ETV Bharat / city

ಪಶುವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ - ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು

ಪಶುವೈದ್ಯೆ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

Veterinary rape and murder case
ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ
author img

By

Published : Nov 30, 2019, 6:42 PM IST

ಶಿವಮೊಗ್ಗ: ಹೈದರಬಾದ್​​ನಲ್ಲಿ ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹೈದಾರಬಾದ್​ನಲ್ಲಿ ನಡೆದ ಈ ಕೃತ್ಯ ದೇಶವೇ ತಲೆ ತಗ್ಗಿಸುವಂತಾಗಿದೆ. ದೇಶದಲ್ಲಿ ಆಗಾಗ್ಗೆ ನಡೆಯುತ್ತಿರುವ ಇಂತಹ ಕೃತ್ಯಗಳನ್ನು ತಡೆಯಲು ಕೇಂದ್ರ ಸರ್ಕಾರ ಒಂದು ರೀತಿಯ ಅಂಕುಶ ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಸಾರ್ವಜನಿಕವಾಗಿ ಗಲ್ಲಿಗೆ ಹಾಕಬೇಕು. ಈ ರೀತಿ ಮಾಡುವುದರಿಂದ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬಹುದು. ಮಹಿಳಾ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗಳ ಮೂಲಕ ತೆಲಂಗಾಣ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಶಿವಮೊಗ್ಗ: ಹೈದರಬಾದ್​​ನಲ್ಲಿ ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹೈದಾರಬಾದ್​ನಲ್ಲಿ ನಡೆದ ಈ ಕೃತ್ಯ ದೇಶವೇ ತಲೆ ತಗ್ಗಿಸುವಂತಾಗಿದೆ. ದೇಶದಲ್ಲಿ ಆಗಾಗ್ಗೆ ನಡೆಯುತ್ತಿರುವ ಇಂತಹ ಕೃತ್ಯಗಳನ್ನು ತಡೆಯಲು ಕೇಂದ್ರ ಸರ್ಕಾರ ಒಂದು ರೀತಿಯ ಅಂಕುಶ ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ

ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಸಾರ್ವಜನಿಕವಾಗಿ ಗಲ್ಲಿಗೆ ಹಾಕಬೇಕು. ಈ ರೀತಿ ಮಾಡುವುದರಿಂದ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಬಹುದು. ಮಹಿಳಾ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿಗಳ ಮೂಲಕ ತೆಲಂಗಾಣ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Intro:ಡಾ. ಪ್ರಿಯಾಂಕ ರೆಡ್ಡಿ ಅತ್ಯಚಾರ ಹಾಗೂ ಕೊಲೆ ಖಂಡಿಸಿ: ಬಿಜೆಪಿ ಮಹಿಳಾ ಮೂರ್ಚಾದ ಪ್ರತಿಭಟನೆ.

ಶಿವಮೊಗ್ಗ: ಹೈದರಬಾದ್ ನ ತೊಂಡಪಳ್ಳಿ ಚೆಕ್ ಪೊಸ್ಟ್ ಬಳಿಯ ಕೊಲ್ಲಾಪುರದ ಸರ್ಕಾರಿ ವೈದ್ಯೆ ಕುಮಾರಿ ಪ್ರಿಯಾಂಕ ರೆಡ್ಡಿ ರವರನ್ನು ಅಪಹರಿಸಿ ಸಾಮೂಹಿಕ ಅತ್ಯಚಾರ ನಡೆಸಿ, ಕೊಲೆ ಮಾಡಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಬಿಜೆಪಿ ಮಹಿಳಾ ಮೂರ್ಚಾ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಮಹಿಳಾ ಮೂರ್ಚಾದ ಕಾರ್ಯಕರ್ತರು ಡಾ. ಪ್ರಿಯಾಂಕ ರೆಡ್ಡಿ ರವರ ಸಾಮೂಹಿಕ ಅತ್ಯಚಾರ ನಡೆಸಿದ ಕಾಮಾಂಧರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಲಾಯಿತು. ಆಂಧ್ರದಲ್ಲಿ ಮಹಿಳೆಯರ ಮೇಲ ಅತ್ಯಚಾರ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.Body:ಆಂಧ್ರದ ಹೈದರಬಾದ್ ನಲ್ಲಿ ನಡೆದ ಕೃತ್ಯ ದೇಶವೇ ತಲೆ ತಗ್ಗಿಸುವಂತೆ ಅಗಿದೆ. ದೇಶದಲ್ಲಿ ಆಗ್ಗಾಗೆ ನಡೆಯುತ್ತಿರುವ ಇಂತಹ ದುಶೃತ್ಯಕ್ಕೆ ಕೇಂದ್ರ ಸರ್ಕಾರ ಒಂದು ರೀತಿಯ ಅಂಕುಶ ಹಾಕುತ್ತಿದೆ.Conclusion:ಪ್ರಿಯಾಂಕ ರೆಡ್ಡಿ ರವರನ್ನು ಕೊಲೆ ಮಾಡಿದ ಆರೋಪಿಗಳು ಪೊಲೀಸರು ಬಂಧಿಸಿದ್ದು, ಇವರಿಗೆ ಸಾರ್ವಜನಿಕ ಗಲ್ಲಿಗೆ ಹಾಕಬೇಕು ಎಂದು ಆಗ್ರಹಿಸಲಾಯಿತು. ಈ ರೀತಿ ಮಾಡಬಹುದರಿಂದ ಮುಂದೆ ಅತ್ಯಚಾರ ನಿಲ್ಲುತ್ತದೆ ಎಂದು ಆಗ್ರಹಿಸಲಾಯಿತು. ಬಿಜೆಪಿ ಮಹಿಳಾ ಮೂರ್ಚಾದವರು ಅಪರ ಜಿಲ್ಲಾಧಿಕಾರಿಗಳ ಮೂಲಕ ಆಂಧ್ರದ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಮಹಿಳಾ ಮೂರ್ಚಾದ ಅಧ್ಯಕ್ಷೆ ಸುರೇಖಾ ಮುರಳಿಧರ್ ರವರು, ನಗರ ಬಿಜೆಪಿ ಅಧ್ಯಕ್ಷ ಜಗದೀಶ್ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಬೈಟ್: ಸುರೇಖಾ ಮುರುಳಿಧರ್. ಅಧ್ಯಕ್ಷರು. ಬಿಜೆಪಿ ಮಹಿಳಾ ಮೂರ್ಚಾ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.