್ಯಂತ ಸಂಚರಿಸಲು ಉಚಿತ ಬಸ್​ ಪಾಸ್ ನೀಡಲಾಗುವುದು. ಇದರಿಂದ ಜಿಲ್ಲೆಯಿಂದ ಜಿಲ್ಲೆಗೆ ಕೂಲಿ ಕಾರ್ಮಿಕರು ಪ್ರಯಾಣ ಬೆಳೆಸಲು ಅನುಕೂಲವಾಗಲಿದೆ ಎಂದು ಕೆಎಸ್​ಆರ್​ಟಿಸಿ ಅಧ್ಯಕ್ಷ ಚಂದ್ರಪ್ಪ ತಿಳಿಸಿದ್ದಾರೆ.

author img

By

Published : Oct 12, 2020, 5:42 PM IST

Free bus pass to help building workers: KSRTC president Chandrappa
ಕಟ್ಟಡ ಕಾರ್ಮಿಕರಿಗೆ ನೆರವಾಗಲು ಉಚಿತ ಬಸ್​ ಪಾಸ್​: ಕೆಎಸ್​ಆರ್​ಟಿಸಿ ಅಧ್ಯಕ್ಷ ಚಂದ್ರಪ್ಪ

ಮೈಸೂರು: ಕೊರೊನಾದಿಂದ ತತ್ತರಿಸಿ ಹೋಗಿರುವ ಕಟ್ಟಡ ಕಾರ್ಮಿಕರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಚರಿಸಲು ಉಚಿತ ಬಸ್​ ಪಾಸ್ ನೀಡಲಾಗುವುದು ಎಂದು ಕೆಎಸ್​ಆರ್​ಟಿಸಿ ಅಧ್ಯಕ್ಷ ಚಂದ್ರಪ್ಪ ತಿಳಿಸಿದ್ದಾರೆ.

ಕಟ್ಟಡ ಕಾರ್ಮಿಕರಿಗೆ ನೆರವಾಗಲು ಉಚಿತ ಬಸ್​ ಪಾಸ್​: ಕೆಎಸ್​ಆರ್​ಟಿಸಿ ಅಧ್ಯಕ್ಷ ಚಂದ್ರಪ್ಪ

ಗ್ರಾಮಾಂತರ ವಿಭಾಗದ ಕಚೇರಿಯಲ್ಲಿ ಮಾಧ್ಯಮದಗೋಷ್ಟಿಯಲ್ಲಿ ಮಾತನಾಡಿದ ಅವರು,‌ ಮೈಸೂರು ಜಿಲ್ಲೆಯಲ್ಲಿ 60,600 ಕಟ್ಟಡ ಕಾರ್ಮಿಕರಿಗೆ ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ನಂತರದ ದಿನಗಳಲ್ಲಿ ಪ್ರತಿ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಿ, ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಇದರಿಂದ ಜಿಲ್ಲೆಯಿಂದ ಜಿಲ್ಲೆಗೆ ಕೂಲಿ ಕಾರ್ಮಿಕರು ಪ್ರಯಾಣ ಬೆಳೆಸಲು ಅನುಕೂಲವಾಗಲಿದೆ. ಕೊರೊನಾದಿಂದ ರಾಜ್ಯ ಸಾರಿಗೆ ಇಲಾಖೆಗೆ 1,600 ಕೋಟಿ ರೂ. ನಷ್ಟ ಉಂಟಾಗಿದೆ. ರಾಜ್ಯ ಸರ್ಕಾರ 1,385 ಕೋಟಿ ರೂ. ನೀಡುವ ಮೂಲಕ ನೌಕರರಿಗೆ ಸಂಬಳದ ತೊಂದರೆಯಾಗದಂತೆ ನೋಡಿಕೊಂಡಿದೆ ಎಂದರು.

ಕೊರೊನಾ ಸಂದರ್ಭದಲ್ಲಿ ಮೈಸೂರು ನಗರ ಹಾಗೂ ಮೈಸೂರು ಗ್ರಾಮಾಂತರ ವಿಭಾಗಗಳಿಂದ 70 ಕೋಟಿ ರೂ. ನಷ್ಟ ಉಂಟಾಗಿದೆ. ಈ ಎರಡು ವಿಭಾಗಗಳನ್ನು ಒಂದು ಗೂಡಿಸಬೇಕು ಎಂಬ ಚಿಂತನೆ ಮಾಡಲಾಗಿದ್ದು, ಇದರಿಂದ ನಷ್ಟ ಕೂಡ ಸ್ವಲ್ಪ ಕಡಿಮೆಯಾಗಲಿದೆ ಎಂದು ಚಂದ್ರಪ್ಪ ಅಭಿಪ್ರಾಯಪಟ್ಟರು.

ಮೈಸೂರು: ಕೊರೊನಾದಿಂದ ತತ್ತರಿಸಿ ಹೋಗಿರುವ ಕಟ್ಟಡ ಕಾರ್ಮಿಕರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಸಂಚರಿಸಲು ಉಚಿತ ಬಸ್​ ಪಾಸ್ ನೀಡಲಾಗುವುದು ಎಂದು ಕೆಎಸ್​ಆರ್​ಟಿಸಿ ಅಧ್ಯಕ್ಷ ಚಂದ್ರಪ್ಪ ತಿಳಿಸಿದ್ದಾರೆ.

ಕಟ್ಟಡ ಕಾರ್ಮಿಕರಿಗೆ ನೆರವಾಗಲು ಉಚಿತ ಬಸ್​ ಪಾಸ್​: ಕೆಎಸ್​ಆರ್​ಟಿಸಿ ಅಧ್ಯಕ್ಷ ಚಂದ್ರಪ್ಪ

ಗ್ರಾಮಾಂತರ ವಿಭಾಗದ ಕಚೇರಿಯಲ್ಲಿ ಮಾಧ್ಯಮದಗೋಷ್ಟಿಯಲ್ಲಿ ಮಾತನಾಡಿದ ಅವರು,‌ ಮೈಸೂರು ಜಿಲ್ಲೆಯಲ್ಲಿ 60,600 ಕಟ್ಟಡ ಕಾರ್ಮಿಕರಿಗೆ ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ. ನಂತರದ ದಿನಗಳಲ್ಲಿ ಪ್ರತಿ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಿ, ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು. ಇದರಿಂದ ಜಿಲ್ಲೆಯಿಂದ ಜಿಲ್ಲೆಗೆ ಕೂಲಿ ಕಾರ್ಮಿಕರು ಪ್ರಯಾಣ ಬೆಳೆಸಲು ಅನುಕೂಲವಾಗಲಿದೆ. ಕೊರೊನಾದಿಂದ ರಾಜ್ಯ ಸಾರಿಗೆ ಇಲಾಖೆಗೆ 1,600 ಕೋಟಿ ರೂ. ನಷ್ಟ ಉಂಟಾಗಿದೆ. ರಾಜ್ಯ ಸರ್ಕಾರ 1,385 ಕೋಟಿ ರೂ. ನೀಡುವ ಮೂಲಕ ನೌಕರರಿಗೆ ಸಂಬಳದ ತೊಂದರೆಯಾಗದಂತೆ ನೋಡಿಕೊಂಡಿದೆ ಎಂದರು.

ಕೊರೊನಾ ಸಂದರ್ಭದಲ್ಲಿ ಮೈಸೂರು ನಗರ ಹಾಗೂ ಮೈಸೂರು ಗ್ರಾಮಾಂತರ ವಿಭಾಗಗಳಿಂದ 70 ಕೋಟಿ ರೂ. ನಷ್ಟ ಉಂಟಾಗಿದೆ. ಈ ಎರಡು ವಿಭಾಗಗಳನ್ನು ಒಂದು ಗೂಡಿಸಬೇಕು ಎಂಬ ಚಿಂತನೆ ಮಾಡಲಾಗಿದ್ದು, ಇದರಿಂದ ನಷ್ಟ ಕೂಡ ಸ್ವಲ್ಪ ಕಡಿಮೆಯಾಗಲಿದೆ ಎಂದು ಚಂದ್ರಪ್ಪ ಅಭಿಪ್ರಾಯಪಟ್ಟರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.