ETV Bharat / city

ಶಿವಮೊಗ್ಗದಲ್ಲಿ ಕಾಂಗ್ರೆಸ್ ಬೆಂಬಲಿತರೇ ಮೇಲುಗೈ ಸಾಧಿಸಿದ್ದಾರೆ: ಹೆಚ್.ಎಸ್​​​.ಸುಂದರೇಶ್

author img

By

Published : Dec 31, 2020, 3:42 PM IST

Updated : Dec 31, 2020, 5:24 PM IST

ಶಿವಮೊಗ್ಗ ಜಿಲ್ಲೆಯ 244 ಗ್ರಾಮ ಪಂಚಾಯತ್​ಗಳ 2,609 ಸ್ಥಾನಗಳ ಪೈಕಿ 950ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ವಿಜಯಶಾಲಿಗಳಾಗಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್​​​.ಸುಂದರೇಶ್ ತಿಳಿಸಿದರು.

District Congress President HS Sundaresh
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್​​​.ಸುಂದರೇಶ್

ಶಿವಮೊಗ್ಗ: ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್​​​.ಸುಂದರೇಶ್ ಹೇಳಿದರು.

ಶಿವಮೊಗ್ಗದಲ್ಲಿ ಕಾಂಗ್ರೆಸ್ ಬೆಂಬಲಿತರೇ ಮೇಲುಗೈ ಸಾಧಿಸಿದ್ದಾರೆ: ಹೆಚ್.ಎಸ್​​​.ಸುಂದರೇಶ್

ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ 244 ಗ್ರಾಮ ಪಂಚಾಯತ್​ಗಳ 2,609 ಸ್ಥಾನಗಳ ಪೈಕಿ 950ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ವಿಜಯಶಾಲಿಗಳಾಗಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ನೀತಿಯನ್ನು ಮುಂದಿಟ್ಟುಕೊಂಡು ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಿದೆ. ಜಿಲ್ಲೆಯ ಜನರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಬಿಜೆಪಿಯ ಆರು ಜನ ಶಾಸಕರು, ಮೂರು ಎಂಎಲ್​ಸಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಮುಖ್ಯಮಂತ್ರಿಗಳ ಅಧಿಕಾರ ಬಲದ ಮೂಲಕ ಹಣ ಹಂಚಿ, ಚುನಾವಣೆ ಮಾಡಿದ್ದಾರೆ.

ಓದಿ: ಫಾಸ್ಟ್​ಟ್ಯಾಗ್​ ಕಡ್ಡಾಯ ಗಡುವು ಮತ್ತೆ ಮುಂದೂಡಿಕೆ ಮಾಡಿದ ಸಾರಿಗೆ ಸಚಿವಾಲಯ!

ಆದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಯಾವುದೇ ಆಮಿಷಗಳನ್ನು ಒಡ್ಡದೇ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಅಭ್ಯರ್ಥಿಗಳಿಗೆ, ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಶಿವಮೊಗ್ಗ: ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್​​​.ಸುಂದರೇಶ್ ಹೇಳಿದರು.

ಶಿವಮೊಗ್ಗದಲ್ಲಿ ಕಾಂಗ್ರೆಸ್ ಬೆಂಬಲಿತರೇ ಮೇಲುಗೈ ಸಾಧಿಸಿದ್ದಾರೆ: ಹೆಚ್.ಎಸ್​​​.ಸುಂದರೇಶ್

ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ 244 ಗ್ರಾಮ ಪಂಚಾಯತ್​ಗಳ 2,609 ಸ್ಥಾನಗಳ ಪೈಕಿ 950ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ವಿಜಯಶಾಲಿಗಳಾಗಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ನೀತಿಯನ್ನು ಮುಂದಿಟ್ಟುಕೊಂಡು ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಿದೆ. ಜಿಲ್ಲೆಯ ಜನರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಬಿಜೆಪಿಯ ಆರು ಜನ ಶಾಸಕರು, ಮೂರು ಎಂಎಲ್​ಸಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಮುಖ್ಯಮಂತ್ರಿಗಳ ಅಧಿಕಾರ ಬಲದ ಮೂಲಕ ಹಣ ಹಂಚಿ, ಚುನಾವಣೆ ಮಾಡಿದ್ದಾರೆ.

ಓದಿ: ಫಾಸ್ಟ್​ಟ್ಯಾಗ್​ ಕಡ್ಡಾಯ ಗಡುವು ಮತ್ತೆ ಮುಂದೂಡಿಕೆ ಮಾಡಿದ ಸಾರಿಗೆ ಸಚಿವಾಲಯ!

ಆದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಯಾವುದೇ ಆಮಿಷಗಳನ್ನು ಒಡ್ಡದೇ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಅಭ್ಯರ್ಥಿಗಳಿಗೆ, ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Last Updated : Dec 31, 2020, 5:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.