ETV Bharat / city

ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಮೂರು ಮೂಕ ಜೀವಿಗಳ ಬಲಿ..

ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ಮೂರು ಬಿಡಾಡಿ ದನಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸನಗರದಲ್ಲಿ ನಡೆದಿದೆ.

author img

By

Published : Oct 7, 2019, 9:34 PM IST

Car accident three cow death

ಶಿವಮೊಗ್ಗ:ವೇಗವಾಗಿ ಬಂದ ಕಾರೂಂದು ರಸ್ತೆ ಬದಿ ನಿಂತಿದ್ದ ಮೂರು ಬಿಡಾಡಿ ದನಗಳಿಗೆ ಡಿಕ್ಕಿ ಹೊಡೆದ ಅವು ಸ್ಥಳದಲ್ಲೇ ಸಾವನ್ನಪ್ಪಿವೆ.

ಈ ಘಟನೆ ಹೊಸನಗರ ತಾಲೂಕು ಜಯನಗರದ ಬಳಿ ನಡೆದಿದೆ. ಚಾಲಕನ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಎದುರಿಗೆ ಬರುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದ್ದರೆ ಸಾಕಷ್ಟು ಅನಾಹುತ ಆಗುತ್ತಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದನಗಳಿಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಕಾರು ಪಲ್ಟಿಯಾಗಿದೆ. ಚಾಲಕ ಹಾಗೂ ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಸ್ಥಳೀಯರು ಗಾಯಾಳುಗಳನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ:ವೇಗವಾಗಿ ಬಂದ ಕಾರೂಂದು ರಸ್ತೆ ಬದಿ ನಿಂತಿದ್ದ ಮೂರು ಬಿಡಾಡಿ ದನಗಳಿಗೆ ಡಿಕ್ಕಿ ಹೊಡೆದ ಅವು ಸ್ಥಳದಲ್ಲೇ ಸಾವನ್ನಪ್ಪಿವೆ.

ಈ ಘಟನೆ ಹೊಸನಗರ ತಾಲೂಕು ಜಯನಗರದ ಬಳಿ ನಡೆದಿದೆ. ಚಾಲಕನ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನವೇ ಈ ದುರಂತಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಎದುರಿಗೆ ಬರುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದ್ದರೆ ಸಾಕಷ್ಟು ಅನಾಹುತ ಆಗುತ್ತಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದನಗಳಿಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಕಾರು ಪಲ್ಟಿಯಾಗಿದೆ. ಚಾಲಕ ಹಾಗೂ ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಸ್ಥಳೀಯರು ಗಾಯಾಳುಗಳನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ದನಗಳಿಗೆ ಕಾರು ಡಿಕ್ಕಿ: ಮೂರು ದನಗಳು ಸಾವು.

ಶಿವಮೊಗ್ಗ: ಅತಿ ವೇಗ ತಿಥಿ ಬೇಗ ಎಂದು ಸಂಚಾರಿ ಪೊಲೀಸರು ಅಲ್ಲಲ್ಲಿ ಎಚ್ಚರಿಕೆಯ ಫಲಕಗಳನ್ನು ಹಾಕಿರುತ್ತಾರೆ.ಆದರೆ ಇಲ್ಲಿ ತಿಥಿಯಾಗಿದ್ದ ಮಾತ್ರ ದನಗಳದ್ದು, ಅತಿ ವೇಗವಾಗಿ ಬಂದ ಕಾರೂಂದು ರಸ್ತೆ ಬದಿ ನಿಂತಿದ್ದ ಬಿಡಾಡಿ ದನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ದನಗಳು ಸಾವನ್ನಪ್ಪಿರುವ ಘಟನೆ ಹೊಸನಗರ ತಾಲೂಕು ಜಯನಗರದ ಬಳಿ ನಡೆದಿದೆ. Body: ಟಾಟಾ ಟಿಯಾಗೋ ಕಾರನ್ನು ಚಾಲಕ ವೇಗ‌ ನಿರ್ಲಕ್ಷ್ಯ ಹಾಗೂ ವೇಗವಾಗಿವಾಗಿ ಓಡಿಸಿ ಕೊಂಡು ಬಂದು ರಸ್ತೆ ಬದಿ ನಿಂತಿದ್ದ ದನಗಳಿಗೆ ಡಿಕ್ಕಿ ಹೊಡೆದಿದೆ. ದನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಬಿದ್ದಿದೆ. ಕಾರು ಡಿಕ್ಕಿ ಹೊಡೆದಿದ್ದರಿಂದ ಮೂರು ದನಗಳು ಸಾವನ್ನಪ್ಪಿವೆ. ಕಾರಿನಲ್ಲಿದ್ದ ಚಾಲಕ ಹಾಗೂ ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಲ್ಲೆ ಇದ್ದ ಸ್ಥಳೀಯರು ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ್ದಾರೆ.Conclusion: ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಲಕ ದನಗಳಿಗೆ ಡಿಕ್ಕಿ ಹೊಡೆಯುವುದನ್ನು ಬಿಟ್ಟು ಎದುರು ಬರುತ್ತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದ್ದರೆ ಸಾಕಷ್ಟು ಅನಾಹುತ ಆಗುತ್ತಿತ್ತು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.