ETV Bharat / city

ಪ್ರಮೋದಾದೇವಿ ಒಡೆಯರ್ ಭೇಟಿ ಮಾಡಿದ ಸಚಿವ ರಮೇಶ್ ಜಾರಕಿಹೊಳಿ

author img

By

Published : May 29, 2020, 7:03 PM IST

ಕಳೆದ ಎರಡು ದಿನಗಳಿಂದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಪ್ರವಾಸದಲ್ಲಿರುವ ಸಚಿವ ರಮೇಶ್ ಜಾರಕಿಹೊಳಿ, ಶುಕ್ರವಾರ ಸಂಜೆ ಮೈಸೂರಿನ ಅರಮನೆ ಹಿಂಬದಿಯ ನಿವಾಸದಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿ ಮಾಡಿದರು.

Pramoda Devi Wadiyar
ಪ್ರಮೋದದೇವಿ ಒಡೆಯರ್ ಅವರನ್ನು ಭೇಟಿ ಮಾಡಿದ ಸಚಿವ ರಮೇಶ್ ಜಾರಕಿಹೊಳಿ

ಮೈಸೂರು: ಸಚಿವ ರಮೇಶ್ ಜಾರಕಿಹೊಳಿ ಅವರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಮೈಸೂರಿನ ಅರಮನೆಯಲ್ಲಿ ಭೇಟಿಯಾಗಿ, ಕೆಆರ್​ಎಸ್ ಮುಂಭಾಗದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು.

Minister Ramesh Jarkiholi
ಕೆಆರ್​ಎಸ್ ಮುಂಭಾಗ ಒಡೆಯರ್, ಸರ್​ಎಂವಿ ಪ್ರತಿಮೆ‌ ಸ್ಥಾಪನೆ

ಕಳೆದ ಎರಡು ದಿನಗಳಿಂದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಪ್ರವಾಸದಲ್ಲಿರುವ ಸಚಿವರು, ಶುಕ್ರವಾರ ಸಂಜೆ ಮೈಸೂರಿನ ಅರಮನೆಗೆ ಭೇಟಿ ನೀಡಿದರು. ಈ ವೇಳೆ ಕೆಆರ್​ಎಸ್ ಅಣೆಕಟ್ಟೆಯ ದಕ್ಷಿಣ ದ್ವಾರದ ಮುಂಭಾಗದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್.ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗಳ ನಿರ್ಮಾಣದ ಕಾಮಗಾರಿ ನಡೆಯುತ್ತಿರುವ ಬಗ್ಗೆ ಸಚಿವರು ಪ್ರಮೋದಾದೇವಿ ಒಡೆಯರ್​ಗೆ ವಿವರಿಸಿದರು.

ನೀರಾವರಿ, ಹೈನುಗಾರಿಕೆ, ಕೃಷಿ ಇಂದಿಗೂ ಕರ್ನಾಟಕದಲ್ಲಿ ಸಮೃದ್ಧಿಯಿಂದ ಇದೆ ಎಂದರೆ ಮೈಸೂರು ಸಂಸ್ಥಾನದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಸಾಕಷ್ಟಿದೆ. ಬರಡಾಗಿದ್ದ ಬಯಲು‌ಸೀಮೆಗೆ ನೀರು ಒದಗಿಸಲು ವಾಣಿವಿಲಾಸ ಸಾಗರ ಜಲಾಶಯ ನಿರ್ಮಿಸಿದ ಅರಸರು, ತಮ್ಮ ಚಿನ್ನವನ್ನು ಮಾರಿ ಕೃಷ್ಣರಾಜಸಾಗರ ಅಣೆಕಟ್ಟು ಕಟ್ಟಿದ್ದರು. ಈ ಮೂಲಕ ಕಾವೇರಿ ನೀರು ರೈತರ ಜಮೀನಿಗೆ ಹರಿಸಿ ಕೋಟ್ಯಂತರ ಜನರ ಕಷ್ಟದ ಕಣ್ಣೀರು ಒರೆಸಿದರು ಎಂದು ಶ್ಲಾಘಿಸಿದರು.

ಹರ್ಷ ವ್ಯಕ್ತಪಡಿಸಿದ ಪ್ರಮೋದಾದೇವಿ ಒಡೆಯರ್

ರಾಜರ್ಷಿ‌ ಒಡೆಯರ್ ಮತ್ತು ಸರ್​ಎಂವಿ ಅವರ ಪ್ರತಿಮೆ ನಿರ್ಮಾಣ ಮಾಡುತ್ತಿರುವ ಜಲಸಂಪನ್ಮೂಲ ಇಲಾಖೆಯ ಕಾರ್ಯವನ್ನು ಶ್ಲಾಘಿಸಿದ ರಾಜಮಾತೆ ಪ್ರಮೋದಾದೇವಿ ಒಡೆಯರ್, ಸರ್ಕಾರದ ನೀರಾವರಿ ಯೋಜನೆಗಳು ಶೀಘ್ರವಾಗಿ ಮುಕ್ತಾಯಗೊಂಡು ಜನರಿಗೆ ತಲುಪುವಂತಾಗಲಿ ಎಂದು ಆಶಿಸಿದರು.

ಮೈಸೂರು: ಸಚಿವ ರಮೇಶ್ ಜಾರಕಿಹೊಳಿ ಅವರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರನ್ನು ಮೈಸೂರಿನ ಅರಮನೆಯಲ್ಲಿ ಭೇಟಿಯಾಗಿ, ಕೆಆರ್​ಎಸ್ ಮುಂಭಾಗದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು.

Minister Ramesh Jarkiholi
ಕೆಆರ್​ಎಸ್ ಮುಂಭಾಗ ಒಡೆಯರ್, ಸರ್​ಎಂವಿ ಪ್ರತಿಮೆ‌ ಸ್ಥಾಪನೆ

ಕಳೆದ ಎರಡು ದಿನಗಳಿಂದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಪ್ರವಾಸದಲ್ಲಿರುವ ಸಚಿವರು, ಶುಕ್ರವಾರ ಸಂಜೆ ಮೈಸೂರಿನ ಅರಮನೆಗೆ ಭೇಟಿ ನೀಡಿದರು. ಈ ವೇಳೆ ಕೆಆರ್​ಎಸ್ ಅಣೆಕಟ್ಟೆಯ ದಕ್ಷಿಣ ದ್ವಾರದ ಮುಂಭಾಗದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್.ಎಂ ವಿಶ್ವೇಶ್ವರಯ್ಯ ಅವರ ಪ್ರತಿಮೆಗಳ ನಿರ್ಮಾಣದ ಕಾಮಗಾರಿ ನಡೆಯುತ್ತಿರುವ ಬಗ್ಗೆ ಸಚಿವರು ಪ್ರಮೋದಾದೇವಿ ಒಡೆಯರ್​ಗೆ ವಿವರಿಸಿದರು.

ನೀರಾವರಿ, ಹೈನುಗಾರಿಕೆ, ಕೃಷಿ ಇಂದಿಗೂ ಕರ್ನಾಟಕದಲ್ಲಿ ಸಮೃದ್ಧಿಯಿಂದ ಇದೆ ಎಂದರೆ ಮೈಸೂರು ಸಂಸ್ಥಾನದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆ ಸಾಕಷ್ಟಿದೆ. ಬರಡಾಗಿದ್ದ ಬಯಲು‌ಸೀಮೆಗೆ ನೀರು ಒದಗಿಸಲು ವಾಣಿವಿಲಾಸ ಸಾಗರ ಜಲಾಶಯ ನಿರ್ಮಿಸಿದ ಅರಸರು, ತಮ್ಮ ಚಿನ್ನವನ್ನು ಮಾರಿ ಕೃಷ್ಣರಾಜಸಾಗರ ಅಣೆಕಟ್ಟು ಕಟ್ಟಿದ್ದರು. ಈ ಮೂಲಕ ಕಾವೇರಿ ನೀರು ರೈತರ ಜಮೀನಿಗೆ ಹರಿಸಿ ಕೋಟ್ಯಂತರ ಜನರ ಕಷ್ಟದ ಕಣ್ಣೀರು ಒರೆಸಿದರು ಎಂದು ಶ್ಲಾಘಿಸಿದರು.

ಹರ್ಷ ವ್ಯಕ್ತಪಡಿಸಿದ ಪ್ರಮೋದಾದೇವಿ ಒಡೆಯರ್

ರಾಜರ್ಷಿ‌ ಒಡೆಯರ್ ಮತ್ತು ಸರ್​ಎಂವಿ ಅವರ ಪ್ರತಿಮೆ ನಿರ್ಮಾಣ ಮಾಡುತ್ತಿರುವ ಜಲಸಂಪನ್ಮೂಲ ಇಲಾಖೆಯ ಕಾರ್ಯವನ್ನು ಶ್ಲಾಘಿಸಿದ ರಾಜಮಾತೆ ಪ್ರಮೋದಾದೇವಿ ಒಡೆಯರ್, ಸರ್ಕಾರದ ನೀರಾವರಿ ಯೋಜನೆಗಳು ಶೀಘ್ರವಾಗಿ ಮುಕ್ತಾಯಗೊಂಡು ಜನರಿಗೆ ತಲುಪುವಂತಾಗಲಿ ಎಂದು ಆಶಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.