ETV Bharat / city

'ಸಾಲದ ಸುಳಿಯಲ್ಲಿ ಸಿಲುಕಿರುವ ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಲ್ಲ' - ಕೇಂದ್ರ ಸರ್ಕಾರದ ಬಗ್ಗೆ ಸಿದ್ದರಾಮಯ್ಯ ಹೇಳಿಕೆ

ಕೇಂದ್ರ ಸರ್ಕಾರವನ್ನು ಕೇಳುವ ಧಮ್​ ರಾಜ್ಯದಲ್ಲಿ ಯಾರಿಗೂ ಇಲ್ಲ. ಕೇಂದ್ರದಿಂದ ರಾಜ್ಯಕ್ಕೆ ಬರುವ ಷೇರು ಅನುದಾನ ಕಡಿಮೆಯಾಗಿದೆ‌. ಕೇಂದ್ರದ ಯೋಜನೆಗಳಿಗೆ ಶೇ.70ರಷ್ಟು ಅನುದಾನ ಕೊಡುತ್ತಿದ್ದರು. ಈಗ 50-50 ಮಾಡಿದ್ದಾರೆ. ಜಿಎಸ್​ಟಿ ಪರಿಹಾರ 20 ಸಾವಿರ ಕೋಟಿ ಬಾಕಿ ಇದೆ. ಏನೂ ಅಭಿವೃದ್ಧಿ ಮಾಡದೇ ಮೋದಿ ದೇಶವನ್ನು ಹಾಳು ಮಾಡುತ್ತಿದ್ದಾರೆ. ದೇಶ ಈಗ ದಿವಾಳಿಯಾಗುತ್ತಿದೆ..

opposition leader Siddaramaiah
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
author img

By

Published : Feb 11, 2022, 12:28 PM IST

Updated : Feb 11, 2022, 12:41 PM IST

ಮೈಸೂರು : ಸಾಲದ ಸುಳಿಯಲ್ಲಿ ಸಿಲುಕಿರುವ ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದರು.

ಇಂದು ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗ 4 ಲಕ್ಷ 57 ಸಾವಿರ ಕೋಟಿ ರೂ. ಸಾಲ ಮಾಡಿದೆ. ‌ನನ್ನ ಅಧಿಕಾರಾವಧಿಯಲ್ಲಿ 2 ಲಕ್ಷ 15 ಸಾವಿರ ಕೋಟಿ ರೂ. ಸಾಲ ಮಾಡಿದ್ದೆವು.‌ ಮೂರು ವರ್ಷಗಳಲ್ಲಿ ಡಬಲ್ ಸಾಲ ಮಾಡಿದ್ದಾರೆ.

ಇವರಿಂದ ಜನಪರ ಬಜೆಟ್ ನಿರೀಕ್ಷೆ ಮಾಡಲು ಹೇಗೆ ಸಾಧ್ಯ? ಹಾಗಾಗಿ, ರಾಜ್ಯ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಲ್ಲ. ಸಾಮಾನ್ಯವಾಗಿ ರಾಜ್ಯಪಾಲರು ಇವರು ಬರೆದುಕೊಟ್ಟದ್ದನ್ನು ಓದುತ್ತಾರೆ ಅಷ್ಟೇ ಎಂದರು.

ರಾಜ್ಯ ಬಜೆಟ್‌ ಕುರಿತಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿರುವುದು..

ಕೇಂದ್ರ ಸರ್ಕಾರವನ್ನು ಕೇಳುವ ಧಮ್​ ರಾಜ್ಯದಲ್ಲಿ ಯಾರಿಗೂ ಇಲ್ಲ. ಕೇಂದ್ರದಿಂದ ರಾಜ್ಯಕ್ಕೆ ಬರುವ ಷೇರು ಅನುದಾನ ಕಡಿಮೆಯಾಗಿದೆ‌. ಕೇಂದ್ರದ ಯೋಜನೆಗಳಿಗೆ ಶೇ.70ರಷ್ಟು ಅನುದಾನ ಕೊಡುತ್ತಿದ್ದರು.

ಈಗ 50-50 ಮಾಡಿದ್ದಾರೆ. ಜಿಎಸ್​ಟಿ ಪರಿಹಾರ 20 ಸಾವಿರ ಕೋಟಿ ಬಾಕಿ ಇದೆ. ಏನೂ ಅಭಿವೃದ್ಧಿ ಮಾಡದೇ ಮೋದಿ ದೇಶವನ್ನು ಹಾಳು ಮಾಡುತ್ತಿದ್ದಾರೆ. ದೇಶ ಈಗ ದಿವಾಳಿಯಾಗುತ್ತಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: SSLCವರೆಗೆ ಸಮವಸ್ತ್ರ ಕಡ್ಡಾಯ, ಪಿಯು ವಿದ್ಯಾರ್ಥಿಗಳಿಗೆ ಕಾಲೇಜುಗಳೇ ನಿರ್ಧರಿಸಬೇಕು.. ಹೊರಟ್ಟಿ

ಕೇಂದ್ರಕ್ಕೆ 135 ಲಕ್ಷ 87 ಸಾವಿರ ಕೋಟಿ ರೂ. ಸಾಲ ಇದೆ. ಈಗ 11 ಲಕ್ಷ 59 ಸಾವಿರ ಕೋಟಿ ರೂ. ಸಾಲ ಮಾಡುವುದಾಗಿ ಹೇಳಿದ್ದಾರೆ. ಕೇಂದ್ರ 80 ಲಕ್ಷ ಕೋಟಿ ರೂ. ಬಡ್ಡಿ ಕಟ್ಟುತ್ತಿದೆ. ಇದೇನಾ ಸಬ್ ಕಾ ಸಾತ್, ಸಬ್ ಕಾ ವಿಕಾಸ್? ಇದೇನಾ ಅಚ್ಛೇ ದಿನ್ ಎಂದು ವ್ಯಂಗ್ಯವಾಡಿದರು.

ಜೊತೆಗೆ ಭವಿಷ್ಯದ ಕಡೆ ಭರವಸೆಗಳ ಹೆಜ್ಜೆ ಎಂಬ ರಾಜ್ಯ ಸರ್ಕಾರದ ಅಭಿವೃದ್ಧಿಯ ಜಾಹೀರಾತಿನ ಬಗ್ಗೆ ವ್ಯಂಗ್ಯವಾಡಿ, ಬಿಜೆಪಿ ಸರ್ಕಾರ ಇಲ್ಲಿಯವರೆಗೆ ಒಂದೇ ಒಂದು ಮನೆಯನ್ನು ಬಡವರಿಗೆ ನೀಡಿಲ್ಲ ಎಂದು ಟೀಕಿಸಿದರು.

ಮೈಸೂರು : ಸಾಲದ ಸುಳಿಯಲ್ಲಿ ಸಿಲುಕಿರುವ ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿ ಹೇಳಿಕೆ ನೀಡಿದರು.

ಇಂದು ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗ 4 ಲಕ್ಷ 57 ಸಾವಿರ ಕೋಟಿ ರೂ. ಸಾಲ ಮಾಡಿದೆ. ‌ನನ್ನ ಅಧಿಕಾರಾವಧಿಯಲ್ಲಿ 2 ಲಕ್ಷ 15 ಸಾವಿರ ಕೋಟಿ ರೂ. ಸಾಲ ಮಾಡಿದ್ದೆವು.‌ ಮೂರು ವರ್ಷಗಳಲ್ಲಿ ಡಬಲ್ ಸಾಲ ಮಾಡಿದ್ದಾರೆ.

ಇವರಿಂದ ಜನಪರ ಬಜೆಟ್ ನಿರೀಕ್ಷೆ ಮಾಡಲು ಹೇಗೆ ಸಾಧ್ಯ? ಹಾಗಾಗಿ, ರಾಜ್ಯ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆ ಇಲ್ಲ. ಸಾಮಾನ್ಯವಾಗಿ ರಾಜ್ಯಪಾಲರು ಇವರು ಬರೆದುಕೊಟ್ಟದ್ದನ್ನು ಓದುತ್ತಾರೆ ಅಷ್ಟೇ ಎಂದರು.

ರಾಜ್ಯ ಬಜೆಟ್‌ ಕುರಿತಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿರುವುದು..

ಕೇಂದ್ರ ಸರ್ಕಾರವನ್ನು ಕೇಳುವ ಧಮ್​ ರಾಜ್ಯದಲ್ಲಿ ಯಾರಿಗೂ ಇಲ್ಲ. ಕೇಂದ್ರದಿಂದ ರಾಜ್ಯಕ್ಕೆ ಬರುವ ಷೇರು ಅನುದಾನ ಕಡಿಮೆಯಾಗಿದೆ‌. ಕೇಂದ್ರದ ಯೋಜನೆಗಳಿಗೆ ಶೇ.70ರಷ್ಟು ಅನುದಾನ ಕೊಡುತ್ತಿದ್ದರು.

ಈಗ 50-50 ಮಾಡಿದ್ದಾರೆ. ಜಿಎಸ್​ಟಿ ಪರಿಹಾರ 20 ಸಾವಿರ ಕೋಟಿ ಬಾಕಿ ಇದೆ. ಏನೂ ಅಭಿವೃದ್ಧಿ ಮಾಡದೇ ಮೋದಿ ದೇಶವನ್ನು ಹಾಳು ಮಾಡುತ್ತಿದ್ದಾರೆ. ದೇಶ ಈಗ ದಿವಾಳಿಯಾಗುತ್ತಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: SSLCವರೆಗೆ ಸಮವಸ್ತ್ರ ಕಡ್ಡಾಯ, ಪಿಯು ವಿದ್ಯಾರ್ಥಿಗಳಿಗೆ ಕಾಲೇಜುಗಳೇ ನಿರ್ಧರಿಸಬೇಕು.. ಹೊರಟ್ಟಿ

ಕೇಂದ್ರಕ್ಕೆ 135 ಲಕ್ಷ 87 ಸಾವಿರ ಕೋಟಿ ರೂ. ಸಾಲ ಇದೆ. ಈಗ 11 ಲಕ್ಷ 59 ಸಾವಿರ ಕೋಟಿ ರೂ. ಸಾಲ ಮಾಡುವುದಾಗಿ ಹೇಳಿದ್ದಾರೆ. ಕೇಂದ್ರ 80 ಲಕ್ಷ ಕೋಟಿ ರೂ. ಬಡ್ಡಿ ಕಟ್ಟುತ್ತಿದೆ. ಇದೇನಾ ಸಬ್ ಕಾ ಸಾತ್, ಸಬ್ ಕಾ ವಿಕಾಸ್? ಇದೇನಾ ಅಚ್ಛೇ ದಿನ್ ಎಂದು ವ್ಯಂಗ್ಯವಾಡಿದರು.

ಜೊತೆಗೆ ಭವಿಷ್ಯದ ಕಡೆ ಭರವಸೆಗಳ ಹೆಜ್ಜೆ ಎಂಬ ರಾಜ್ಯ ಸರ್ಕಾರದ ಅಭಿವೃದ್ಧಿಯ ಜಾಹೀರಾತಿನ ಬಗ್ಗೆ ವ್ಯಂಗ್ಯವಾಡಿ, ಬಿಜೆಪಿ ಸರ್ಕಾರ ಇಲ್ಲಿಯವರೆಗೆ ಒಂದೇ ಒಂದು ಮನೆಯನ್ನು ಬಡವರಿಗೆ ನೀಡಿಲ್ಲ ಎಂದು ಟೀಕಿಸಿದರು.

Last Updated : Feb 11, 2022, 12:41 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.