ETV Bharat / city

ಅನರ್ಹ ಶಾಸಕರಿಗೆ ಸುಪ್ರೀಂನಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಸಚಿವ ಈಶ್ವರಪ್ಪ

author img

By

Published : Sep 28, 2019, 2:38 PM IST

ಸುಪ್ರೀಂಕೋರ್ಟ್ ಅನರ್ಹ ಶಾಸಕರ ವಿಚಾರದಲ್ಲಿ ಯಾವ ನಿಲುವು ತೆಗೆದುಕೊಳ್ಳುತ್ತದೆಯೋ ಯಾರಿಗೂ ಗೊತ್ತಿಲ್ಲ. ಅ. 22 ರಂದು ಕೋರ್ಟ್​ನಲ್ಲಿ ಅನರ್ಹ‌ ಶಾಸಕರಿಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸಚಿವ ಈಶ್ವರಪ್ಪ

ಶಿವಮೊಗ್ಗ: ಸುಪ್ರೀಂಕೋರ್ಟ್ ಅನರ್ಹ ಶಾಸಕರ ವಿಚಾರದಲ್ಲಿ ಯಾವ ನಿಲುವು ತೆಗೆದುಕೊಳ್ಳುತ್ತದೆಯೋ ಯಾರಿಗೂ ಗೊತ್ತಿಲ್ಲ. ಅವರು ಅನರ್ಹರು ಅಂತ ನಾನಲ್ಲ, ದೇವರೇ ಬಂದು ಹೇಳಿದ್ರು‌ ಆಗಲ್ಲ. ಅದನ್ನು ಕೋರ್ಟ್ ತೀರ್ಮಾನ ಮಾಡುತ್ತದೆ ಎಂದು‌ ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಹೇಳಿದರು.

ಸುಪ್ರೀಂಕೋರ್ಟ್ ಅಂದಿನ‌ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಶಾಸಕರ ರಾಜೀನಾಮೆ ಅಂಗೀಕಾರ ಮಾಡ್ತೀರಾ, ಇಲ್ಲ ತಿರಸ್ಕಾರ ಮಾಡ್ತೀರಾ ಅಂತ ಕೇಳಿತ್ತು. ಆದ್ರೆ ರಮೇಶ್ ಕುಮಾರ್ ಎರಡನ್ನು ಬಿಟ್ಟು‌ ಸಿದ್ದರಾಮಯ್ಯನವರ ಮಾತು ಕೇಳಿ ಶಾಸಕರನ್ನು ಅನರ್ಹರನ್ನಾಗಿ ಮಾಡಿದರು. ಹಿಂದೆ ಗುಲ್ಬರ್ಗಾದ ಶಾಸಕರು ರಾಜೀನಾಮೆ ನೀಡಿದಾಗ ಅಂಗೀಕಾರ ಮಾಡಿ, ಅವರಿಗೆ ಲೋಕಸಭೆ ಚುನಾವಣೆಯಲ್ಲಿ‌ ಸ್ಪರ್ಧೆ ಮಾಡಲು ಅವಕಾಶ ನೀಡಿ, ಈಗ 17 ಜನರ ರಾಜೀನಾಮೆ ಅಂಗೀಕಾರ ಮಾಡದೆ ಇರುವುದು‌ ಎಷ್ಟು ಸರಿ? ಅವರಿಗೊಂದು ನ್ಯಾಯ, ಇವರಿಗೊಂದು ನ್ಯಾಯನಾ ಎಂದು ಪ್ರಶ್ನೆ ಮಾಡಿದ ಈಶ್ವರಪ್ಪ, ಅ. 22 ರಂದು ಸುಪ್ರೀಂಕೋರ್ಟ್​ನಲ್ಲಿ ಅನರ್ಹ‌ ಶಾಸಕರಿಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.

ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ

ಸಿದ್ದರಾಮಯ್ಯರ ಕುತಂತ್ರದಿಂದಾಗಿಯೇ ಕಾಂಗ್ರೆಸ್ ಸೋತಿದೆ:

ಸಿದ್ದರಾಮಯ್ಯ ಕೆಳಗೆ ಬಿದ್ದಿದ್ದಾರೆ ಅಂತ ಕಲ್ಲು‌ ಹೊಡೆಯಲು ನಾನು ಇಷ್ಟ ಪಡುವುದಿಲ್ಲ. ಅಧಿಕಾರ ಯಾರಿಗೂ ಶಾಶ್ವತವಲ್ಲ, ಅಧಿಕಾರದಲ್ಲಿದ್ದಾಗ ಅವರು ಮಾಡಿರುವ ಕೆಲಸ, ಜನರೊಂದಿಗಿನ ಸಂಪರ್ಕ ಅತಿಮುಖ್ಯವಾಗುತ್ತದೆ. ನಾನೇ ಮುಖ್ಯಮಂತ್ರಿ ಎಂದು ಸರ್ವಾಧಿಕಾರಿ ಧೋರಣೆ ಮಾಡಿಕೊಂಡು ನಾನು ಏನು ಬೇಕಾದರೂ ಮಾಡಬಹುದು ಎಂಬ ಸಿದ್ದರಾಮಯ್ಯರ ಧೋರಣೆ ಸರಿಯಲ್ಲ. ಅವರ ಕುತಂತ್ರದಿಂದಾಗಿಯೇ ಕಾಂಗ್ರೆಸ್ ಸೋತಿದೆ. ಇಂದು ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ಅವರ ಕುತಂತ್ರದಿಂದ ಅವರೂ ಸೋತರು, ಸರ್ಕಾರನೂ ಬಿದ್ದುಹೋಯಿತು. ಇದು ಎಲ್ಲಾ ಪಕ್ಷದವರಿಗೆ ಪಾಠವಾಗಬೇಕಿದೆ ಎಂದು ಈಶ್ವರಪ್ಪ ಗುಡುಗಿದರು.

ಇದೇ ವೇಳೆ ಶರಾವತಿ ಕಣಿವೆಯಲ್ಲಿ ಭೂಗರ್ಭ ವಿದ್ಯುತ್ ಯೋಜನೆ ಡಿಪಿಆರ್ ವಿಚಾರವಾಗಿ ಮಾತನಾಡಿದ ಸಚಿವರು, ಕಾಡು ನಾಶವಾಗುತ್ತದೆ ಎಂದು ವಿದ್ಯುತ್ ಉತ್ಪಾದನೆ ನಿಲ್ಲಿಸಲು ಆಗಲ್ಲ. ಹಾಗಂತ ಕಾಡು ನಾಶ ಮಾಡಿ, ವಿದ್ಯುತ್ ಉತ್ಪಾದನೆ ಮಾಡುವುದೂ ಸರಿಯಲ್ಲ. ಕಾಡು ಉಳಿಯಬೇಕು, ವಿದ್ಯುತ್ ಕೂಡ ಉತ್ಪಾದನೆಯಾಗಬೇಕು. ಈ ಕುರಿತಂತೆ ತಜ್ಞರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಅಂತಿಮವಾಗಿ ಕ್ಯಾಬಿನೆಟ್ ಮುಂದೆ ವಿಚಾರ ಬಂದಾಗ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಬಳ್ಳಾರಿ ವಿಭಜನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆನಂದ್ ಸಿಂಗ್ ನೇತೃತ್ವದಲ್ಲಿ ವಿಜಯನಗರ ಜಿಲ್ಲೆ ಬೇರೆ ಮಾಡಿ ಎಂದು ಕೇಳಿಕೊಂಡಿದ್ದಾರೆ. ಈ ವಿಚಾರ ಸಿ.ಎಂ. ಮುಂದೆ ಬಂದಾಗ, ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೆವೆ ಎಂದರು.

ಶಿವಮೊಗ್ಗ: ಸುಪ್ರೀಂಕೋರ್ಟ್ ಅನರ್ಹ ಶಾಸಕರ ವಿಚಾರದಲ್ಲಿ ಯಾವ ನಿಲುವು ತೆಗೆದುಕೊಳ್ಳುತ್ತದೆಯೋ ಯಾರಿಗೂ ಗೊತ್ತಿಲ್ಲ. ಅವರು ಅನರ್ಹರು ಅಂತ ನಾನಲ್ಲ, ದೇವರೇ ಬಂದು ಹೇಳಿದ್ರು‌ ಆಗಲ್ಲ. ಅದನ್ನು ಕೋರ್ಟ್ ತೀರ್ಮಾನ ಮಾಡುತ್ತದೆ ಎಂದು‌ ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಹೇಳಿದರು.

ಸುಪ್ರೀಂಕೋರ್ಟ್ ಅಂದಿನ‌ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಶಾಸಕರ ರಾಜೀನಾಮೆ ಅಂಗೀಕಾರ ಮಾಡ್ತೀರಾ, ಇಲ್ಲ ತಿರಸ್ಕಾರ ಮಾಡ್ತೀರಾ ಅಂತ ಕೇಳಿತ್ತು. ಆದ್ರೆ ರಮೇಶ್ ಕುಮಾರ್ ಎರಡನ್ನು ಬಿಟ್ಟು‌ ಸಿದ್ದರಾಮಯ್ಯನವರ ಮಾತು ಕೇಳಿ ಶಾಸಕರನ್ನು ಅನರ್ಹರನ್ನಾಗಿ ಮಾಡಿದರು. ಹಿಂದೆ ಗುಲ್ಬರ್ಗಾದ ಶಾಸಕರು ರಾಜೀನಾಮೆ ನೀಡಿದಾಗ ಅಂಗೀಕಾರ ಮಾಡಿ, ಅವರಿಗೆ ಲೋಕಸಭೆ ಚುನಾವಣೆಯಲ್ಲಿ‌ ಸ್ಪರ್ಧೆ ಮಾಡಲು ಅವಕಾಶ ನೀಡಿ, ಈಗ 17 ಜನರ ರಾಜೀನಾಮೆ ಅಂಗೀಕಾರ ಮಾಡದೆ ಇರುವುದು‌ ಎಷ್ಟು ಸರಿ? ಅವರಿಗೊಂದು ನ್ಯಾಯ, ಇವರಿಗೊಂದು ನ್ಯಾಯನಾ ಎಂದು ಪ್ರಶ್ನೆ ಮಾಡಿದ ಈಶ್ವರಪ್ಪ, ಅ. 22 ರಂದು ಸುಪ್ರೀಂಕೋರ್ಟ್​ನಲ್ಲಿ ಅನರ್ಹ‌ ಶಾಸಕರಿಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.

ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ

ಸಿದ್ದರಾಮಯ್ಯರ ಕುತಂತ್ರದಿಂದಾಗಿಯೇ ಕಾಂಗ್ರೆಸ್ ಸೋತಿದೆ:

ಸಿದ್ದರಾಮಯ್ಯ ಕೆಳಗೆ ಬಿದ್ದಿದ್ದಾರೆ ಅಂತ ಕಲ್ಲು‌ ಹೊಡೆಯಲು ನಾನು ಇಷ್ಟ ಪಡುವುದಿಲ್ಲ. ಅಧಿಕಾರ ಯಾರಿಗೂ ಶಾಶ್ವತವಲ್ಲ, ಅಧಿಕಾರದಲ್ಲಿದ್ದಾಗ ಅವರು ಮಾಡಿರುವ ಕೆಲಸ, ಜನರೊಂದಿಗಿನ ಸಂಪರ್ಕ ಅತಿಮುಖ್ಯವಾಗುತ್ತದೆ. ನಾನೇ ಮುಖ್ಯಮಂತ್ರಿ ಎಂದು ಸರ್ವಾಧಿಕಾರಿ ಧೋರಣೆ ಮಾಡಿಕೊಂಡು ನಾನು ಏನು ಬೇಕಾದರೂ ಮಾಡಬಹುದು ಎಂಬ ಸಿದ್ದರಾಮಯ್ಯರ ಧೋರಣೆ ಸರಿಯಲ್ಲ. ಅವರ ಕುತಂತ್ರದಿಂದಾಗಿಯೇ ಕಾಂಗ್ರೆಸ್ ಸೋತಿದೆ. ಇಂದು ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ಅವರ ಕುತಂತ್ರದಿಂದ ಅವರೂ ಸೋತರು, ಸರ್ಕಾರನೂ ಬಿದ್ದುಹೋಯಿತು. ಇದು ಎಲ್ಲಾ ಪಕ್ಷದವರಿಗೆ ಪಾಠವಾಗಬೇಕಿದೆ ಎಂದು ಈಶ್ವರಪ್ಪ ಗುಡುಗಿದರು.

ಇದೇ ವೇಳೆ ಶರಾವತಿ ಕಣಿವೆಯಲ್ಲಿ ಭೂಗರ್ಭ ವಿದ್ಯುತ್ ಯೋಜನೆ ಡಿಪಿಆರ್ ವಿಚಾರವಾಗಿ ಮಾತನಾಡಿದ ಸಚಿವರು, ಕಾಡು ನಾಶವಾಗುತ್ತದೆ ಎಂದು ವಿದ್ಯುತ್ ಉತ್ಪಾದನೆ ನಿಲ್ಲಿಸಲು ಆಗಲ್ಲ. ಹಾಗಂತ ಕಾಡು ನಾಶ ಮಾಡಿ, ವಿದ್ಯುತ್ ಉತ್ಪಾದನೆ ಮಾಡುವುದೂ ಸರಿಯಲ್ಲ. ಕಾಡು ಉಳಿಯಬೇಕು, ವಿದ್ಯುತ್ ಕೂಡ ಉತ್ಪಾದನೆಯಾಗಬೇಕು. ಈ ಕುರಿತಂತೆ ತಜ್ಞರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಅಂತಿಮವಾಗಿ ಕ್ಯಾಬಿನೆಟ್ ಮುಂದೆ ವಿಚಾರ ಬಂದಾಗ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

ಬಳ್ಳಾರಿ ವಿಭಜನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆನಂದ್ ಸಿಂಗ್ ನೇತೃತ್ವದಲ್ಲಿ ವಿಜಯನಗರ ಜಿಲ್ಲೆ ಬೇರೆ ಮಾಡಿ ಎಂದು ಕೇಳಿಕೊಂಡಿದ್ದಾರೆ. ಈ ವಿಚಾರ ಸಿ.ಎಂ. ಮುಂದೆ ಬಂದಾಗ, ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೆವೆ ಎಂದರು.

Intro:ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಸಚಿವ ಕೆ.ಎಸ್.ಈಶ್ವರಪ್ಪ.

ಶಿವಮೊಗ್ಗ: ಸುಪ್ರೀಂ ಕೋರ್ಟ್ ಅನರ್ಹ ಶಾಸಕರ ವಿಚಾರದಲ್ಲಿ ಯಾವ ನಿಲುವು ತೆಗೆದು ಕೊಳ್ಳುತ್ತದೆಯೇ ಯಾರಿಗೂ ಗೂತ್ತಿಲ್ಲ. ಅವರು ಅನರ್ಹ ಅಂತ ನಾನಲ್ಲ, ದೇವರೆ ಬಂದು ಹೇಳಿದ್ರು‌ ಆಗಲ್ಲ, ಅವರು ಅರ್ಹರೂ ಅನರ್ಹರೂ ಅಂತ ಸುಪ್ರೀಂ ಕೋರ್ಟ್ ತೀಮಾರ್ನ ಮಾಡುತ್ತದೆ ಎಂದು‌ ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಅಂದಿನ‌ ಸ್ಪೀಕರ್ ರಮೇಶ್ ಕುಮಾರ್ ರವರಿಗೆ ಶಾಸಕರ ರಾಜೀನಾಮೆ ಅಂಗಿಕಾರ ಮಾಡ್ತಿರಾ ಇಲ್ಲ ತಿರಸ್ಕಾರ ಮಾಡ್ತಿರಾ ಅಂತ ಕೇಳಿತ್ತು. ಆದ್ರೆ, ರಮೇಶ್ ಕುಮಾರ್ ರವರು ಎರಡನ್ನು ಬಿಟ್ಟು‌ ಸಿದ್ದರಾಮಯ್ಯನವರ ಮಾತು ಕೇಳಿ ಶಾಸಕರನ್ನು ಅನರ್ಹರನ್ನಾಗಿ ಮಾಡಿದರು ಎಂದರು. ಅಕ್ಟೋಂಬರ್ 22 ರಂದು ಸುಪ್ರೀಂ ಕೋರ್ಟ್ ನಲ್ಲಿ ಅನರ್ಹ‌ ಶಾಸಕರಿಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು. ಹಿಂದೆ ಗುಲ್ಬರ್ಗಾದ ಶಾಸಕರು ರಾಜೀನಾಮೆ ನೀಡಿದಾಗ ಅಂಗಿಕಾರ ಮಾಡಿ, ಅವರಿಗೆ ಲೋಕಸಭ‌ ಚುನಾವಣೆಯಲ್ಲಿ‌ ಸ್ಪರ್ಧೆ ಮಾಡಲು ಅವಕಾಶ ನೀಡಿ, ಈಗ 17 ಜನರ ರಾಜೀನಾಮೆ ಅಂಗಿಕಾರ ಮಾಡದೆ ಇರುವುದು‌ ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು. ಅವರಿಗೊಂದು ನ್ಯಾಯ, ಇವರಿಗೊಂದು ನ್ಯಾಯಾನಾ ಎಂದು ಪ್ರಶ್ನೆ ಮಾಡಿದರು. ಮುಖ್ಯಮಂತ್ರಿಗಳ ಬಳಿ ಇದ್ದ ಹೆಚ್ಚುವರಿ ಯುವಜನ ಮತ್ತು ಕ್ರೀಡಾ ಇಲಾಖೆ ಸಚಿವ ಸ್ಥಾನ, ನನಗೆ ನೀಡಿದ್ದಾರೆ. ಆದರೆ, ಇದನ್ನು ಮುಖ್ಯಮಂತ್ರಿಗಳ ಬಳಿ ಚರ್ಚಿಸಿ, ತೆಗೆದುಕೊಳ್ಳಬೇಕೋ , ಬೇಡವೋ ಎಂಬದನ್ನು ಚರ್ಚಿಸಿ ನಿರ್ಧರಿಸುತ್ತೆನೆ.

ಶರಾವತಿ ಕಣಿವೆಯಲ್ಲಿ ಭೂಗರ್ಭ ವಿದ್ಯುತ್ ಯೋಜನೆ ಡಿಪಿಆರ್ ವಿಚಾರ:

ಕಾಡು ನಾಶವಾಗುತ್ತದೆ ಎಂದು ವಿದ್ಯುತ್ ಉತ್ಪಾದನೆ ನಿಲ್ಲಿಸಲು ಆಗಲ್ಲ. ಹಾಗಂತಾ ಕಾಡು ನಾಶ ಮಾಡಿ, ವಿದ್ಯುತ್ ಉತ್ಪಾದನೆ ಮಾಡುವುದು ಸರಿಯಲ್ಲ.
ಕಾಡು ಉಳಿಯಬೇಕು, ವಿದ್ಯುತ್ ಕೂಡ ಉತ್ಪಾದನೆಯಾಗಬೇಕು. ಈ ಕುರಿತಂತೆ ತಜ್ಞರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ.
ಅಂತಿಮವಾಗಿ ಕ್ಯಾಬಿನೆಟ್ ಮುಂದೆ ಬಂದಾಗ ತೀರ್ಮಾನ ಮಾಡುತ್ತೆವೆ ಎಂದರು. ವಿದ್ಯುತ್ ಇಲ್ಲದ ಕುಗ್ರಾಮಗಳು ರಾಜ್ಯದಲ್ಲಿ, ದೇಶದಲ್ಲಿ, ಸಾಕಷ್ಟಿವೆ.
ಅಲ್ಲಿಗೆ ವಿದ್ಯುತ್ ನೀಡುವ ನಿಟ್ಟಿನಲ್ಲಿ, ಯೋಜನೆ ರೂಪಿಸಬೇಕಿದೆ.

ಬಳ್ಳಾರಿ ವಿಭಜನೆ ವಿಚಾರ:

ಆನಂದ್ ಸಿಂಗ್ ನೇತೃತ್ವದಲ್ಲಿ ವಿಜಯನಗರ ಜಿಲ್ಲೆ ಬೇರೆ ಮಾಡಿ ಎಂದು ಕೇಳಿಕೊಂಡಿದ್ದಾರೆ. ಈ ವಿಚಾರ ಸಿ.ಎಂ. ಮುಂದೆ ಬಂದಾಗ, ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೆವೆ ಎಂದರು.Body:ಬಳ್ಳಾರಿ ವಿಭಜನೆ ವಿಚಾರ:

ಆನಂದ್ ಸಿಂಗ್ ನೇತೃತ್ವದಲ್ಲಿ ವಿಜಯನಗರ ಜಿಲ್ಲೆ ಬೇರೆ ಮಾಡಿ ಎಂದು ಕೇಳಿಕೊಂಡಿದ್ದಾರೆ. ಈ ವಿಚಾರ ಸಿ.ಎಂ. ಮುಂದೆ ಬಂದಾಗ, ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೆವೆ ಎಂದರು.

ಸಿದ್ದರಾಮಯ್ಯನವರ ವಿರುದ್ದ‌ ಗುಡುಗಿದ ಈಶ್ವರಪ್ಪ:

ಸಿದ್ದರಾಮಯ್ಯ ಕೆಳಗೆ ಬಿದ್ದಿದ್ದಾರೆ ಅಂತ ಕಲ್ಲು‌ಹೊಡೆಯಲು ನಾನು ಇಷ್ಟ ಪಡುವುದಿಲ್ಲ.
ಅಧಿಕಾರ ಯಾರಿಗೂ ಶಾಶ್ವತವಲ್ಲ, ಅಧಿಕಾರದಲ್ಲಿದ್ದಾಗ ಅವರು ಮಾಡಿರುವ ಕೆಲಸ, ಜನರೊಂದಿಗಿನ ಸಂಪರ್ಕ ಅತಿ ಮುಖ್ಯವಾಗುತ್ತೆದೆ. ನಾನೇ ಮುಖ್ಯಮಂತ್ರಿ ಎಂದು ಸರ್ವಾಧಿಕಾರಿ ಧೋರಣೆ ಮಾಡಿಕೊಂಡು ನಾನು ಏನು ಬೇಕಾದರೂ ಮಾಡಬಹುದು ಎಂಬ ಸಿದ್ದರಾಮಯ್ಯ ಧೋರಣೆ ಸರಿಯಲ್ಲ. ಸಿದ್ಧರಾಮಯ್ಯನವರ ಕುತಂತ್ರದಿಂದಾಗಿಯೇ ಕಾಂಗ್ರೆಸ್ ಸೋತಿದೆ. ಇಂದು ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ಅವರ ಕುತಂತ್ರದಿಂದ ಅವರು ಸೋತರು. ಸರ್ಕಾರನೂ ಬಿದ್ದೊಯ್ತು. ಇದು ಎಲ್ಲಾ ಪಕ್ಷದವರಿಗೆ ಪಾಠವಾಗಬೇಕಿದೆ. ಸಿದ್ಧರಾಮಯ್ಯನವರು ಕೆಟ್ಟ ಕೆಟ್ಟ ಪದಗಳನ್ನು ಬಳಸಿದ್ದಾರನಾನೇಂಘಟನೆ ಮೀರಿ ಯಾರೇ ಹೊರ ಹೋದರು, ದೇಶದಲ್ಲಿ ಯಾರು ಉದ್ಧಾರವಾಗಿರುವ ಉದಾಹರಣೆಗಳೇ ಇಲ್ಲ. ಯಡಿಯೂರಪ್ಪ ಸಂಘಟನೆ ಬಿಟ್ಟು ಪಕ್ಷ‌ ಕಟ್ಟಿದ್ರು, ಅವರು ಮೂರು ಮತ್ತೂಂದು ಸೀಟು ತೆಗೆದು ಕೊಂಡರು. ಸಿದ್ಧರಾಮಯ್ಯರಿಗೆ ನಾನೇ ನಾಯಕ, ನಾನೇ ಪಕ್ಷ ಅಧಿಕಾರಕ್ಕೆ ತಂದಿದ್ದು ಎಂಬ ಸೊಕ್ಕು ಇದೆ. ಮುನಿಯಪ್ಪನವರು ತನ್ನ ಸೋಲಿಗೆ ರಮೇಶ್ ಕುಮಾರ್ ಕಾರಣ ಅಂತ ಹೇಳಿದ್ರು ಸಹ ಸಿದ್ದರಾಮಯ್ಯ ರಮೇಶ್ ಕುಮಾರ್ ರವರನ್ನು ತಮ್ಮ ಪಕ್ಕದಲ್ಲಿ ಕೂರಿಸಿ ಕೊಂಡಿದ್ದರು. ಪಕ್ಷ ದ್ರೋಹಿಗಳಿಗೆ ಯಾವ ಪಕ್ಷದಲ್ಲೂ ಬೆಂಬಲ ಸಿಗಬಾರದು ಎಂದರು. ಪಕ್ಷದ ನಿಷ್ಠಾವಂತರಿಗೆ ಎಂದಿಗೂ ಪಕ್ಷದಲ್ಲಿ ಬೆಲೆ ಇದೆ.Conclusion:ಯು.ಟಿ. ಖಾದರ್ ಆರ್.ಎಸ್.ಎಸ್. ಮಾದರಿಯಲ್ಲಿ ಸಂಘಟನೆ ಮಾಡಲು ಹೊರಟಿರುವ ವಿಚಾರ.
ಅವರು ಆರ್.ಎಸ್.ಎಸ್. ತರಾನಾದರೂ ಮಾಡಲೀ, ಏಳ್.ಎಸ್.ಎಸ್. ತರನಾದರೂ ಮಾಡಲೀ. ಆದರೆ, ಆ ಸಂಘಟನೆ ರಾಷ್ಟ್ರಭಕ್ತಿಗೆ ಆದ್ಯತೆ ನೀಡುವಂತಾಗಬೇಕು ಎಂದು ಖಾದರ್ ಗೆ ಸಲಹೆ ನೀಡಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.