ETV Bharat / city

ಚಿತ್ರನಗರಿ ತರಾತುರಿಯಲ್ಲಿ ನಿರ್ಮಾಣ ಮಾಡದೇ ತಜ್ಞರ ಅಭಿಪ್ರಾಯ ಪಡೆಯಿರಿ: ಅಬ್ದುಲ್ ಮಜೀದ್

author img

By

Published : Apr 27, 2022, 8:19 PM IST

ಚಿತ್ರನಗರಿಯನ್ನು ತರಾತುರಿಯಲ್ಲಿ ನಿರ್ಮಾಣ ಮಾಡದೇ ತಜ್ಞರ ಜೊತೆ ಚರ್ಚೆ ನಡೆಸಿ ನಂತರ ನಿರ್ಮಾಣಕ್ಕೆ ಮುಂದಾಗಲಿ ಎಂದು ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಿಳಿಸಿದ್ದಾರೆ.

SDPI state President abdul majeed
ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಮೈಸೂರು: ನಗರದಲ್ಲಿ ಚಿತ್ರನಗರಿ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಆದರೆ ಚಿತ್ರನಗರಿಯನ್ನು ತರಾತುರಿಯಲ್ಲಿ ನಿರ್ಮಾಣ ಮಾಡದೇ ಚಿತ್ರರಂಗದವರು, ಸಾಹಿತಿಗಳು, ತಜ್ಞರ ಜೊತೆ ಚರ್ಚೆ ನಡೆಸಿ ನಂತರ ನಿರ್ಮಾಣಕ್ಕೆ ಮುಂದಾಗಲಿ ಎಂದು ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಿಳಿಸಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಮೈಸೂರು-ಬೆಂಗಳೂರು ನಡುವೆ ದಶಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತಿರುವುದರಿಂದ 1 ಗಂಟೆ 30 ನಿಮಿಷದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತಲುಪಬಹುದಾಗಿದೆ. ಸಿನಿಮಾ ಚಿತ್ರೀಕರಣಕ್ಕೆ ಅಗತ್ಯವಾದ ವಸ್ತುಗಳನ್ನು ಮೈಸೂರಿಗೆ ತರುವುದು ಸುಲಭವಾಗುತ್ತದೆ. ಇದೀಗ ಚಿತ್ರನಗರಿ ನಿರ್ಮಾಣ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ, ಇದು ಸಂತಸದ ವಿಚಾರ ಎಂದರು.

ಇದನ್ನೂ ಓದಿ: ಬಿಎಂಟಿಸಿಗೆ ಹೊರೆಯಾಗುತ್ತಿರುವ ವೋಲ್ವೋ ಬಸ್‌ಗಳು: ನಿರ್ವಹಣೆಗೂ ಸಾಕಾಗದ ಸಂಪಾದನೆ

ಮೈಸೂರು: ನಗರದಲ್ಲಿ ಚಿತ್ರನಗರಿ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಆದರೆ ಚಿತ್ರನಗರಿಯನ್ನು ತರಾತುರಿಯಲ್ಲಿ ನಿರ್ಮಾಣ ಮಾಡದೇ ಚಿತ್ರರಂಗದವರು, ಸಾಹಿತಿಗಳು, ತಜ್ಞರ ಜೊತೆ ಚರ್ಚೆ ನಡೆಸಿ ನಂತರ ನಿರ್ಮಾಣಕ್ಕೆ ಮುಂದಾಗಲಿ ಎಂದು ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಿಳಿಸಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಮೈಸೂರು-ಬೆಂಗಳೂರು ನಡುವೆ ದಶಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗುತ್ತಿರುವುದರಿಂದ 1 ಗಂಟೆ 30 ನಿಮಿಷದಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತಲುಪಬಹುದಾಗಿದೆ. ಸಿನಿಮಾ ಚಿತ್ರೀಕರಣಕ್ಕೆ ಅಗತ್ಯವಾದ ವಸ್ತುಗಳನ್ನು ಮೈಸೂರಿಗೆ ತರುವುದು ಸುಲಭವಾಗುತ್ತದೆ. ಇದೀಗ ಚಿತ್ರನಗರಿ ನಿರ್ಮಾಣ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ, ಇದು ಸಂತಸದ ವಿಚಾರ ಎಂದರು.

ಇದನ್ನೂ ಓದಿ: ಬಿಎಂಟಿಸಿಗೆ ಹೊರೆಯಾಗುತ್ತಿರುವ ವೋಲ್ವೋ ಬಸ್‌ಗಳು: ನಿರ್ವಹಣೆಗೂ ಸಾಕಾಗದ ಸಂಪಾದನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.