ETV Bharat / city

ಸಚಿವ ಈಶ್ವರಪ್ಪ ರಾಜೀನಾಮೆಗೂ ಮುನ್ನವೇ 29 PDOಗಳ ವರ್ಗಾವಣೆ!: ಆದೇಶ ಹಿಂಪಡೆಯಲು ಕಾಂಗ್ರೆಸ್​ ಆಗ್ರಹ

author img

By

Published : Apr 15, 2022, 1:12 PM IST

Updated : Apr 15, 2022, 1:59 PM IST

ಸಚಿವ ಕೆ.ಎಸ್​​ ಈಶ್ವರಪ್ಪ ರಾಜೀನಾಮೆಗೂ ಮುನ್ನವೇ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 29 ಪಿಡಿಒಗಳನ್ನು ವರ್ಗಾವಣೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ..

Transfer of 29 pdo
ಈಶ್ವರಪ್ಪ ರಾಜೀನಾಮೆಗೂ ಮುನ್ನ 29 PDO ವರ್ಗಾವಣೆ

ಮೈಸೂರು : ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡುವ ಮುನ್ನವೇ 29 ಮಂದಿ ಪಿಡಿಒಗಳನ್ನು ವರ್ಗಾವಣೆ ಮಾಡಲಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ ಎಂದು ಮೈಸೂರಿನ ಕಾಂಗ್ರೆಸ್​ ಮುಖಂಡರು ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಏ.12 ಮತ್ತು 13ರಂದು ಬಿಜೆಪಿ ಕಾರ್ಯಕಾರಣಿ ಏರ್ಪಡಿಸಲಾಗಿತ್ತು. ಏ.12ರಂದು ಕೆ.ಎಸ್.ಈಶ್ವರಪ್ಪ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು‌. ಅಂದೇ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಏ. 12ರಂದೇ ಮೈಸೂರು ಜಿಲ್ಲೆಯಲ್ಲಿ 29 ಪಿಡಿಒಗಳನ್ನು ಈಶ್ವರಪ್ಪನವರು ಟ್ರಾನ್ಸ್​ಫರ್​ ಮಾಡಿದ್ದಾರೆ ಎಂದು ಕೈ ಮುಖಂಡರು ಆರೋಪಿಸಿದ್ದಾರೆ.

29 PDOಗಳ ವರ್ಗಾವಣೆ ಕುರಿತಂತೆ ತನಿಖೆ ಕಾಂಗ್ರೆಸ್​ ಮುಖಂಡರ ಆಗ್ರಹಿಸಿರುವುದು..

ರಾಜೀನಾಮೆ ನೀಡುವ ಪರಿಸ್ಥಿತಿ ಎದುರಾಗಲಿದೆ ಎಂಬ ಮಾಹಿತಿ ಗೊತ್ತಿದ್ದರೂ, ಪಿಡಿಒಗಳನ್ನು ಯಾಕೆ ವರ್ಗಾವಣೆ ಮಾಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳು ಈ ವರ್ಗಾವಣೆ ಆದೇಶ ತಕ್ಷಣ ಹಿಂಪಡೆಯಬೇಕೆಂದು ಕಾಂಗ್ರೆಸ್​ ಮುಖಂಡರು ಒತ್ತಾಯಿಸಿದ್ದಾರೆ. ಯಾವ ಉದ್ದೇಶ ಇಟ್ಟುಕೊಂಡು ಈಶ್ವರಪ್ಪನವರು ಏಕಾಏಕಿ ಪಿಡಿಒಗಳನ್ನು ಟ್ರಾನ್ಸ್​ಫರ್​ ಮಾಡಿದ್ದಾರೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

Transfer of 29 pdo
ಪಿಡಿಒಗಳ ವರ್ಗಾವಣೆ: ಆದೇಶ ಪ್ರತಿ

ಇದನ್ನೂ ಓದಿ: ಕೆ ಎಸ್‌ ಈಶ್ವರಪ್ಪ ಇಂದು ಸಂಜೆ ರಾಜೀನಾಮೆ ನೀಡಲಿದ್ದಾರೆ : ಸಿಎಂ ಬೊಮ್ಮಾಯಿ

ಮೈಸೂರು : ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡುವ ಮುನ್ನವೇ 29 ಮಂದಿ ಪಿಡಿಒಗಳನ್ನು ವರ್ಗಾವಣೆ ಮಾಡಲಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ ಎಂದು ಮೈಸೂರಿನ ಕಾಂಗ್ರೆಸ್​ ಮುಖಂಡರು ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಏ.12 ಮತ್ತು 13ರಂದು ಬಿಜೆಪಿ ಕಾರ್ಯಕಾರಣಿ ಏರ್ಪಡಿಸಲಾಗಿತ್ತು. ಏ.12ರಂದು ಕೆ.ಎಸ್.ಈಶ್ವರಪ್ಪ ಅವರು ಸಭೆಯಲ್ಲಿ ಪಾಲ್ಗೊಂಡಿದ್ದರು‌. ಅಂದೇ ಗುತ್ತಿಗೆದಾರ ಸಂತೋಷ ಪಾಟೀಲ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಏ. 12ರಂದೇ ಮೈಸೂರು ಜಿಲ್ಲೆಯಲ್ಲಿ 29 ಪಿಡಿಒಗಳನ್ನು ಈಶ್ವರಪ್ಪನವರು ಟ್ರಾನ್ಸ್​ಫರ್​ ಮಾಡಿದ್ದಾರೆ ಎಂದು ಕೈ ಮುಖಂಡರು ಆರೋಪಿಸಿದ್ದಾರೆ.

29 PDOಗಳ ವರ್ಗಾವಣೆ ಕುರಿತಂತೆ ತನಿಖೆ ಕಾಂಗ್ರೆಸ್​ ಮುಖಂಡರ ಆಗ್ರಹಿಸಿರುವುದು..

ರಾಜೀನಾಮೆ ನೀಡುವ ಪರಿಸ್ಥಿತಿ ಎದುರಾಗಲಿದೆ ಎಂಬ ಮಾಹಿತಿ ಗೊತ್ತಿದ್ದರೂ, ಪಿಡಿಒಗಳನ್ನು ಯಾಕೆ ವರ್ಗಾವಣೆ ಮಾಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳು ಈ ವರ್ಗಾವಣೆ ಆದೇಶ ತಕ್ಷಣ ಹಿಂಪಡೆಯಬೇಕೆಂದು ಕಾಂಗ್ರೆಸ್​ ಮುಖಂಡರು ಒತ್ತಾಯಿಸಿದ್ದಾರೆ. ಯಾವ ಉದ್ದೇಶ ಇಟ್ಟುಕೊಂಡು ಈಶ್ವರಪ್ಪನವರು ಏಕಾಏಕಿ ಪಿಡಿಒಗಳನ್ನು ಟ್ರಾನ್ಸ್​ಫರ್​ ಮಾಡಿದ್ದಾರೆ. ಈ ಬಗ್ಗೆ ತನಿಖೆ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

Transfer of 29 pdo
ಪಿಡಿಒಗಳ ವರ್ಗಾವಣೆ: ಆದೇಶ ಪ್ರತಿ

ಇದನ್ನೂ ಓದಿ: ಕೆ ಎಸ್‌ ಈಶ್ವರಪ್ಪ ಇಂದು ಸಂಜೆ ರಾಜೀನಾಮೆ ನೀಡಲಿದ್ದಾರೆ : ಸಿಎಂ ಬೊಮ್ಮಾಯಿ

Last Updated : Apr 15, 2022, 1:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.