ETV Bharat / city

ಶಿವಮೊಗ್ಗದ ರಂಗನ್ನು ಹೆಚ್ಚಿಸಿದ ಮಾಜಿ ಸಿಎಂಗಳ ಪುತ್ರರ ಸ್ಪರ್ಧೆ... ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಬಿವೈಆರ್​

ವರ್ಣರಂಜಿತ ರಾಜಕಾರಣಕ್ಕೆ ಹೆಸರಾದ ಶಿವಮೊಗ್ಗ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪುತ್ರರ ಸ್ಪರ್ಧೆ ಚುನಾವಣಾ ಅಖಾಡದ ರಂಗನ್ನು ಮತ್ತಷ್ಟು ಹೆಚ್ಚಿಸಿದೆ. ಬಿಜೆಪಿ ಹಾಗೂ ಮೈತ್ರಿ ಅಭ್ಯರ್ಥಿ ಮಧ್ಯೆ ನೇರ ಸ್ಪರ್ಧೆ ಇದೆ.

author img

By

Published : Apr 23, 2019, 5:32 AM IST

ಬಿ.ವೈ ರಾಘವೇಂದ್ರರ,ಮಧು ಬಂಗಾರಪ್ಪ

ಶಿವಮೊಗ್ಗ: ಮೂವರು ಮುಖ್ಯಮಂತ್ರಿಗಳನ್ನು ರಾಜ್ಯಕ್ಕೆ ಕೊಟ್ಟಿರುವ ಖ್ಯಾತಿ ಗಳಿಸಿರುವ ಶಿವಮೊಗ್ಗ ಜಿಲ್ಲೆಯ ರಾಜಕಾರಣ ಮಲೆನಾಡಿನ ನಿಸರ್ಗದ ವೈಭವದಂತೆ ವರ್ಣರಂಜಿತವಾದುದು ಕೂಡ. ಇಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಗೆ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರೇ ಬೇರೆ ಬೇರೆ ಪಕ್ಷಗಳ ಅಭ್ಯರ್ಥಿಗಳಾಗಿ ಕಣದಲ್ಲಿದ್ದು, ಚುನಾವಣೆಯನ್ನು ಮತ್ತಷ್ಟು ವರ್ಣರಂಜಿತವಾಗಿಸಿದೆ.

ಕ್ಷೇತ್ರದ ಚಿತ್ರಣ:

7 ವಿಧಾನಸಭಾ ಕ್ಷೇತ್ರಗಳನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರ ಹೊಂದಿದ್ದು, ಭದ್ರಾವತಿಯಲ್ಲಿ ಕಾಂಗ್ರೆಸ್​ ಶಾಸಕರಿದ್ದಾರೆ. ಉಳಿದ ಆರು ಕ್ಷೇತ್ರಗಳಾದ ಶಿವಮೊಗ್ಗ ಗ್ರಾಮಾಂತರ, ಶಿವಮೊಗ್ಗ ನಗರ, ಶಿಕಾರಿಪುರ, ಸೊರಬ, ಸಾಗರ, ತೀರ್ಥಹಳ್ಳಿ, ಈ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದು ಇದು ಬಿಜೆಪಿಯ ಭದ್ರಕೋಟೆಯೆನಿಸಿದೆ. ಉಡುಪಿಯ ಬೈಂದೂರು ವಿಧಾನಸಭಾ ಕ್ಷೇತ್ರವೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ‌ ವ್ಯಾಪ್ತಿಗೆ ಬರುತ್ತಿದ್ದು, ಅಲ್ಲೂ ಬಿಜೆಪಿ ಶಾಸಕರಿದ್ದಾರೆ.

ಕ್ಷೇತ್ರದಲ್ಲಿರುವ ಘಟಾನುಘಟಿಗಳು:

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಪುತ್ರ. ಮೂರನೇ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಶಿಕಾರಿಪುರ ಪುರಸಭೆಯ ಅಧ್ಯಕ್ಷರಾಗಿ ರಾಜಕಾರಣ ಆರಂಭಿಸಿದ ರಾಘವೇಂದ್ರ, 2009 ರಲ್ಲಿ ಪ್ರಥಮ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದರು, ಜೊತೆಗೆ ಸೋಲಿಲ್ಲದ ಸರದಾರ ಎನಿಸಿದ ಎಸ್.ಬಂಗಾರಪ್ಪನವರ ಎದುರು ಭರ್ಜರಿ ಗೆಲುವು ಸಾಧಿಸಿದ್ದರು. ನಂತರದಲ್ಲಿ ಶಿಕಾರಿಪುರ ಶಾಸಕರಾಗಿ ಆಯ್ಕೆಯಾದ ಅವರು ಯಡಿಯೂರಪ್ಪ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮತ್ತೆ ಲೋಕಸಭ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದರು. ಈಗ ಮೂರನೇ ಬಾರಿ ಲೋಕಸಭಾ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಬಿ.ವೈ ರಾಘವೇಂದ್ರರ ಹ್ಯಾಟ್ರಿಕ್​ ಗೆಲುವಿನ ಓಟಕ್ಕೆ ಬ್ರೇಕ್​ ಹಾಕಲು ಸಿದ್ಧವಾಗಿರುವವರು, ಮತ್ತೊಬ್ಬ ಮಾಜಿ ಸಿಎಂ ದಿ. ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪ. ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಧು ಬಂಗಾರಪ್ಪನವರು ಎರಡನೇ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಕಳೆದ ವರ್ಷದ ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಇವರು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರವರ ವಿರುದ್ದ ಸೋಲು ಕಂಡಿದ್ದರು. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಬಲವಾಗಿರುವ ಈಡಿಗ ಸಮುದಾಯ ಅಭ್ಯರ್ಥಿ. ಕಾಂಗ್ರೆಸ್​ ಜೆಡಿಎಸ್​ ಎರಡೂ ಪಕ್ಷಗಳ ಬೆಂಬಲ ಇವರಿಗಿದೆ. ಇನ್ನುಳಿದಂತೆ ಒಟ್ಟು 12 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ.

ಜಿಲ್ಲಾಡಳಿತ ಸಿದ್ಧತೆ:

ಜಿಲ್ಲೆಯಲ್ಲಿ ಒಟ್ಟು 2021 ಮತಗಟ್ಟೆಗಳಿಗೆ 8,921 ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆಗೆ 587 ಜೀಪ್, 14 ಲಾರಿ,3 ಲಾಂಚ್, 151 ಪಿಬ್ಲ್ಯೂಡಿ ವಾಹನಗಳು ಸೇರಿದಂತೆ ಸಾವಿರಕ್ಕೂ ಅಧಿಕ ವಾಹನಗಳನ್ನು ಬಳಕೆ ಮಾಡಿ ಕೊಳ್ಳಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 228 ಹಾಗೂ 35 ಬೈಂದೂರಿನಲ್ಲಿ ಮೈಕ್ರೂ ಅಬರ್ಸವರ್ ನೇಮಕ ಮಾಡಲಾಗಿದೆ. 90 ಅಬರ್ಸವರ್ ಗಳು, 30 ವಿಡಿಯೋ ಗ್ರಾಫರ್ ಗಳು, ಬಿಎಸ್​ಎಫ್ ಹಾಗೂ ಸಿಆರ್​ಪಿಎಫ್ ಸೇರಿ ಒಟ್ಟು 6 ತುಕಡಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದ್ದಾರೆ. ಉಡುಪಿಯ ಬೈಂದೂರು ವಿಧಾನಸಭಾ ಕ್ಷೇತ್ರವೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ‌ ವ್ಯಾಪ್ತಿಗೆ ಬರುವುದರಿಂದ ಜಿಲ್ಲೆಯಲ್ಲಿ ಒಟ್ಟು‌ 2021 ಮತಗಟ್ಟೆಗಳನ್ನು‌ ಸ್ಥಾಪಿಸಲಾಗಿದೆ. ಇದರಲ್ಲಿ 362 ಶಿವಮೊಗ್ಗ ಜಿಲ್ಲೆಯಲ್ಲಿ ಹಾಗೂ ಬೈಂದೂರಿನಲ್ಲಿ 75 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಅದೇ ರೀತಿ 284 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ.

ಈ ಚುನಾವಣಾ ಕರ್ತವ್ಯ ನಿರ್ವಹಿಸುವವರಿಗೆ ಮೆಡಿಕಲ್ ಕಿಟ್ ನೀಡಲಾಗಿದೆ. ಅಲ್ಲದೆ ಎಲ್ಲಾ ಮತ ಕೇಂದ್ರಗಳಲ್ಲೂ ಸಹ ನೀರಿನ ವ್ಯವಸ್ಥೆ ಮಾಡಲಾಗಿದೆ. ವಿಕಲಚೇತನರಿಗಾಗಿ ಮನೆಯಿಂದ ಮತಕೇಂದ್ರಕ್ಕೆ ಬರಲು ವಾಹನದ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ‌ ಮೊಬೈಲ್ ನಂಬರ್ ನೀಡಲಾಗಿದೆ. ಇದಕ್ಕೆ ಕರೆ ಮಾಡಿದರೆ ವಾಹನ ಬಂದು ಕರೆದು ಕೊಂಡು ಹೋಗಿ ಮತ್ತೆ ವಾಪಸ್ ಕರೆದು ಕೊಂಡು ಬರುತ್ತದೆ. ಪ್ರತಿ ಬೂತ್ ನಲ್ಲೂ‌‌ ಸಹ ಹಸುಗೂಸಿನೊಂದಿಗೆ ತಾಯಿ ಬಂದರೆ, ತಾಯಿ ಮತ ಹಾಕಿ ಬರುವ ತನಕ ಮಗುವನ್ನು ನೋಡಿ ಕೊಳ್ಳಲು ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಲಾಗಿದೆ. ಮತಕೇಂದ್ರಗಳಲ್ಲಿ ಮತದಾರರನ್ನು‌ ಸರದಿ ಸಾಲಿನಲ್ಲಿ ನಿಲ್ಲಿಸಲು ಎನ್​ಸಿಸಿ ಕೆಡೆಟ್​ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಒಟ್ಟಾರೆ ಜಿಲ್ಲೆಯಲ್ಲಿ ಶಾಂತಿಯುತ, ಪಾರದರ್ಶಕ ಚುನಾವಣೆ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದ್ದಾರೆ.

ಶಿವಮೊಗ್ಗ: ಮೂವರು ಮುಖ್ಯಮಂತ್ರಿಗಳನ್ನು ರಾಜ್ಯಕ್ಕೆ ಕೊಟ್ಟಿರುವ ಖ್ಯಾತಿ ಗಳಿಸಿರುವ ಶಿವಮೊಗ್ಗ ಜಿಲ್ಲೆಯ ರಾಜಕಾರಣ ಮಲೆನಾಡಿನ ನಿಸರ್ಗದ ವೈಭವದಂತೆ ವರ್ಣರಂಜಿತವಾದುದು ಕೂಡ. ಇಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಗೆ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರೇ ಬೇರೆ ಬೇರೆ ಪಕ್ಷಗಳ ಅಭ್ಯರ್ಥಿಗಳಾಗಿ ಕಣದಲ್ಲಿದ್ದು, ಚುನಾವಣೆಯನ್ನು ಮತ್ತಷ್ಟು ವರ್ಣರಂಜಿತವಾಗಿಸಿದೆ.

ಕ್ಷೇತ್ರದ ಚಿತ್ರಣ:

7 ವಿಧಾನಸಭಾ ಕ್ಷೇತ್ರಗಳನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರ ಹೊಂದಿದ್ದು, ಭದ್ರಾವತಿಯಲ್ಲಿ ಕಾಂಗ್ರೆಸ್​ ಶಾಸಕರಿದ್ದಾರೆ. ಉಳಿದ ಆರು ಕ್ಷೇತ್ರಗಳಾದ ಶಿವಮೊಗ್ಗ ಗ್ರಾಮಾಂತರ, ಶಿವಮೊಗ್ಗ ನಗರ, ಶಿಕಾರಿಪುರ, ಸೊರಬ, ಸಾಗರ, ತೀರ್ಥಹಳ್ಳಿ, ಈ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದು ಇದು ಬಿಜೆಪಿಯ ಭದ್ರಕೋಟೆಯೆನಿಸಿದೆ. ಉಡುಪಿಯ ಬೈಂದೂರು ವಿಧಾನಸಭಾ ಕ್ಷೇತ್ರವೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ‌ ವ್ಯಾಪ್ತಿಗೆ ಬರುತ್ತಿದ್ದು, ಅಲ್ಲೂ ಬಿಜೆಪಿ ಶಾಸಕರಿದ್ದಾರೆ.

ಕ್ಷೇತ್ರದಲ್ಲಿರುವ ಘಟಾನುಘಟಿಗಳು:

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಪುತ್ರ. ಮೂರನೇ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಶಿಕಾರಿಪುರ ಪುರಸಭೆಯ ಅಧ್ಯಕ್ಷರಾಗಿ ರಾಜಕಾರಣ ಆರಂಭಿಸಿದ ರಾಘವೇಂದ್ರ, 2009 ರಲ್ಲಿ ಪ್ರಥಮ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಚೊಚ್ಚಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದರು, ಜೊತೆಗೆ ಸೋಲಿಲ್ಲದ ಸರದಾರ ಎನಿಸಿದ ಎಸ್.ಬಂಗಾರಪ್ಪನವರ ಎದುರು ಭರ್ಜರಿ ಗೆಲುವು ಸಾಧಿಸಿದ್ದರು. ನಂತರದಲ್ಲಿ ಶಿಕಾರಿಪುರ ಶಾಸಕರಾಗಿ ಆಯ್ಕೆಯಾದ ಅವರು ಯಡಿಯೂರಪ್ಪ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮತ್ತೆ ಲೋಕಸಭ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದರು. ಈಗ ಮೂರನೇ ಬಾರಿ ಲೋಕಸಭಾ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ಬಿ.ವೈ ರಾಘವೇಂದ್ರರ ಹ್ಯಾಟ್ರಿಕ್​ ಗೆಲುವಿನ ಓಟಕ್ಕೆ ಬ್ರೇಕ್​ ಹಾಕಲು ಸಿದ್ಧವಾಗಿರುವವರು, ಮತ್ತೊಬ್ಬ ಮಾಜಿ ಸಿಎಂ ದಿ. ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪ. ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಧು ಬಂಗಾರಪ್ಪನವರು ಎರಡನೇ ಸಲ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಕಳೆದ ವರ್ಷದ ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದ ಇವರು ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರರವರ ವಿರುದ್ದ ಸೋಲು ಕಂಡಿದ್ದರು. ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಬಲವಾಗಿರುವ ಈಡಿಗ ಸಮುದಾಯ ಅಭ್ಯರ್ಥಿ. ಕಾಂಗ್ರೆಸ್​ ಜೆಡಿಎಸ್​ ಎರಡೂ ಪಕ್ಷಗಳ ಬೆಂಬಲ ಇವರಿಗಿದೆ. ಇನ್ನುಳಿದಂತೆ ಒಟ್ಟು 12 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ.

ಜಿಲ್ಲಾಡಳಿತ ಸಿದ್ಧತೆ:

ಜಿಲ್ಲೆಯಲ್ಲಿ ಒಟ್ಟು 2021 ಮತಗಟ್ಟೆಗಳಿಗೆ 8,921 ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆಗೆ 587 ಜೀಪ್, 14 ಲಾರಿ,3 ಲಾಂಚ್, 151 ಪಿಬ್ಲ್ಯೂಡಿ ವಾಹನಗಳು ಸೇರಿದಂತೆ ಸಾವಿರಕ್ಕೂ ಅಧಿಕ ವಾಹನಗಳನ್ನು ಬಳಕೆ ಮಾಡಿ ಕೊಳ್ಳಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 228 ಹಾಗೂ 35 ಬೈಂದೂರಿನಲ್ಲಿ ಮೈಕ್ರೂ ಅಬರ್ಸವರ್ ನೇಮಕ ಮಾಡಲಾಗಿದೆ. 90 ಅಬರ್ಸವರ್ ಗಳು, 30 ವಿಡಿಯೋ ಗ್ರಾಫರ್ ಗಳು, ಬಿಎಸ್​ಎಫ್ ಹಾಗೂ ಸಿಆರ್​ಪಿಎಫ್ ಸೇರಿ ಒಟ್ಟು 6 ತುಕಡಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದ್ದಾರೆ. ಉಡುಪಿಯ ಬೈಂದೂರು ವಿಧಾನಸಭಾ ಕ್ಷೇತ್ರವೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ‌ ವ್ಯಾಪ್ತಿಗೆ ಬರುವುದರಿಂದ ಜಿಲ್ಲೆಯಲ್ಲಿ ಒಟ್ಟು‌ 2021 ಮತಗಟ್ಟೆಗಳನ್ನು‌ ಸ್ಥಾಪಿಸಲಾಗಿದೆ. ಇದರಲ್ಲಿ 362 ಶಿವಮೊಗ್ಗ ಜಿಲ್ಲೆಯಲ್ಲಿ ಹಾಗೂ ಬೈಂದೂರಿನಲ್ಲಿ 75 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಅದೇ ರೀತಿ 284 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ.

ಈ ಚುನಾವಣಾ ಕರ್ತವ್ಯ ನಿರ್ವಹಿಸುವವರಿಗೆ ಮೆಡಿಕಲ್ ಕಿಟ್ ನೀಡಲಾಗಿದೆ. ಅಲ್ಲದೆ ಎಲ್ಲಾ ಮತ ಕೇಂದ್ರಗಳಲ್ಲೂ ಸಹ ನೀರಿನ ವ್ಯವಸ್ಥೆ ಮಾಡಲಾಗಿದೆ. ವಿಕಲಚೇತನರಿಗಾಗಿ ಮನೆಯಿಂದ ಮತಕೇಂದ್ರಕ್ಕೆ ಬರಲು ವಾಹನದ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ‌ ಮೊಬೈಲ್ ನಂಬರ್ ನೀಡಲಾಗಿದೆ. ಇದಕ್ಕೆ ಕರೆ ಮಾಡಿದರೆ ವಾಹನ ಬಂದು ಕರೆದು ಕೊಂಡು ಹೋಗಿ ಮತ್ತೆ ವಾಪಸ್ ಕರೆದು ಕೊಂಡು ಬರುತ್ತದೆ. ಪ್ರತಿ ಬೂತ್ ನಲ್ಲೂ‌‌ ಸಹ ಹಸುಗೂಸಿನೊಂದಿಗೆ ತಾಯಿ ಬಂದರೆ, ತಾಯಿ ಮತ ಹಾಕಿ ಬರುವ ತನಕ ಮಗುವನ್ನು ನೋಡಿ ಕೊಳ್ಳಲು ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಲಾಗಿದೆ. ಮತಕೇಂದ್ರಗಳಲ್ಲಿ ಮತದಾರರನ್ನು‌ ಸರದಿ ಸಾಲಿನಲ್ಲಿ ನಿಲ್ಲಿಸಲು ಎನ್​ಸಿಸಿ ಕೆಡೆಟ್​ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಒಟ್ಟಾರೆ ಜಿಲ್ಲೆಯಲ್ಲಿ ಶಾಂತಿಯುತ, ಪಾರದರ್ಶಕ ಚುನಾವಣೆ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದ್ದಾರೆ.

Intro:ರಾಜ್ಯದ ಎರಡನೇ ಹಂತದ‌ ಲೋಕಸಭ ಚುನಾವಣೆಗೆ ಜಿಲ್ಲಾಡಳಿತ ಸಂಪೂರ್ಣ ತಯಾರಿ ನಡೆಸಿದೆ.ನಾಳೆ ನಡೆಯಲಿರುವ ಚುನಾವಣೆಗೆ ಮತಗಟ್ಟೆ ಅಧಿಕಾರಿಗಳು ಮತಯಂತ್ರಗಳನ್ನು‌ ತೆಗೆದು ಕೊಂಡು ಹೋಗುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆ ಹಾಗೂ ಉಡುಪಿಯ ಬೈಂದೂರು ವಿಧಾನಸಭ ಕ್ಷೇತ್ರ ಶಿವಮೊಗ್ಗ ಲೋಕಸಭ ಕ್ಷೇತ್ರದ‌ ವ್ಯಾಪ್ತಿಗೆ ಬರುತ್ತದೆ. ಜಿಲ್ಲೆಯಲ್ಲಿ ಒಟ್ಟು‌ 2021 ಮತಗಟ್ಟೆಗಳನ್ನು‌ ಸ್ಥಾಪಿಸಲಾಗಿದೆ. ಇದರಲ್ಲಿ 362 ಶಿವಮೊಗ್ಗ ಜಿಲ್ಲೆಯಲ್ಲಿ ಹಾಗೂ ಬೈಂದೂರಿನಲ್ಲಿ 75 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಅದೇ ರೀತಿ 284 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ.


Body:ಒಟ್ಟು 2021 ಮತಗಟ್ಟೆಗಳಿಗೆ 8.921 ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆಗೆ 587 ಜೀಪ್, 14 ಲಾರಿ,3 ಲಾಂಚ್, 151 ಪಿಬ್ಲ್ಯೂಡಿ ವಾಹನಗಳು ಸೇರಿದಂತೆ ಸಾವಿರಕ್ಕೂ ಅಧಿಕ ವಾಹನಗಳನ್ನು ಬಳಕೆ ಮಾಡಿ ಕೊಳ್ಳಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 228 ಹಾಗೂ 35 ಬೈಂದೂರಿನಲ್ಲಿ ಮೈಕ್ರೂ ಅಬರ್ಸವರ್ ನೇಮಕ ಮಾಡಲಾಗಿದೆ. 90 ಅಬರ್ಸವರ್ ಗಳನ್ನು. 30 ವಿಡಿಯೋ ಗ್ರಾಫರ್ ಗಳು.ಬಿಎಸ್ ಎಫ್ ಹಾಗೂ ಸಿಆರ್ ಎಫ್ ಸೇರಿ ಒಟ್ಟು 6 ತುಕಡಿಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದ್ದಾರೆ.

ಇವಿಎಂ ಮತಯಂತ್ರಗಳನ್ನು ಮತಗಟ್ಟೆ ಅಧಿಕಾರಿಗಳು ತಮಗೆ ನಿಗದಿ ಮಾಡಿದ ಕೇಂದ್ರಗಳಿಂದ ತೆಗೆದು ಕೊಂಡು‌


Conclusion:ಈ ಚುನಾವಣಾ ಕರ್ತವ್ಯ ನಿರ್ವಹಿಸುವವರಿಗೆ ಮೆಡಿಕಲ್ ಕಿಟ್ ನೀಡಲಾಗಿದೆ. ಅಲ್ಲದೆ ಎಲ್ಲಾ ಮತ ಕೇಂದ್ರಗಳಲ್ಲೂ ಸಹ ನೀರಿನ ವ್ಯವಸ್ಥೆ ಮಾಡಲಾಗಿದೆ.ವಿಕಲಚೇತನರಿಗಾಗಿ ಮನೆಯಿಂದ ಮತಕೇಂದ್ರಕ್ಕೆ ಬರಲು ವಾಹನದ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ‌ ಮೊಬೈಲ್ ನಂಬರ್ ನೀಡಲಾಗಿದೆ. ಇದಕ್ಕೆ ಕರೆ ಮಾಡಿದರೆ ವಾಹನ ಬಂದು ಕರೆದು ಕೊಂಡು ಹೋಗಿ ಮತ್ತೆ ವಾಪಸ್ ಕರೆದು ಕೊಂಡು ಬರುತ್ತದೆ. ಪ್ರತಿ ಬೂತ್ ನಲ್ಲೂ‌‌ ಸಹ ಹಸುಗೂಸಿನೊಂದಿಗೆ ತಾಯಿ ಬಂದರೆ, ತಾಯಿ ಮತ ಹಾಕಿ ಬರುವ ತನಕ ಮಗುವನ್ನು ನೋಡಿ ಕೊಳ್ಳಲು ಆಶಾ ಕಾರ್ಯಕರ್ತೆಯರನ್ನು ನೇಮಕ ಮಾಡಲಾಗಿದೆ. ಮತಕೇಂದ್ರಗಳಲ್ಲಿ ಮತದಾರರನ್ನು‌ ಸರದಿ ಸಾಲಿನಲ್ಲಿ ನಿಲ್ಲಿಸಲು ಎನ್ ಸಿ ಸಿ ಕೆಡೆಟ್ ಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಒಟ್ಟಾರೆ ಜಿಲ್ಲೆಯಲ್ಲಿ ಶಾಂತಿಯುತ, ಪಾರದರ್ಶಕ ಚುನಾವಣೆ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಎ.ದಯಾನಂದ್ ತಿಳಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.