ETV Bharat / city

ಭಗತ್ ಸಿಂಗ್, ನಾರಾಯಣಗುರು ಪಠ್ಯ ಕೈಬಿಟ್ಟಿಲ್ಲ‌: ಪ್ರತಾಪ್‌ ಸಿಂಹ

author img

By

Published : May 19, 2022, 12:40 PM IST

ಪಠ್ಯಪುಸ್ತಕದಿಂದ ಭಗತ್ ಸಿಂಗ್, ನಾರಾಯಣಗುರು ಪಠ್ಯವನ್ನು ಕೈಬಿಡಲಾಗಿದೆ ಎಂಬ ಕಾಂಗ್ರೆಸ್‌ ಟೀಕೆಯ ಬಗ್ಗೆ ಸಂಸದ ಪ್ರತಾಪ್‌ ಸಿಂಹ ಪ್ರತಿಕ್ರಿಯಿಸಿದರು.

Lessons on Bhagat Singh not removed from books, Lessons on Narayana Guru not removed from books, MP Pratap simha news, ಪಠ್ಯಪುಸ್ತಕದಿಂದ ಭಗತ್ ಸಿಂಗ್ ಅಧ್ಯಯ ತೆಗೆದುಹಾಕಿಲ್ಲ, ಪಠ್ಯಪುಸ್ತಕದಿಂದ ನಾರಾಯಣ ಗುರು ಅಧ್ಯಯ ತೆಗೆದುಹಾಕಿಲ್ಲ, ಸಂಸದ ಪ್ರತಾಪ್​ ಸಿಂಹ ಸುದ್ದಿ,
ಪ್ರತಾಪ ಸಿಂಹ

ಮೈಸೂರು: ಪಠ್ಯಪುಸ್ತಕದಿಂದ ಭಗತ್ ಸಿಂಗ್ ಮತ್ತು ನಾರಾಯಣಗುರು ಅವರ ಪಠ್ಯವನ್ನು ಕೈಬಿಟ್ಟಿಲ್ಲ‌. ಕಾಂಗ್ರೆಸ್ ವಿನಾಕಾರಣ ಈ ವಿಚಾರದಲ್ಲಿ ವಿವಾದ ಮಾಡುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು.

ಕಾಂಗ್ರೆಸ್‌ಗೆ ದಿಢೀರನೆ ಭಗತ್ ಸಿಂಗ್ ಮೇಲೆ ಯಾಕೆ ಇಷ್ಟೊಂದು ಪ್ರೀತಿ ಬಂತೋ ಗೊತ್ತಾಗುತ್ತಿಲ್ಲ. ಭಗತ್ ಸಿಂಗ್ ಪಠ್ಯ ಮುಂದುವರೆದಿದೆ. ನಾರಾಯಣಗುರು ಅವರ ಪಠ್ಯ ಒಂದು ವಿಷಯದಿಂದ ಮತ್ತೊಂದು ವಿಷಯಕ್ಕೆ ವರ್ಗಾವಣೆಯಾಗಿದೆ ಎಂದರು.


ಆರ್​ಎಸ್ಎಸ್ ಸಂಸ್ಥಾಪಕ ಕೆ.ಬಿ.ಹೆಗಡೆವಾರ್ ಅವರ ಪಠ್ಯ ಯಾಕಿರಬಾರದು. ಅವರು ದೇಶಪ್ರೇಮದ ಬಗ್ಗೆ ಮಾಡಿದ ಭಾಷಣ ಮಕ್ಕಳಿಗೆ ಸ್ಪೂರ್ತಿಯಾಗಲು ಪಠ್ಯದಲ್ಲಿ ಅಳವಡಿಸಿದ್ದೇವೆ. ಅದರಲ್ಲಿ ತಪ್ಪೇನಿದೆ?. ಚಕ್ರವರ್ತಿ ಸೂಲಿಬೆಲೆ ಒಬ್ಬ ಶ್ರೇಷ್ಠ ವಾಗ್ಮಿ. ಅವರು ರಚಿಸಿದ ಪಠ್ಯ ಮಕ್ಕಳಲ್ಲಿ ದೇಶಭಕ್ತಿ ತುಂಬಲಿದೆ. ಇದರಲ್ಲೂ ಕಾಂಗ್ರೆಸ್‌ನವರು ತಪ್ಪು ಹುಡುಕುವುದು ಹೇಗೆ? ಎಂದು ಕೇಳಿದರು.

ಇದನ್ನೂ ಓದಿ: ಹಿಂದಿ ಎಂದ್ಕೂಡಲೇ ಭೂತನೋ, ಸೈತಾನೋ ಎನ್ನುವಂತೆ ನೋಡ್ಬೇಡಿ.. ಶಾ ಹೇಳಿಕೆ ತಿರುಚಲಾಗುತ್ತಿದೆ : ಪ್ರತಾಪ್​ ಸಿಂಹ

‘ಬೋಲೋ ಭಾರತ್ ಮಾತಾಕೀ ಜೈ’ ಅನ್ನೋದಕ್ಕೂ ಕಾಂಗ್ರೆಸ್​ನಲ್ಲಿ ಸಮಸ್ಯೆ ಇದೆ. ದೇಶಪ್ರೇ‌‌ಮದ ಪಾಠ ಬೋಧಿಸುವುದು ಕಾಂಗ್ರೆಸ್​ಗೆ ಸರಿ ತೋಚುತ್ತಿಲ್ಲ. ಕಾಂಗ್ರೆಸ್ ಯಾವಾಗಲೂ ದೇಶ ವಿರೋಧಿಯಾಗಿಯೇ ವರ್ತಿಸುತ್ತಿದೆ ಎಂದು ಕಿಡಿಕಾರಿದರು.

ನಗರದ ರಸ್ತೆಗಳು ಗುಂಡಿಬಿದ್ದ ವಿಚಾರವಾಗಿ ಪ್ರತಿಕ್ರಿಯಿಸಿ, ಕೆಲ ಪಾಲಿಕೆ ಸದಸ್ಯರಿಗೆ ರಸ್ತೆ ಗುಂಡಿ‌ ಮುಚ್ಚುವ ಕನಿಷ್ಠ ಜ್ಞಾನವೂ ಇಲ್ಲ. ಗುಂಡಿಗಳಿಗೆ ಮಣ್ಣು ಹಾಕಿದ್ದಾರೆ, ಮಳೆಗೆ ಮತ್ತೆ ಮಣ್ಣು ಕೊಚ್ಚಿಹೋಗುತ್ತಿದೆ. ನಿಮ್ಮ ಮನೆಯ ರಸ್ತೆ ಸರಿ ಇಲ್ವಾ, ನೀರು ಬರ್ತಿಲ್ವಾ, ಕಸ ತೆಗೆದಿಲ್ವಾ? ಪಾಲಿಕೆ ಸದಸ್ಯರ ಮನೆ ಮುಂದೆ ಧರಣಿ ಕೂತುಕೊಳ್ಳಿ. ಆಗ ಅವರೇ ರಸ್ತೆಗೆ ಬಂದು ಕೆಲಸ‌ ಮಾಡ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು: ಪಠ್ಯಪುಸ್ತಕದಿಂದ ಭಗತ್ ಸಿಂಗ್ ಮತ್ತು ನಾರಾಯಣಗುರು ಅವರ ಪಠ್ಯವನ್ನು ಕೈಬಿಟ್ಟಿಲ್ಲ‌. ಕಾಂಗ್ರೆಸ್ ವಿನಾಕಾರಣ ಈ ವಿಚಾರದಲ್ಲಿ ವಿವಾದ ಮಾಡುತ್ತಿದೆ ಎಂದು ಸಂಸದ ಪ್ರತಾಪ್‌ ಸಿಂಹ ಹೇಳಿದರು.

ಕಾಂಗ್ರೆಸ್‌ಗೆ ದಿಢೀರನೆ ಭಗತ್ ಸಿಂಗ್ ಮೇಲೆ ಯಾಕೆ ಇಷ್ಟೊಂದು ಪ್ರೀತಿ ಬಂತೋ ಗೊತ್ತಾಗುತ್ತಿಲ್ಲ. ಭಗತ್ ಸಿಂಗ್ ಪಠ್ಯ ಮುಂದುವರೆದಿದೆ. ನಾರಾಯಣಗುರು ಅವರ ಪಠ್ಯ ಒಂದು ವಿಷಯದಿಂದ ಮತ್ತೊಂದು ವಿಷಯಕ್ಕೆ ವರ್ಗಾವಣೆಯಾಗಿದೆ ಎಂದರು.


ಆರ್​ಎಸ್ಎಸ್ ಸಂಸ್ಥಾಪಕ ಕೆ.ಬಿ.ಹೆಗಡೆವಾರ್ ಅವರ ಪಠ್ಯ ಯಾಕಿರಬಾರದು. ಅವರು ದೇಶಪ್ರೇಮದ ಬಗ್ಗೆ ಮಾಡಿದ ಭಾಷಣ ಮಕ್ಕಳಿಗೆ ಸ್ಪೂರ್ತಿಯಾಗಲು ಪಠ್ಯದಲ್ಲಿ ಅಳವಡಿಸಿದ್ದೇವೆ. ಅದರಲ್ಲಿ ತಪ್ಪೇನಿದೆ?. ಚಕ್ರವರ್ತಿ ಸೂಲಿಬೆಲೆ ಒಬ್ಬ ಶ್ರೇಷ್ಠ ವಾಗ್ಮಿ. ಅವರು ರಚಿಸಿದ ಪಠ್ಯ ಮಕ್ಕಳಲ್ಲಿ ದೇಶಭಕ್ತಿ ತುಂಬಲಿದೆ. ಇದರಲ್ಲೂ ಕಾಂಗ್ರೆಸ್‌ನವರು ತಪ್ಪು ಹುಡುಕುವುದು ಹೇಗೆ? ಎಂದು ಕೇಳಿದರು.

ಇದನ್ನೂ ಓದಿ: ಹಿಂದಿ ಎಂದ್ಕೂಡಲೇ ಭೂತನೋ, ಸೈತಾನೋ ಎನ್ನುವಂತೆ ನೋಡ್ಬೇಡಿ.. ಶಾ ಹೇಳಿಕೆ ತಿರುಚಲಾಗುತ್ತಿದೆ : ಪ್ರತಾಪ್​ ಸಿಂಹ

‘ಬೋಲೋ ಭಾರತ್ ಮಾತಾಕೀ ಜೈ’ ಅನ್ನೋದಕ್ಕೂ ಕಾಂಗ್ರೆಸ್​ನಲ್ಲಿ ಸಮಸ್ಯೆ ಇದೆ. ದೇಶಪ್ರೇ‌‌ಮದ ಪಾಠ ಬೋಧಿಸುವುದು ಕಾಂಗ್ರೆಸ್​ಗೆ ಸರಿ ತೋಚುತ್ತಿಲ್ಲ. ಕಾಂಗ್ರೆಸ್ ಯಾವಾಗಲೂ ದೇಶ ವಿರೋಧಿಯಾಗಿಯೇ ವರ್ತಿಸುತ್ತಿದೆ ಎಂದು ಕಿಡಿಕಾರಿದರು.

ನಗರದ ರಸ್ತೆಗಳು ಗುಂಡಿಬಿದ್ದ ವಿಚಾರವಾಗಿ ಪ್ರತಿಕ್ರಿಯಿಸಿ, ಕೆಲ ಪಾಲಿಕೆ ಸದಸ್ಯರಿಗೆ ರಸ್ತೆ ಗುಂಡಿ‌ ಮುಚ್ಚುವ ಕನಿಷ್ಠ ಜ್ಞಾನವೂ ಇಲ್ಲ. ಗುಂಡಿಗಳಿಗೆ ಮಣ್ಣು ಹಾಕಿದ್ದಾರೆ, ಮಳೆಗೆ ಮತ್ತೆ ಮಣ್ಣು ಕೊಚ್ಚಿಹೋಗುತ್ತಿದೆ. ನಿಮ್ಮ ಮನೆಯ ರಸ್ತೆ ಸರಿ ಇಲ್ವಾ, ನೀರು ಬರ್ತಿಲ್ವಾ, ಕಸ ತೆಗೆದಿಲ್ವಾ? ಪಾಲಿಕೆ ಸದಸ್ಯರ ಮನೆ ಮುಂದೆ ಧರಣಿ ಕೂತುಕೊಳ್ಳಿ. ಆಗ ಅವರೇ ರಸ್ತೆಗೆ ಬಂದು ಕೆಲಸ‌ ಮಾಡ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.