ಮೈಸೂರು: ಐತಿಹಾಸಿಕ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಎರಡೇ ತಿಂಗಳಿನಲ್ಲಿ 2 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.
ಶುಕ್ರವಾರ ಬೆಳಿಗ್ಗೆಯಿಂದ ದಾಸೋಹ ಭವನದಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ಆರಂಭಿಸಿ ರಾತ್ರಿ ಪೂರ್ಣಗೊಳಿಸಲಾಯಿತು. 25 ಹುಂಡಿಯಲ್ಲಿ 2,04,08,923 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಅಲ್ಲದೇ 120 ಗ್ರಾಂ ಚಿನ್ನ, 5 ಕೆಜಿ 600 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. 15 ವಿದೇಶಿ ಕರೆನ್ಸಿ, ನಿಷೇಧಿತ ನೋಟಗಳಾದ 1,000 ರೂ.ಮುಖಬೆಲೆಯ 5 ನೋಟುಗಳು, 500 ರೂ.ಮುಖಬೆಲೆಯ 47 ನೋಟುಗಳಿಂದ ಒಟ್ಟು 28,500 ರೂ.ಸಂಗ್ರಹವಾಗಿದೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ.. ಬೆಂಬಲ ಬೆಲೆಯಡಿ ಕಡಲೆಕಾಳು ಖರೀದಿಗೆ ಸರ್ಕಾರ ನಿರ್ಧಾರ
ಕೊರೊನಾ ಸೋಂಕು ಕಡಿಮೆಯಾಗುತ್ತಿರುವುದರಿಂದ ನಂಜನಗೂಡಿನ ನಂಜುಂಡೇಶ್ವರನ ದರ್ಶನ ಪಡೆಯಲು ಭಕ್ತಾದಿಗಳು ಆಗಮಿಸುತ್ತಿದ್ದು, ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.