ETV Bharat / city

ಅತಿಥಿ ಉಪನ್ಯಾಸಕರ ನೇಮಿಸುವಂತೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ವಿದ್ಯಾರ್ಥಿ ವೇತನವನ್ನು ಸರ್ಕಾರ ಬಿಡುಗಡೆ ಮಾಡುವ ಮೂಲಕ ಬಡ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿ ಶಿಕ್ಷಣದಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಸಹಾಯ ಮಾಡಬೇಕು ಎಂದು ಎಬಿವಿಪಿ ಒತ್ತಾಯಿಸಿದೆ.

author img

By

Published : Jan 19, 2021, 9:57 PM IST

Updated : Jan 20, 2021, 9:06 AM IST

ABVP protest in Shimoga
ಶಿವಮೊಗ್ಗ

ಶಿವಮೊಗ್ಗ: ಕೊರೊನಾ ನಂತರದಲ್ಲಿ ಪದವಿ ಕಾಲೇಜುಗಳು ಪುನಾರಂಭಗೊಂಡಿದ್ದು, ತಕ್ಷಣವೇ ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿಗಳು

ಪ್ರಸ್ತುತ ಪದವಿ ಕಾಲೇಜುಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಸಹ ಆಗಮಿಸುತ್ತಿದ್ದಾರೆ. ಈ ನಡುವೆ ಪರೀಕ್ಷಾ ದಿನಾಂಕ ಸಹ ನಿಗದಿಯಾಗಿದೆ. ಆದ್ರೇ ಉಪನ್ಯಾಸಕರ ಕೊರತೆಯಿಂದಾಗಿ ತರಗತಿಗಳೇ ನಡೆಯುತ್ತಿಲ್ಲಾ. ಹಾಗಾಗಿ ಕೂಡಲೇ ಸರ್ಕಾರ ಉಪನ್ಯಾಸಕರನ್ನು ನೇಮಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ರೈತರ ಜಮೀನಿನಲ್ಲಿ ಪೈಪ್ ಅಳವಡಿಕೆಗೆ ವಿರೋಧ: ಹೋರಾಟಗಾರ ಹಿರೇಮಠ್ ಪಾದಯಾತ್ರೆ

ಕಾಲೇಜು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್​ಗಳನ್ನು ಪ್ರಾರಂಭ ಮಾಡಬೇಕು. ಹಳ್ಳಿಗಳಿಂದ ಬರುವ ಮಕ್ಕಳಿಗೆ ಬಸ್ ಸಂಚಾರದ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಶಿವಮೊಗ್ಗ: ಕೊರೊನಾ ನಂತರದಲ್ಲಿ ಪದವಿ ಕಾಲೇಜುಗಳು ಪುನಾರಂಭಗೊಂಡಿದ್ದು, ತಕ್ಷಣವೇ ಅತಿಥಿ ಉಪನ್ಯಾಸಕರನ್ನು ನೇಮಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗದಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿಗಳು

ಪ್ರಸ್ತುತ ಪದವಿ ಕಾಲೇಜುಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಸಹ ಆಗಮಿಸುತ್ತಿದ್ದಾರೆ. ಈ ನಡುವೆ ಪರೀಕ್ಷಾ ದಿನಾಂಕ ಸಹ ನಿಗದಿಯಾಗಿದೆ. ಆದ್ರೇ ಉಪನ್ಯಾಸಕರ ಕೊರತೆಯಿಂದಾಗಿ ತರಗತಿಗಳೇ ನಡೆಯುತ್ತಿಲ್ಲಾ. ಹಾಗಾಗಿ ಕೂಡಲೇ ಸರ್ಕಾರ ಉಪನ್ಯಾಸಕರನ್ನು ನೇಮಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ರೈತರ ಜಮೀನಿನಲ್ಲಿ ಪೈಪ್ ಅಳವಡಿಕೆಗೆ ವಿರೋಧ: ಹೋರಾಟಗಾರ ಹಿರೇಮಠ್ ಪಾದಯಾತ್ರೆ

ಕಾಲೇಜು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಹಾಸ್ಟೆಲ್​ಗಳನ್ನು ಪ್ರಾರಂಭ ಮಾಡಬೇಕು. ಹಳ್ಳಿಗಳಿಂದ ಬರುವ ಮಕ್ಕಳಿಗೆ ಬಸ್ ಸಂಚಾರದ ವ್ಯವಸ್ಥೆ ಮಾಡಿಕೊಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

Last Updated : Jan 20, 2021, 9:06 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.