ಶಿವಮೊಗ್ಗ : ಬಡ ರೋಗಿಗಳಿಗೆ ಆಸ್ಪತ್ರೆಯ ವೆಚ್ಚ ಭರಿಸುವುದು ದೊಡ್ಡ ಸವಾಲಾಗಿತ್ತು. ಇದನ್ನು ಮನಗಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನರಿಕ್ ಮೆಡಿಸಿನ್ ಒಳಗೊಂಡ ಜನೌಷಧ ಕೇಂದ್ರ ಆರಂಭಿಸಿದರು ಎಂದು ಸಂಸದ ಬಿ. ವೈ. ರಾಘವೇಂದ್ರ ತಿಳಿಸಿದರು.
ಈ ವೇಳೆ ಮಾತನಾಡಿದ ಸಂಸದ ಬಿ. ವೈ. ರಾಘವೇಂದ್ರ, ಬಡವರಿಗೆ ಆಸ್ಪತ್ರೆ ವೆಚ್ಚ ಭರಿಸುವುದು ದೊಡ್ಡ ಸವಾಲಾಗಿತ್ತು. ಇದನ್ನು ಮನಗಂಡ ನರೇಂದ್ರ ಮೋದಿ ಅವರು ಜೆನರಿಕ್ ಮೆಡಿಸಿನ್ ಒಳಗೊಂಡ ಜನೌಷಧ ಕೇಂದ್ರಗಳನ್ನು ಆರಂಭಿಸಿದರು ಎಂದರು.
ಇಲ್ಲಿ ಅತಿ ಕಡಿಮೆ ಬೆಲೆಯಲ್ಲಿ ಔಷಧಿಗಳನ್ನು ವಿತರಿಸಲಾಗುತ್ತದೆ. ಇದರಿಂದಾಗಿ ಬಡವರಿಗೆ ಹೆಚ್ಚಿನ ಹಣ ಉಳಿತಾಯವಾಗುತ್ತದೆ. ಅಲ್ಲದೆ ಮುಂದಿನ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನಷ್ಟು ಜನೌಷಧ ಕೇಂದ್ರಗಳನ್ನು ತೆರೆಯುವುದಾಗಿ ಸಂಸದರು ಭರವಸೆ ನೀಡಿದರು.