ETV Bharat / city

ಸಿಗಂದೂರು ದೇವಸ್ಥಾನದಿಂದ ಅರಣ್ಯ ಭೂಮಿ ಒತ್ತುವರಿ ಆರೋಪ: ವರದಿ ಸಲ್ಲಿಸಲು ಡಿಸಿಗೆ ಹೈಕೋರ್ಟ್ ಗಡುವು - ಸಿಗಂದೂರು ದೇವಸ್ಥಾನ ಅರಣ್ಯ ಒತ್ತುವರಿ ಆರೋಪ

ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಹೆಸರಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ವರದಿ ಸಲ್ಲಿಸಲು ಹೈಕೋರ್ಟ್ ಜಿಲ್ಲಾಧಿಕಾರಿಗೆ ಗಡುವು ನೀಡಿ, ಮತ್ತಷ್ಟು ಕಾಲಾವಕಾಶ ನೀಡಲಾಗುವುದಿಲ್ಲ ಎಂದು ಸೂಚಿಸಿ ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿತು.

allegations-of-forest-encroachment-from-sigandur-temple
ಹೈಕೋರ್ಟ್
author img

By

Published : Dec 17, 2020, 8:07 PM IST

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಹೆಸರಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ವರದಿ ಸಲ್ಲಿಸಲು ಹೈಕೋರ್ಟ್ ಜಿಲ್ಲಾಧಿಕಾರಿಗೆ ಗಡುವು ನೀಡಿದೆ.

ಈ ಕುರಿತು ಸಾಗರ ತಾಲೂಕಿನ ಲಕ್ಷ್ಮೀನಾರಾಯಣ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ಪೀಠ, ಅರ್ಜಿದಾರರು ಆರೋಪಿಸಿರುವಂತೆ ಅರಣ್ಯ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿಯನ್ನು ನಿಲ್ಲಿಸಲಾಗಿದೆಯೇ ಎಂದು ಪ್ರಶ್ನಿಸಿತು. ಇದಕ್ಕೆ ಸರ್ಕಾರದ ಪರ ವಕೀಲರು ನಿಲ್ಲಿಸಲಾಗಿದೆ ಎಂದರು.

ಅರ್ಜಿದಾರರ ಪರ ವಕೀಲ ಪಿ.ಪಿ.ಹೆಗ್ಡೆ ಮಾಹಿತಿ ನೀಡಿ, ಈ ಹಿಂದೆ ತಿಳಿದಂತೆ ಕಾಮಗಾರಿ ನಿಂತಿದೆ ಎಂದು ಕೇಳಿದ್ದೆ. ಈಗ ಗೊತ್ತಿಲ್ಲ ಎಂದರು. ಮಧ್ಯಪ್ರವೇಶಿಸಿದ ಪೀಠ, ಕಾಮಗಾರಿ ನಿಲ್ಲಿಸಲಾಗಿದೆಯೇ ಎಂಬುದನ್ನು ಫೋಟೋ ಸಹಿತ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ನಿರ್ದೇಶಿಸಿತು.

ಓದಿ-ಗ್ರಾ.ಪಂ. ಚುನಾವಣೆ ಹಿನ್ನೆಲೆ: ಅಭ್ಯರ್ಥಿಗಳ ಮನೆ ಮುಂದೆ ವಾಮಾಚಾರ

ಅಲ್ಲದೆ ಈ ಹಿಂದೆ ನ್ಯಾಯಾಲಯ ನೀಡಿರುವ ಆದೇಶದಂತೆ ಸ್ಥಳದ ಸರ್ವೆ ನಡೆಸಿ ಸರ್ಕಾರಿ ಭೂಮಿ ಒತ್ತುವರಿ ಮಾಡಲಾಗಿದೆಯೇ ಎಂಬುದರ ಕುರಿತು ಮುಂದಿನ 3 ವಾರಗಳಲ್ಲಿ ಜಿಲ್ಲಾಧಿಕಾರಿ ವರದಿ ನೀಡಬೇಕು. ಮತ್ತಷ್ಟು ಕಾಲಾವಕಾಶ ನೀಡಲಾಗುವುದಿಲ್ಲ ಎಂದು ಸೂಚಿಸಿ ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿತು.

ಅರ್ಜಿದಾರ ಕೋರಿಕೆ

ಶಿವಮೊಗ್ಗದ ಸಾಗರ ತಾಲೂಕಿನ ಕಸವಳ್ಳಿ ಗ್ರಾಮದ ಸರ್ವೇ ನಂಬರ್ 65ರಲ್ಲಿನ ಸರ್ಕಾರಿ ಅರಣ್ಯ ಭೂಮಿಯನ್ನು ದೇವಸ್ಥಾನದ ಹೆಸರಿನಲ್ಲಿ ಒತ್ತುವರಿ ಮಾಡಲಾಗಿದೆ. ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ತೆರವು ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ. ದೇವಾಲಯದ ಹೆಸರಿನಲ್ಲಿ ಸಾರ್ವಜನಿಕರಿಂದ ಸಾವಿರಾರು ಕೋಟಿ ರೂ. ಹಣ ಸಂಗ್ರಹಿಸಿದ್ದು, ವಾರ್ಷಿಕ ಐದು ಕೋಟಿ ಮಾತ್ರ ಲೆಕ್ಕಪತ್ರದಲ್ಲಿ ತೋರಿಸಿದ್ದಾರೆ.

ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿರುವ ಅರ್ಜಿದಾರರು, ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ತೆರವುಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ದೇವಸ್ಥಾನದ ಆಡಳಿತವನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳುವಂತೆ ಆದೇಶಿಸಬೇಕು ಎಂದು ಕೋರಿದ್ದಾರೆ.

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಹೆಸರಲ್ಲಿ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ವರದಿ ಸಲ್ಲಿಸಲು ಹೈಕೋರ್ಟ್ ಜಿಲ್ಲಾಧಿಕಾರಿಗೆ ಗಡುವು ನೀಡಿದೆ.

ಈ ಕುರಿತು ಸಾಗರ ತಾಲೂಕಿನ ಲಕ್ಷ್ಮೀನಾರಾಯಣ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ಪೀಠ, ಅರ್ಜಿದಾರರು ಆರೋಪಿಸಿರುವಂತೆ ಅರಣ್ಯ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿಯನ್ನು ನಿಲ್ಲಿಸಲಾಗಿದೆಯೇ ಎಂದು ಪ್ರಶ್ನಿಸಿತು. ಇದಕ್ಕೆ ಸರ್ಕಾರದ ಪರ ವಕೀಲರು ನಿಲ್ಲಿಸಲಾಗಿದೆ ಎಂದರು.

ಅರ್ಜಿದಾರರ ಪರ ವಕೀಲ ಪಿ.ಪಿ.ಹೆಗ್ಡೆ ಮಾಹಿತಿ ನೀಡಿ, ಈ ಹಿಂದೆ ತಿಳಿದಂತೆ ಕಾಮಗಾರಿ ನಿಂತಿದೆ ಎಂದು ಕೇಳಿದ್ದೆ. ಈಗ ಗೊತ್ತಿಲ್ಲ ಎಂದರು. ಮಧ್ಯಪ್ರವೇಶಿಸಿದ ಪೀಠ, ಕಾಮಗಾರಿ ನಿಲ್ಲಿಸಲಾಗಿದೆಯೇ ಎಂಬುದನ್ನು ಫೋಟೋ ಸಹಿತ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ನಿರ್ದೇಶಿಸಿತು.

ಓದಿ-ಗ್ರಾ.ಪಂ. ಚುನಾವಣೆ ಹಿನ್ನೆಲೆ: ಅಭ್ಯರ್ಥಿಗಳ ಮನೆ ಮುಂದೆ ವಾಮಾಚಾರ

ಅಲ್ಲದೆ ಈ ಹಿಂದೆ ನ್ಯಾಯಾಲಯ ನೀಡಿರುವ ಆದೇಶದಂತೆ ಸ್ಥಳದ ಸರ್ವೆ ನಡೆಸಿ ಸರ್ಕಾರಿ ಭೂಮಿ ಒತ್ತುವರಿ ಮಾಡಲಾಗಿದೆಯೇ ಎಂಬುದರ ಕುರಿತು ಮುಂದಿನ 3 ವಾರಗಳಲ್ಲಿ ಜಿಲ್ಲಾಧಿಕಾರಿ ವರದಿ ನೀಡಬೇಕು. ಮತ್ತಷ್ಟು ಕಾಲಾವಕಾಶ ನೀಡಲಾಗುವುದಿಲ್ಲ ಎಂದು ಸೂಚಿಸಿ ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿತು.

ಅರ್ಜಿದಾರ ಕೋರಿಕೆ

ಶಿವಮೊಗ್ಗದ ಸಾಗರ ತಾಲೂಕಿನ ಕಸವಳ್ಳಿ ಗ್ರಾಮದ ಸರ್ವೇ ನಂಬರ್ 65ರಲ್ಲಿನ ಸರ್ಕಾರಿ ಅರಣ್ಯ ಭೂಮಿಯನ್ನು ದೇವಸ್ಥಾನದ ಹೆಸರಿನಲ್ಲಿ ಒತ್ತುವರಿ ಮಾಡಲಾಗಿದೆ. ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ತೆರವು ಮಾಡಲು ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ. ದೇವಾಲಯದ ಹೆಸರಿನಲ್ಲಿ ಸಾರ್ವಜನಿಕರಿಂದ ಸಾವಿರಾರು ಕೋಟಿ ರೂ. ಹಣ ಸಂಗ್ರಹಿಸಿದ್ದು, ವಾರ್ಷಿಕ ಐದು ಕೋಟಿ ಮಾತ್ರ ಲೆಕ್ಕಪತ್ರದಲ್ಲಿ ತೋರಿಸಿದ್ದಾರೆ.

ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿರುವ ಅರ್ಜಿದಾರರು, ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ತೆರವುಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಹಾಗೂ ದೇವಸ್ಥಾನದ ಆಡಳಿತವನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳುವಂತೆ ಆದೇಶಿಸಬೇಕು ಎಂದು ಕೋರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.