ETV Bharat / city

ಉದ್ಧವ್ ಠಾಕ್ರೆ ಬೆಳಗಾವಿ ವಿಚಾರ ಇಟ್ಕೊಂಡು ಜನರನ್ನು ಓಲೈಸುತ್ತಿದ್ದಾರೆ.. ಸಚಿವ ಸಿಸಿಪಿ ತಿರುಗೇಟು - ಅಲಕ್ ಗಿಲ್ಬನ್ ಎಂಬ ಕೋತಿ ಜಾತಿಯ ಪ್ರಾಣಿಗಳನ್ನು ಪ್ರವಾಸಿಗರಿಗೆ ನೋಡಲು ಮುಕ್ತ

ಮಹಾರಾಷ್ಟ್ರದ ಸಿಎಂ ಆಗಿ ಉದ್ಧವ್ ಠಾಕ್ರೆ ಯಾವ ರೀತಿ ಆಯ್ಕೆಯಾಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಬೆಳಗಾವಿ ವಿಚಾರ ಮುಂದಿಟ್ಕೊಂಡು ಆ ಭಾಗದ ಜನರನ್ನು ಓಲೈಸುತ್ತಿದ್ದಾರೆ ಎಂದು ಅರಣ್ಯ ಸಚಿವ ಸಿ ಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ.

KN_MYS_4_C.C.PATEEL_NEWS_7208092
ಉದ್ದವ್ ಠಾಕ್ರೆ ಬೆಳಗಾವಿ ವಿಚಾರವನ್ನು ಇಟ್ಟುಕೊಂಡು ಜನರನ್ನು ಒಲೈಕೆ ಮಾಡುತ್ತಿದ್ದಾರೆ- ಸಿ.ಸಿ.ಪಾಟೀಲ್ ತಿರುಗೇಟು
author img

By

Published : Jan 1, 2020, 7:49 PM IST

ಮೈಸೂರು: ಮಹಾರಾಷ್ಟ್ರದ ಸಿಎಂ ಆಗಿ ಉದ್ಧವ್ ಠಾಕ್ರೆ ಯಾವ ರೀತಿ ಆಯ್ಕೆಯಾಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಬೆಳಗಾವಿ ವಿಚಾರ ಇಟ್ಕೊಂಡು ಆ ಭಾಗದ ಜನರನ್ನು ಓಲೈಕೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಅರಣ್ಯ ಸಚಿವ ಸಿ ಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಅರಣ್ಯ ಸಚಿವ ಸಿ ಸಿ ಪಾಟೀಲ್..

ಇಂದು ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿ ಅಸ್ಸೋಂ ಮೃಗಾಲಯದಿಂದ ಬಂದಿರುವ ಅಲಕ್ ಗಿಲ್ಬನ್ ಎಂಬ ಕೋತಿ ಜಾತಿಯ ಪ್ರಾಣಿಗಳನ್ನು ಪ್ರವಾಸಿಗರಿಗೆ ನೋಡಲು ಮುಕ್ತಗೊಳಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ಬೆಳಗಾವಿ ವಿಚಾರದಲ್ಲಿ ಮಹಾಜನ್ ವರದಿ ಅಂತಿಮ ಎಂದು ಕೋರ್ಟ್ ಹೇಳಿದೆ. ಹಿಂದೆ,‌ ಇಂದು, ನಾಳೆ ಮತ್ತು ಮುಂದೆ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದಾಗಿದೆ.

ಬೆಳಗಾವಿ ವಿಚಾರವನ್ನು ಅಲ್ಲಿನ ಸಿಎಂ ಠಾಕ್ರೆ ಜನರನ್ನು ಓಲೈಕೆ ಮಾಡಲು ಬಳಸುತ್ತಿದ್ದಾರೆ ಎಂದರು. ಬೇಸಿಗೆ ಕಾಲದಲ್ಲಿ ಅರಣ್ಯದಲ್ಲಿ ಕಾಡ್ಗಿಚ್ಚು ಹತ್ತಿಕೊಳ್ಳದಂತೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಈಗಾಗಲೇ ಅಧಿಕಾರಿಗಳ ಜೊತೆ ಮಾತನಾಡಲಾಗಿದೆ. ಮುಂದೆಯೂ ಸಹ ಅಧಿಕಾರಿಗಳ ಸಭೆ ಕರೆದು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳಿಂದ ಆಗುತ್ತಿರುವ ತೊಂದರೆಗಳಿಗೆ ಸರಿಯಾಗಿ ಪರಿಹಾರ ವಿತರಿಸಲಾಗುತ್ತಿಲ್ಲ ಎಂಬುದು ಸುಳ್ಳು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾನದಂಡಗಳ ಅನುಸಾರವಾಗಿಯೇ ಪರಿಹಾರ ನೀಡಲಾಗುತ್ತಿದೆ ಎಂದರು.

ಮೈಸೂರು: ಮಹಾರಾಷ್ಟ್ರದ ಸಿಎಂ ಆಗಿ ಉದ್ಧವ್ ಠಾಕ್ರೆ ಯಾವ ರೀತಿ ಆಯ್ಕೆಯಾಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಬೆಳಗಾವಿ ವಿಚಾರ ಇಟ್ಕೊಂಡು ಆ ಭಾಗದ ಜನರನ್ನು ಓಲೈಕೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಅರಣ್ಯ ಸಚಿವ ಸಿ ಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಅರಣ್ಯ ಸಚಿವ ಸಿ ಸಿ ಪಾಟೀಲ್..

ಇಂದು ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿ ಅಸ್ಸೋಂ ಮೃಗಾಲಯದಿಂದ ಬಂದಿರುವ ಅಲಕ್ ಗಿಲ್ಬನ್ ಎಂಬ ಕೋತಿ ಜಾತಿಯ ಪ್ರಾಣಿಗಳನ್ನು ಪ್ರವಾಸಿಗರಿಗೆ ನೋಡಲು ಮುಕ್ತಗೊಳಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ಬೆಳಗಾವಿ ವಿಚಾರದಲ್ಲಿ ಮಹಾಜನ್ ವರದಿ ಅಂತಿಮ ಎಂದು ಕೋರ್ಟ್ ಹೇಳಿದೆ. ಹಿಂದೆ,‌ ಇಂದು, ನಾಳೆ ಮತ್ತು ಮುಂದೆ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದಾಗಿದೆ.

ಬೆಳಗಾವಿ ವಿಚಾರವನ್ನು ಅಲ್ಲಿನ ಸಿಎಂ ಠಾಕ್ರೆ ಜನರನ್ನು ಓಲೈಕೆ ಮಾಡಲು ಬಳಸುತ್ತಿದ್ದಾರೆ ಎಂದರು. ಬೇಸಿಗೆ ಕಾಲದಲ್ಲಿ ಅರಣ್ಯದಲ್ಲಿ ಕಾಡ್ಗಿಚ್ಚು ಹತ್ತಿಕೊಳ್ಳದಂತೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಈಗಾಗಲೇ ಅಧಿಕಾರಿಗಳ ಜೊತೆ ಮಾತನಾಡಲಾಗಿದೆ. ಮುಂದೆಯೂ ಸಹ ಅಧಿಕಾರಿಗಳ ಸಭೆ ಕರೆದು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳಿಂದ ಆಗುತ್ತಿರುವ ತೊಂದರೆಗಳಿಗೆ ಸರಿಯಾಗಿ ಪರಿಹಾರ ವಿತರಿಸಲಾಗುತ್ತಿಲ್ಲ ಎಂಬುದು ಸುಳ್ಳು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾನದಂಡಗಳ ಅನುಸಾರವಾಗಿಯೇ ಪರಿಹಾರ ನೀಡಲಾಗುತ್ತಿದೆ ಎಂದರು.

Intro:ಮೈಸೂರು: ಠಾಕ್ರೆ ಮಹಾರಾಷ್ಟ್ರದ ಸಿಎಂ ಯಾವ ರೀತಿ ಆಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು, ಆದ್ದರಿಂದ ಅವರು ಬೆಳಗಾವಿ ವಿಚಾರವನ್ನು ಇಟ್ಟುಕೊಂಡು ಆ ಭಾಗದ ಜನರನ್ನು ಓಲೈಕೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಅರಣ್ಯ ಸಚಿವ ಸಿ.ಸಿ.ಪಾಟೀಲ್ ಹೇಳಿಕೆ ನೀಡಿದ್ದಾರೆ.


Body:ಇಂದು ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿ ಅಸ್ಸಾಂ ಮೃಗಾಲಯದಿಂದ ಅಲಕ್ ಗಿಲ್ಬನ್ ಎಂಬು ಕೋತಿ ಜಾತಿಯ ಪ್ರಾಣಿಗಳನ್ನು ಪ್ರವಾಸಿಗರಿಗೆ ನೋಡಲು ಮುಕ್ತ ಗೊಳಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು ಡಿಸಿಎಂ ಹುದ್ದೆ ಬಗ್ಗೆ ನಾನು ಏನು ಮಾತನಾಡುವುದಿಲ್ಲ, ನಮ್ಮ ಪಕ್ಷ ಶಿಸ್ತಿನ ಪಕ್ಷ, ನಮ್ಮ‌ ಅನಿಸಿಕೆಗಳನ್ನು ಪಕ್ಷದ ವೇದಿಕೆಯಲ್ಲಿ ಹೇಳುತ್ತೇನೆ. ಡಿಸಿಎಂ ಬೇಕು ಬೇಡದ ಬಗ್ಗೆ ಸಿಎಂ ನಿರ್ಧಾರ ಮಾಡುತ್ತಾರೆ,
ಹಿರಿಯ ಸಚಿವರ ಸ್ಥಾನಕ್ಕೆ ಕೋಕ್ ನೀಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಕೆಲವು ಪ್ರಶ್ನೆಗಳಿಗೆ ಉತ್ತರ ಕೊಡಲಾಗುವುದಿಲ್ಲ ಎಂದರು.
ಇನ್ನೂ ಬೆಳಗಾವಿ ವಿಚಾರದಲ್ಲಿ ಮಹಾಜನ್ ವರದಿಗಳು ಅಂತಿಮ ಎಂದು ಕೋರ್ಟ್ ಹೇಳಿದೆ. ಹಿಂದೆ,‌ಇಂದು, ನಾಳೆ ಮತ್ತು ಮುಂದೆ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು, ಈ ಬೆಳಗಾವಿ ವಿಚಾರವನ್ನು ಅಲ್ಲಿನ ಸಿಎಂ ಠಾಕ್ರೆ ಜನರನ್ನು ಓಲೈಕೆ ಮಾಡಲು ಬಳಸುತ್ತಿದ್ದಾರೆ ಎಂದರು.
ಇನ್ನೂ ಬೇಸಿಗೆ ಕಾಲದಲ್ಲಿ ಅರಣ್ಯದಲ್ಲಿ ಕಾಡ್ಗಿಚ್ಚು ಸಂಭವಿಸದಂತೆ ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಈಗಾಗಲೇ ಅಧಿಕಾರಿಗಳ ಜೊತೆ ಮಾತನಾಡಿದ್ದು, ಮುಂದೆ ಸಹ ಅಧಿಕಾರಿಗಳ ಸಭೆ ಕರೆದು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚಿಸಿಲಾಗುವುದು,
ಇನ್ನೂ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳಿಂದ ಆಗುತ್ತಿರುವ ತೊಂದರೆಗಳಿಗೆ ಸರಿಯಾಗಿ ಪರಿಹಾರ ವಿತರಿಸಲಾಗುತ್ತಿಲ್ಲ ಎಂಬುದು ಸುಳ್ಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾನದಂಡಗಳ ಅನುಸಾರವಾಗಿಯೇ ಪರಿಹಾರ ನೀಡಲಾಗುತ್ತಿದೆ ಎಂದರು.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.