ETV Bharat / city

ರೋಹಿಣಿ ಸಿಂಧೂರಿ ವಿರುದ್ಧ ನಾಳೆ ಸಾ.ರಾ.ಮಹೇಶ್ ಏಕಾಂಗಿ ಪ್ರತಿಭಟನೆ

ರೋಹಿಣಿ ಸಿಂಧೂರಿ ಹೇಳಿಕೆಯಂತೆ ರಾಜಕಾಲುವೆ ಮೇಲೆ ಸಾರಾ ಕನ್ವೆನ್ಷನ್​​ ಹಾಲ್ ನಿರ್ಮಾಣ ಸತ್ಯವಾಗಿದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಸಾ.ರಾ.ಮಹೇಶ್ ಹೇಳಿದ್ದಾರೆ.

author img

By

Published : Jun 9, 2021, 10:33 PM IST

ಪ್ರತಿಭಟನೆ
ಪ್ರತಿಭಟನೆ

ಮೈಸೂರು: ಸಾ.ರಾ.ಮಹೇಶ್ ಒಡೆತನದ ಸಾರಾ ಕನ್ವೆನ್ಷನ್​ ಹಾಲ್ ವಿಚಾರವಾಗಿ ರೋಹಿಣಿ ಸಿಂಧೂರಿ ಹೇಳಿಕೆ ಖಂಡಿಸಿ, ಈ ಸಮಸ್ಯೆ ಇತ್ಯರ್ಥವಾಗುವವರೆಗೂ ಏಕಾಂಗಿ ಪ್ರತಿಭಟನೆ ಮಾಡುವುದಾಗಿ ಸಾ.ರಾ.ಮಹೇಶ್ ಹೇಳಿದ್ದಾರೆ.

ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಕೆ.ಆರ್.ನಗರ ಶಾಸಕ ಸಾ.ರಾ.ಮಹೇಶ್ ಇಬ್ಬರ ನಡುವೆ ಅರೋಪ ಹಾಗೂ ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

Sara mahesh Solitary protest against rohini sindhuri
ಸಾ.ರಾ ಮಹೇಶ್​ ಪತ್ರ

ಮೈಸೂರಿನ ದಟ್ಟಗಳ್ಳಿಯಲ್ಲಿರುವ ಸಾ.ರಾ.ಮಹೇಶ್ ಒಡೆತನದ ಸಾರಾ ಕನ್ವೆನ್ಷನ್​ ಹಾಲ್, ರಾಜಕಾಲುವೆ ಮೇಲೆ ನಿರ್ಮಾಣವಾಗಿದೆ ಎಂದು ವೆಬ್‍ಸೈಟ್‍ವೊಂದಕ್ಕೆ ರೋಹಿಣಿ ಸಿಂಧೂರಿ ಹೇಳಿಕೆ ನೀಡಿದ್ದಾರೆ. ಇದರಿಂದ ಕೆಂಡಾಮಂಡಲರಾಗಿರುವ ಸಾ.ರಾ.ಮಹೇಶ್, ರಾಜಕಾಲುವೆ ಮೇಲೆ ಚೌಲ್ಟ್ರಿ ನಿರ್ಮಾಣ ಸತ್ಯವಾಗಿದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಶಾಸಕ ಸಾ.ರಾ.ಮಹೇಶ್, ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆ ಮಾಡುವುದಾಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಮೈಸೂರು: ಸಾ.ರಾ.ಮಹೇಶ್ ಒಡೆತನದ ಸಾರಾ ಕನ್ವೆನ್ಷನ್​ ಹಾಲ್ ವಿಚಾರವಾಗಿ ರೋಹಿಣಿ ಸಿಂಧೂರಿ ಹೇಳಿಕೆ ಖಂಡಿಸಿ, ಈ ಸಮಸ್ಯೆ ಇತ್ಯರ್ಥವಾಗುವವರೆಗೂ ಏಕಾಂಗಿ ಪ್ರತಿಭಟನೆ ಮಾಡುವುದಾಗಿ ಸಾ.ರಾ.ಮಹೇಶ್ ಹೇಳಿದ್ದಾರೆ.

ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಕೆ.ಆರ್.ನಗರ ಶಾಸಕ ಸಾ.ರಾ.ಮಹೇಶ್ ಇಬ್ಬರ ನಡುವೆ ಅರೋಪ ಹಾಗೂ ಪ್ರತ್ಯಾರೋಪ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

Sara mahesh Solitary protest against rohini sindhuri
ಸಾ.ರಾ ಮಹೇಶ್​ ಪತ್ರ

ಮೈಸೂರಿನ ದಟ್ಟಗಳ್ಳಿಯಲ್ಲಿರುವ ಸಾ.ರಾ.ಮಹೇಶ್ ಒಡೆತನದ ಸಾರಾ ಕನ್ವೆನ್ಷನ್​ ಹಾಲ್, ರಾಜಕಾಲುವೆ ಮೇಲೆ ನಿರ್ಮಾಣವಾಗಿದೆ ಎಂದು ವೆಬ್‍ಸೈಟ್‍ವೊಂದಕ್ಕೆ ರೋಹಿಣಿ ಸಿಂಧೂರಿ ಹೇಳಿಕೆ ನೀಡಿದ್ದಾರೆ. ಇದರಿಂದ ಕೆಂಡಾಮಂಡಲರಾಗಿರುವ ಸಾ.ರಾ.ಮಹೇಶ್, ರಾಜಕಾಲುವೆ ಮೇಲೆ ಚೌಲ್ಟ್ರಿ ನಿರ್ಮಾಣ ಸತ್ಯವಾಗಿದ್ದರೆ ಸಾರ್ವಜನಿಕ ಜೀವನದಿಂದ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಶಾಸಕ ಸಾ.ರಾ.ಮಹೇಶ್, ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಏಕಾಂಗಿ ಪ್ರತಿಭಟನೆ ಮಾಡುವುದಾಗಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.