ETV Bharat / city

ಸೂಕ್ತ ಭದ್ರತೆ ಒದಗಿಸುವಂತೆ ಕಿರಿಯ ವೈದ್ಯರ ಪ್ರತಿಭಟನೆ - ಭದ್ರತೆ ಒದಗಿಸುವಂತೆ ಕೆಆರ್​ ಆಸ್ಪತ್ರೆ ವೈದ್ಯರ ಪ್ರತಿಭಟನೆ

ಸ್ಥಳಕ್ಕೆ ಡಿಸಿಪಿ ಪ್ರಕಾಶ್ ಗೌಡ ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನ ಪಡಿಸಿ ಸೂಕ್ತ ಭದ್ರತೆ ನೀಡುವ ಭರವಸೆ ನೀಡಿದರು. ಬಳಿಕ ವೈದ್ಯರು ಪ್ರತಿಭಟನೆ ಕೈಬಿಟ್ಟರು..

mysore-kr-hospital-doctors-protest-to-providing-security
ಕಿರಿಯ ವೈದ್ಯರ ಪ್ರತಿಭಟನೆ
author img

By

Published : Apr 19, 2021, 5:35 PM IST

ಮೈಸೂರು : ನಗರದ ಸರ್ಕಾರಿ ಕೆ ಆರ್‌ ಆಸ್ಪತ್ರೆಯ ಕೋವಿಡ್ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಿರಿಯ ವೈದ್ಯರ ಮೇಲೆ ಹಲ್ಲೆಯಾಗುತ್ತಿದೆ. ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಕಿರಿಯ ವೈದ್ಯರು ಪ್ರತಿಭಟಿಸಿದರು.

ಸೂಕ್ತ ಭದ್ರತೆ ಒದಗಿಸುವಂತೆ ಕಿರಿಯ ವೈದ್ಯರ ಪ್ರತಿಭಟನೆ..

ಕಳೆದ ಶನಿವಾರ 23 ವರ್ಷದ ವ್ಯಕ್ತಿಯೊಬ್ಬ ಕೋವಿಡ್‌ನಿಂದ ಸಾವನ್ನಪ್ಪಿದ್ದ. ಅವರ ಸಂಬಂಧಿಕರು ಮೃತ ವ್ಯಕ್ತಿಯನ್ನು ನೋಡಲು ಬಿಡಲಿಲ್ಲ ಎಂದು ಐಸಿಯು ವಿಭಾಗದ ಬಾಗಿಲು ಮುರಿದು, ಕಲ್ಲು ತೂರಾಟ ನಡೆಸಿ ವೈದ್ಯರ ಮೇಲೆ ಹಲ್ಲೆಗೆ ಮುಂದಾಗಿದ್ದರು.

ಈ ಸಂದರ್ಭದಲ್ಲಿ ಕಟ್ರೋಲ್ ರೂಂಗೆ ಕರೆ ಮಾಡಿದಾಗ ಪೊಲೀಸರು ಬರಲು ತಡವಾಯಿತು. ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿ ಕಡಿಮೆ ಇದ್ದು ಕೂಡಲೇ ನಮಗೆ ಸೂಕ್ರ ಭದ್ರತೆ ಒದಗಿಸುವಂತೆ ಕಿರಿಯ ವೈದ್ಯರು ಆಗ್ರಹಿಸಿದರು.

ಸ್ಥಳಕ್ಕೆ ಡಿಸಿಪಿ ಪ್ರಕಾಶ್ ಗೌಡ ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನ ಪಡಿಸಿ ಸೂಕ್ತ ಭದ್ರತೆ ನೀಡುವ ಭರವಸೆ ನೀಡಿದರು. ಬಳಿಕ ವೈದ್ಯರು ಪ್ರತಿಭಟನೆ ಕೈಬಿಟ್ಟರು.

ಮೈಸೂರು : ನಗರದ ಸರ್ಕಾರಿ ಕೆ ಆರ್‌ ಆಸ್ಪತ್ರೆಯ ಕೋವಿಡ್ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಿರಿಯ ವೈದ್ಯರ ಮೇಲೆ ಹಲ್ಲೆಯಾಗುತ್ತಿದೆ. ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಕಿರಿಯ ವೈದ್ಯರು ಪ್ರತಿಭಟಿಸಿದರು.

ಸೂಕ್ತ ಭದ್ರತೆ ಒದಗಿಸುವಂತೆ ಕಿರಿಯ ವೈದ್ಯರ ಪ್ರತಿಭಟನೆ..

ಕಳೆದ ಶನಿವಾರ 23 ವರ್ಷದ ವ್ಯಕ್ತಿಯೊಬ್ಬ ಕೋವಿಡ್‌ನಿಂದ ಸಾವನ್ನಪ್ಪಿದ್ದ. ಅವರ ಸಂಬಂಧಿಕರು ಮೃತ ವ್ಯಕ್ತಿಯನ್ನು ನೋಡಲು ಬಿಡಲಿಲ್ಲ ಎಂದು ಐಸಿಯು ವಿಭಾಗದ ಬಾಗಿಲು ಮುರಿದು, ಕಲ್ಲು ತೂರಾಟ ನಡೆಸಿ ವೈದ್ಯರ ಮೇಲೆ ಹಲ್ಲೆಗೆ ಮುಂದಾಗಿದ್ದರು.

ಈ ಸಂದರ್ಭದಲ್ಲಿ ಕಟ್ರೋಲ್ ರೂಂಗೆ ಕರೆ ಮಾಡಿದಾಗ ಪೊಲೀಸರು ಬರಲು ತಡವಾಯಿತು. ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿ ಕಡಿಮೆ ಇದ್ದು ಕೂಡಲೇ ನಮಗೆ ಸೂಕ್ರ ಭದ್ರತೆ ಒದಗಿಸುವಂತೆ ಕಿರಿಯ ವೈದ್ಯರು ಆಗ್ರಹಿಸಿದರು.

ಸ್ಥಳಕ್ಕೆ ಡಿಸಿಪಿ ಪ್ರಕಾಶ್ ಗೌಡ ಆಗಮಿಸಿ ಪ್ರತಿಭಟನಾನಿರತರನ್ನು ಸಮಾಧಾನ ಪಡಿಸಿ ಸೂಕ್ತ ಭದ್ರತೆ ನೀಡುವ ಭರವಸೆ ನೀಡಿದರು. ಬಳಿಕ ವೈದ್ಯರು ಪ್ರತಿಭಟನೆ ಕೈಬಿಟ್ಟರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.