ETV Bharat / city

ನಾರಾಯಣ ಗುರು ಸಾಮಾಜಿಕ ಕ್ರಾಂತಿಯ ಹರಿಕಾರ.. ಯಾರ್‌ರೀ ಅದು ಹೆಡ್ಗೇವಾರ್‌.. ಪಠ್ಯದಲ್ಲಿ ಕೇಸರೀಕರಣ ಒಳ್ಳೇದಲ್ಲ.. ಹೆಚ್ ವಿಶ್ವನಾಥ್ ಕಿಡಿ

author img

By

Published : May 21, 2022, 4:40 PM IST

ಧರ್ಮಾಧಾರಿತ ಪಠ್ಯ ಯಾವುದೇ ಕಾರಣಕ್ಕೂ ಬೇಡ. ಪಠ್ಯ ಪುಸ್ತಕಗಳಲ್ಲಿ ಕೇಸರೀಕರಣ ನುಸುಳುತ್ತಿರುವುದು ಅಪಾಯಕಾರಿ ಎಂದು ಹೇಳಿದರು. ನಾರಾಯಣಗುರು ಸಾಮಾಜಿಕ ಕ್ರಾಂತಿಯ ಹರಿಕಾರ. ಅವರನ್ನು ಪಠ್ಯದಿಂದ ತೆಗೆಯುವುದು ತಪ್ಪು ನಿರ್ಧಾರ. ಈ ಹೆಡ್ಗೇವಾರ್ ಯಾರೂ ಎಂಬುದೇ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿದರು..

h-vishwanth-statement-about-minister-vijayendra
ವಿಜಯೇಂದ್ರನ ಮಿನಿಸ್ಟರ್ ಮಾಡಿದರೆ ಗುಣಾತ್ಮಕ ಬದಲಾವಣೆ ಆಗುತ್ತಾ ? : ಹೆಚ್ ವಿಶ್ವನಾಥ್ ಪ್ರಶ್ನೆ

ಮೈಸೂರು : ಸರ್ಕಾರದಲ್ಲಿ ಗುಣಾತ್ಮಕ ಸುಧಾರಣೆಗೆ ಬದಲಾವಣೆಗಳು ಆಗಬೇಕು. ವಿಜಯೇಂದ್ರರನ್ನು ಮಂತ್ರಿ ಮಾಡಿದರೆ ಗುಣಾತ್ಮಕ ಬದಲಾವಣೆ ಆಗಲು ಸಾಧ್ಯವೇ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ ವಿಶ್ವನಾಥ್, ವಿಜಯೇಂದ್ರಗೆ ಸಚಿವ ಸ್ಥಾನ ನೀಡುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ವಿಜಯೇಂದ್ರ ಸಚಿವ ಆಗುವುದಾದರೆ ಆಗಲಿ ಬಿಡಿ. ಆದರೆ, ಗುಣಾತ್ಮಕ ಸುಧಾರಣೆಗೆ ಬದಲಾವಣೆಗಳು ಆಗಬೇಕು. ವಿಜಯೇಂದ್ರನಿಗೆ ಮಂತ್ರಿ ಸ್ಥಾನ ನೀಡಿದರೆ ಗುಣಾತ್ಮಕ ಬದಲಾವಣೆ ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಯಾರ್ರೀ ಅದು ಹೆಡ್ಗೇವಾರ್?: ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ರಾಜಕೀಯ ಸಂಘರ್ಷ ಒಳ್ಳೆಯದಲ್ಲ. ನಾವೆಲ್ಲಾ ಸೇರಿ ಶಿಕ್ಷಣವನ್ನು ಹಾಳು ಮಾಡುತ್ತಿದ್ದೇವೆ. ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞನಲ್ಲ. 12 ಪುಸ್ತಕ ಬರೆದಿದ್ದಾನೆ. ಒಂದೆರಡು ಲೇಖನಗಳನ್ನ ಬರೆದಿದ್ದಾನೆ. ಆತ ಸಂಘ ಪರಿವಾರದ ಕಾರ್ಯಕರ್ತ. ಇಂಥವರನ್ನು ಅಧ್ಯಕ್ಷನನ್ನಾಗಿ ಮಾಡಿರುವುದು ದುರಂತ.

ಧರ್ಮಾಧಾರಿತ ಪಠ್ಯ ಯಾವುದೇ ಕಾರಣಕ್ಕೂ ಬೇಡ. ಪಠ್ಯ ಪುಸ್ತಕಗಳಲ್ಲಿ ಕೇಸರೀಕರಣ ನುಸುಳುತ್ತಿರುವುದು ಅಪಾಯಕಾರಿ ಎಂದು ಹೇಳಿದರು. ನಾರಾಯಣಗುರು ಸಾಮಾಜಿಕ ಕ್ರಾಂತಿಯ ಹರಿಕಾರ. ಅವರನ್ನು ಪಠ್ಯದಿಂದ ತೆಗೆಯುವುದು ತಪ್ಪು ನಿರ್ಧಾರ. ಈ ಹೆಡ್ಗೇವಾರ್ ಯಾರೂ ಎಂಬುದೇ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿದರು.

ಪಠ್ಯ ಪುಸ್ತಕಗಳಲ್ಲಿ ಕೇಸರೀಕರಣ ಅಪಾಯಕಾರಿ ಬೆಳವಣಿಗೆ ಎಂದು ಬಿಜೆಪಿ ಎಂಎಲ್‌ಸಿ ಹೆಚ್ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿರುವುದು..

ಉಸ್ತುವಾರಿ ಸಚಿವರು ಎಲ್ಲಿದ್ದೀರಿ : ಕಳೆದ ಕೆಲವು ದಿನಗಳಿಂದ ಸತತ ಮಳೆಯಾಗುತ್ತಿದೆ. ಹಲವು ಕಡೆಗಳಲ್ಲಿ ಹಾನಿಯಾಗಿದೆ. ಆದರೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೂ ಕಾಣುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ದೂರದೃಷ್ಟಿ ಇಲ್ಲ,ಪ್ರಾಮಾಣಿಕತೆ ಕೊರತೆ ಎದ್ದು ಕಾಣುತ್ತಿದೆ ಎಂದು ಹೇಳಿದ್ದಾರೆ.

ಓದಿ : ಪ್ರಧಾನಿ ಭಾಷಾ ಹೇಳಿಕೆಗೆ ಕಿಚ್ಚ ಸುದೀಪ್​ ಸ್ವಾಗತ..'ಮಾತೃಭಾಷೆಗೆ ಸಿಕ್ಕ ಗೌರವ' ಎಂದ ನಟ

ಮೈಸೂರು : ಸರ್ಕಾರದಲ್ಲಿ ಗುಣಾತ್ಮಕ ಸುಧಾರಣೆಗೆ ಬದಲಾವಣೆಗಳು ಆಗಬೇಕು. ವಿಜಯೇಂದ್ರರನ್ನು ಮಂತ್ರಿ ಮಾಡಿದರೆ ಗುಣಾತ್ಮಕ ಬದಲಾವಣೆ ಆಗಲು ಸಾಧ್ಯವೇ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ ವಿಶ್ವನಾಥ್, ವಿಜಯೇಂದ್ರಗೆ ಸಚಿವ ಸ್ಥಾನ ನೀಡುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ವಿಜಯೇಂದ್ರ ಸಚಿವ ಆಗುವುದಾದರೆ ಆಗಲಿ ಬಿಡಿ. ಆದರೆ, ಗುಣಾತ್ಮಕ ಸುಧಾರಣೆಗೆ ಬದಲಾವಣೆಗಳು ಆಗಬೇಕು. ವಿಜಯೇಂದ್ರನಿಗೆ ಮಂತ್ರಿ ಸ್ಥಾನ ನೀಡಿದರೆ ಗುಣಾತ್ಮಕ ಬದಲಾವಣೆ ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಯಾರ್ರೀ ಅದು ಹೆಡ್ಗೇವಾರ್?: ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ರಾಜಕೀಯ ಸಂಘರ್ಷ ಒಳ್ಳೆಯದಲ್ಲ. ನಾವೆಲ್ಲಾ ಸೇರಿ ಶಿಕ್ಷಣವನ್ನು ಹಾಳು ಮಾಡುತ್ತಿದ್ದೇವೆ. ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ರೋಹಿತ್ ಚಕ್ರತೀರ್ಥ ಶಿಕ್ಷಣ ತಜ್ಞನಲ್ಲ. 12 ಪುಸ್ತಕ ಬರೆದಿದ್ದಾನೆ. ಒಂದೆರಡು ಲೇಖನಗಳನ್ನ ಬರೆದಿದ್ದಾನೆ. ಆತ ಸಂಘ ಪರಿವಾರದ ಕಾರ್ಯಕರ್ತ. ಇಂಥವರನ್ನು ಅಧ್ಯಕ್ಷನನ್ನಾಗಿ ಮಾಡಿರುವುದು ದುರಂತ.

ಧರ್ಮಾಧಾರಿತ ಪಠ್ಯ ಯಾವುದೇ ಕಾರಣಕ್ಕೂ ಬೇಡ. ಪಠ್ಯ ಪುಸ್ತಕಗಳಲ್ಲಿ ಕೇಸರೀಕರಣ ನುಸುಳುತ್ತಿರುವುದು ಅಪಾಯಕಾರಿ ಎಂದು ಹೇಳಿದರು. ನಾರಾಯಣಗುರು ಸಾಮಾಜಿಕ ಕ್ರಾಂತಿಯ ಹರಿಕಾರ. ಅವರನ್ನು ಪಠ್ಯದಿಂದ ತೆಗೆಯುವುದು ತಪ್ಪು ನಿರ್ಧಾರ. ಈ ಹೆಡ್ಗೇವಾರ್ ಯಾರೂ ಎಂಬುದೇ ಗೊತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿದರು.

ಪಠ್ಯ ಪುಸ್ತಕಗಳಲ್ಲಿ ಕೇಸರೀಕರಣ ಅಪಾಯಕಾರಿ ಬೆಳವಣಿಗೆ ಎಂದು ಬಿಜೆಪಿ ಎಂಎಲ್‌ಸಿ ಹೆಚ್ ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿರುವುದು..

ಉಸ್ತುವಾರಿ ಸಚಿವರು ಎಲ್ಲಿದ್ದೀರಿ : ಕಳೆದ ಕೆಲವು ದಿನಗಳಿಂದ ಸತತ ಮಳೆಯಾಗುತ್ತಿದೆ. ಹಲವು ಕಡೆಗಳಲ್ಲಿ ಹಾನಿಯಾಗಿದೆ. ಆದರೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೂ ಕಾಣುತ್ತಿಲ್ಲ. ರಾಜ್ಯ ಸರ್ಕಾರಕ್ಕೆ ದೂರದೃಷ್ಟಿ ಇಲ್ಲ,ಪ್ರಾಮಾಣಿಕತೆ ಕೊರತೆ ಎದ್ದು ಕಾಣುತ್ತಿದೆ ಎಂದು ಹೇಳಿದ್ದಾರೆ.

ಓದಿ : ಪ್ರಧಾನಿ ಭಾಷಾ ಹೇಳಿಕೆಗೆ ಕಿಚ್ಚ ಸುದೀಪ್​ ಸ್ವಾಗತ..'ಮಾತೃಭಾಷೆಗೆ ಸಿಕ್ಕ ಗೌರವ' ಎಂದ ನಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.