ಶಿವಮೊಗ್ಗ: ಐಎಂಎ ಜುವೆಲ್ಲರಿ ಕಂಪನಿಯಲ್ಲಿ ನಡೆದಿದೆ ಎನ್ನಲಾದ 10 ಸಾವಿರ ಕೋಟಿ ರೂಗೂ ಅಧಿಕ ಮೊತ್ತದ ಹಗರಣವನ್ನು ಸಿಬಿಐಗೆ ವಹಿಸುವಂತೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಅಸಹಾಯಕರ ರೀತಿಯಲ್ಲಿ ವರ್ತಿಸುತ್ತಿದೆ. ಬಡ, ಮಧ್ಯಮವರ್ಗದವರು ಬೀದಿಗೆ ಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ಕೊಡ್ತಿದ್ದಾರೆ. ಈ ಜನರ ಕಾಳಜಿ ಬಗ್ಗೆ ಸರ್ಕಾರಕ್ಕೆ ಕಿವಿ, ಕಣ್ಣು, ಹೃದಯ ಇಲ್ವಾ? ಎಂದು ಪ್ರಶ್ನಿಸಿದರು.
ಕರ್ನಾಟಕದಲ್ಲಿ ನಡೆದ ಅತೀ ದೊಡ್ಡ ಹಗರಣ ಇದಾಗಿದೆ. ಈ ಹಗರಣದ ಹಿನ್ನೆಲೆಯಲ್ಲಿ ಯಾವುದೇ ಸಂಸ್ಥೆಯಲ್ಲಿ ಜನರು ಹೂಡಿಕೆ ಮಾಡುವುದಕ್ಕೆ ಭಯ ಪಡುತ್ತಿದ್ದಾರೆ. ಹಾಗಾಗಿ ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಲು ಮುಂದಾಗಲಿ, ಇಲ್ಲದಿದ್ದರೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಿ ಎಂದರು.