ETV Bharat / city

ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

author img

By

Published : Dec 3, 2020, 10:36 AM IST

ಇಂದು ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಭಜರಂಗದಳದ ಕಾರ್ಯಕರ್ತನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಕಂಡುಬಂದಿದೆ.

ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ
ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ

ಶಿವಮೊಗ್ಗ: ವಾಯುವಿಹಾರಕ್ಕೆ ತೆರಳಿದ್ದ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ.

ನಾಗೇಶ್(25) ಹಲ್ಲೆಗೆ ಒಳಗಾದ ಭಜರಂಗದಳದ ಕಾರ್ಯಕರ್ತ. ಮುಂಜಾನೆ ನೆಹರು ಕ್ರೀಡಾಂಗಣಕ್ಕೆ ವಾಯುವಿಹಾರಕ್ಕೆ ತೆರಳಿ ಮನೆಗೆ ವಾಪಸ್ ಬರುವಾಗ ಹಿಂಬದಿಯಿಂದ ಬಂದ ಕಿಡಿಗೇಡಿಗಳು ದೊಣ್ಣೆಯಿಂದ ನಾಗೇಶ್​ ತಲೆ ಹಾಗೂ ಮುಖಕ್ಕೆ ಹೊಡೆದಿದ್ದಾರೆ. ಪರಿಣಾಮ ಮೂಗಿಗೆ ಗಂಭೀರ ಗಾಯವಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಭಜರಂಗದಳದ ಕಾರ್ಯಕರ್ತರು ಪೊಲೀಸರನ್ನು ಆಗ್ರಹಿಸಿದ್ದಾರೆ.

ಶಿವಮೊಗ್ಗ: ವಾಯುವಿಹಾರಕ್ಕೆ ತೆರಳಿದ್ದ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ.

ನಾಗೇಶ್(25) ಹಲ್ಲೆಗೆ ಒಳಗಾದ ಭಜರಂಗದಳದ ಕಾರ್ಯಕರ್ತ. ಮುಂಜಾನೆ ನೆಹರು ಕ್ರೀಡಾಂಗಣಕ್ಕೆ ವಾಯುವಿಹಾರಕ್ಕೆ ತೆರಳಿ ಮನೆಗೆ ವಾಪಸ್ ಬರುವಾಗ ಹಿಂಬದಿಯಿಂದ ಬಂದ ಕಿಡಿಗೇಡಿಗಳು ದೊಣ್ಣೆಯಿಂದ ನಾಗೇಶ್​ ತಲೆ ಹಾಗೂ ಮುಖಕ್ಕೆ ಹೊಡೆದಿದ್ದಾರೆ. ಪರಿಣಾಮ ಮೂಗಿಗೆ ಗಂಭೀರ ಗಾಯವಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಭಜರಂಗದಳದ ಕಾರ್ಯಕರ್ತರು ಪೊಲೀಸರನ್ನು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.