ETV Bharat / city

ಕಾಂಗ್ರೆಸ್​ ಅಭ್ಯರ್ಥಿಯನ್ನು ಟೀಕಿಸಿದ ಸಂಸದ... ಭಾಷಣಕ್ಕೆ ಅಡ್ಡಿಪಡಿಸಿದ ಯುವಕರು

ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಸಂದರ್ಭದಲ್ಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಭಾಷಣಕ್ಕೆ ಯುವಕರು ಅಡ್ಡಿಪಡಿಸಿದ ಪ್ರಸಂಗ ನಡೆದಿದೆ.

author img

By

Published : Dec 2, 2019, 11:24 PM IST

Youths who interrupted speech
ಭಾಷಣಕ್ಕೆ ಅಡ್ಡಿಪಡಿಸಿದ ಯುವಕರು

ಮೈಸೂರು: ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಸಂದರ್ಭದಲ್ಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಭಾಷಣಕ್ಕೆ ಯುವಕರು ಅಡ್ಡಿಪಡಿಸಿದ ಪ್ರಸಂಗ ನಡೆದಿದೆ.

ಉಪಚುನಾವಣಾ ಬಹಿರಂಗ ಪ್ರಚಾರಕ್ಕೆ ಒಂದು ದಿನ ಮಾತ್ರ ಬಾಕಿಯಿದ್ದು, ಸೋಮವಾರ ರಾತ್ರಿ ತಾಲೂಕಿನ ಹುಣಸೂರಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಪರ ಪ್ರಚಾರ ನಡೆಸಿದರು.

ಸಂಸದರ ಭಾಷಣಕ್ಕೆ ಅಡ್ಡಿಪಡಿಸಿದ ಯುವಕರು

ಈ ಸಮಯದಲ್ಲಿ ಭಾಷಣ ಮಾಡುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿಯನ್ನು ಟೀಕಿಸಿದರು. ಇದರಿಂದ ಕೆರಳಿದ ಯುವಕರು ಬಿಜೆಪಿ ಅಭ್ಯರ್ಥಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿ.ಶ್ರೀನಿವಾಸ್ ಪ್ರಸಾದ್ ಅವರಿಗೆ ಧಿಕ್ಕಾರ ಕೂಗಿದರು. ಕಾಂಗ್ರೆಸ್​​ಗೆ ಮತ್ತು ಕಾಂಗ್ರೆಸ್​ ಅಭ್ಯರ್ಥಿಗೆ ಜೈಕಾರ ಕೂಗಿದರು. ಗಲಿಬಿಲಿಗೊಂಡ ಸಂಸದರು ಭಾಷಣವನ್ನು ಅರ್ಧಕ್ಕೆ ಮೊಟುಕುಗೊಳಿಸಿ ಪೊಲೀಸರ ನೆರವಿನಿಂದ ಕಾರನ್ನು ಹತ್ತಿ ಹೊರಟು ಹೋದರು.

ಮೈಸೂರು: ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ಸಂದರ್ಭದಲ್ಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರ ಭಾಷಣಕ್ಕೆ ಯುವಕರು ಅಡ್ಡಿಪಡಿಸಿದ ಪ್ರಸಂಗ ನಡೆದಿದೆ.

ಉಪಚುನಾವಣಾ ಬಹಿರಂಗ ಪ್ರಚಾರಕ್ಕೆ ಒಂದು ದಿನ ಮಾತ್ರ ಬಾಕಿಯಿದ್ದು, ಸೋಮವಾರ ರಾತ್ರಿ ತಾಲೂಕಿನ ಹುಣಸೂರಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಪರ ಪ್ರಚಾರ ನಡೆಸಿದರು.

ಸಂಸದರ ಭಾಷಣಕ್ಕೆ ಅಡ್ಡಿಪಡಿಸಿದ ಯುವಕರು

ಈ ಸಮಯದಲ್ಲಿ ಭಾಷಣ ಮಾಡುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿಯನ್ನು ಟೀಕಿಸಿದರು. ಇದರಿಂದ ಕೆರಳಿದ ಯುವಕರು ಬಿಜೆಪಿ ಅಭ್ಯರ್ಥಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಿ.ಶ್ರೀನಿವಾಸ್ ಪ್ರಸಾದ್ ಅವರಿಗೆ ಧಿಕ್ಕಾರ ಕೂಗಿದರು. ಕಾಂಗ್ರೆಸ್​​ಗೆ ಮತ್ತು ಕಾಂಗ್ರೆಸ್​ ಅಭ್ಯರ್ಥಿಗೆ ಜೈಕಾರ ಕೂಗಿದರು. ಗಲಿಬಿಲಿಗೊಂಡ ಸಂಸದರು ಭಾಷಣವನ್ನು ಅರ್ಧಕ್ಕೆ ಮೊಟುಕುಗೊಳಿಸಿ ಪೊಲೀಸರ ನೆರವಿನಿಂದ ಕಾರನ್ನು ಹತ್ತಿ ಹೊರಟು ಹೋದರು.

Intro:ಮೈಸೂರು: ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಭಾಷಣ ಮಾಡಲು ಮುಂದಾದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರಿಗೆ ಭಾಷಣ ಮಾಡಲು ಅಡ್ಡಿ ಮಾಡಿ ಗದ್ದಲ ಎಬ್ಬಿಸಿದ ಘಟನೆ ಹುಣಸೂರಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ನಡೆದಿದೆ.Body:





ಹುಣಸೂರು ಉಪ ಚುನಾವಣಾ ಬಹಿರಂಗ ಪ್ರಚಾರಕ್ಕೆ ೧ ದಿನ ಬಾಕಿ ಇದ್ದು ಅಭ್ಯರ್ಥಿಗಳ ಪರವಾಗಿ ವಿವಿಧ ನಾಯಕರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಇಂದು ರಾತ್ರಿ ತಾಲೂಕಿನ ಕಟ್ಟೆಮಳಲವಾಡಿ ಗ್ರಾಮದಲ್ಲಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಪರ ಚುನಾವಣಾ ಪ್ರಚಾರ ಸಮಯದಲ್ಲಿ ಭಾಷಣ ಮಾಡುತ್ತಿರುವಾಗ, ಭಾಷಣದ ಮಧ್ಯೆ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಟೀಕೆ ಮಾಡಿದ್ದು , ಇದರಿಂದ ಕೆರಳಿದ ಯುವಕರು ಬಿಜೆಪಿ ಅಭ್ಯರ್ಥಿ ವಿರುದ್ಧ ಘೋಷಣೆ ಕೂಗಿ ವಿ.ಶ್ರೀನಿವಾಸ್ ಪ್ರಸಾದ್ ಭಾಷಣಕ್ಕೆ ಅಡ್ಡಿ ಪಡಿಸಿ ದಿಕ್ಕಾರ ಕೂಗಿದರು. ಇದರಿಂದ ಗಲಿಬಿಲಿಗೊಂಡ ಸಂಸದರು ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ಪೋಲಿಸರ ಸಹಾಯದಿಂದ ಕಾರನ್ನು ಹತ್ತಿ ಹೊರಟು ಹೋದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.