ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆಚ್. ಡಿ. ಕೋಟೆ ರಸ್ತೆಯ ಹಾರೋಹಳ್ಳಿ ಗ್ರಾಮದ ಬಳಿ ನಡೆದಿದೆ.
ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಯುವಕ-ಯುವತಿ ಸ್ಥಳದಲ್ಲೇ ಸಾವು
ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒರ್ವ ಯುವತಿ ಹಾಗೂ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೋರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
![ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಯುವಕ-ಯುವತಿ ಸ್ಥಳದಲ್ಲೇ ಸಾವು car accident](https://etvbharatimages.akamaized.net/etvbharat/prod-images/768-512-8293574-thumbnail-3x2-car.jpg?imwidth=3840)
ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ ಹೇಮಂತ್ (22) ಹಾಗೂ ಯುವತಿ ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್. ಡಿ. ಕೋಟೆಯಿಂದ ಮೈಸೂರಿಗೆ ವಾಪಸಾಗುವಾಗ ಜಯಪುರ ಬಳಿಯ ಹಾರೋಹಳ್ಳಿಯ ಬೆಳ್ಳಿಕೊಳಗ ಎಸ್ಟೇಟ್ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ ಪರಿಣಾಮ ಈ ಘಟನೆ ಸಂಭವಿಸಿದೆ. ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆಚ್. ಡಿ. ಕೋಟೆ ರಸ್ತೆಯ ಹಾರೋಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿ ಹೇಮಂತ್ (22) ಹಾಗೂ ಯುವತಿ ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್. ಡಿ. ಕೋಟೆಯಿಂದ ಮೈಸೂರಿಗೆ ವಾಪಸಾಗುವಾಗ ಜಯಪುರ ಬಳಿಯ ಹಾರೋಹಳ್ಳಿಯ ಬೆಳ್ಳಿಕೊಳಗ ಎಸ್ಟೇಟ್ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ ಪರಿಣಾಮ ಈ ಘಟನೆ ಸಂಭವಿಸಿದೆ. ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.