ETV Bharat / city

ವಸತಿ ನಿಲಯಗಳಿಗೆ ಅಗತ್ಯ ಸೌಲಭ್ಯ ಒದಗಿಸುವಂತೆ ಜ್ಯೋತಿ ಎಸ್.ಕುಮಾರ್ ಸೂಚನೆ - ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಿಸಲಾಗುತ್ತಿರುವ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಸಮಸ್ಯೆಗಳಿದ್ದು, ಅದನ್ನು ಕೂಡಲೇ ಸರಿಪಡಿಸುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಕೆ.ಡಿ.ಪಿ ಸಭೆ,  Jyothi S Kumar
ಶಿವಮೊಗ್ಗ ಕೆ.ಡಿ.ಪಿ ಸಭೆ
author img

By

Published : Dec 11, 2019, 4:57 PM IST

ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಿಸಲಾಗುತ್ತಿರುವ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಸಮಸ್ಯೆಗಳಿದ್ದು, ಕೂಡಲೇ ಸರಿಪಡಿಸುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಕೆ.ಡಿ.ಪಿ ಸಭೆ

ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್​ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೆ.ಡಿ.ಪಿ ಸಭೆ(ಕರ್ನಾಟಕ ಅಭಿವೃದ್ದಿ ಕಾರ್ಯಕ್ರಗಳ ಸಭೆ) ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಾಸ್ಟೆಲ್‍ಗಳಲ್ಲಿ ಬಿಸಿನೀರು ಒದಗಿಸಲು ಕ್ರಮ ಕೈಗೊಳ್ಳಿ. ಹಾಗೆಯೇ ವಸತಿ ನಿಲಯಗಳು ಸ್ವಚ್ಚವಾಗಿರುವಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ.ಕಾಂತೇಶ್ ಮಾತನಾಡಿ, ಶಿವಮೊಗ್ಗ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ಫಲಾನುಭವಿಯೊಬ್ಬರಿಗೆ ಆಶ್ರಯ ಯೋಜನೆಯಡಿ ನಿರ್ಮಿಸಿಕೊಡಲಾಗಿರುವ ಮನೆಗಳು ಕಳಪೆ ಗುಣಮಟ್ಟದ್ದಾಗಿದ್ದು, ಮಳೆಯಿಂದಾಗಿ ನೆಲಕಚ್ಚಿ ಹೋಗಿದೆ. ಈ ಮನೆಯ ನಿರ್ಮಾಣಕ್ಕೆ ಗುತ್ತಿಗೆ ಪಡೆದ ಗುತ್ತಿಗೆದಾರರಿಗೆ ಮನೆಯ ದುರಸ್ತಿಯಾಗುವವರೆಗೆ ಹಣ ಪಾವತಿಸಬಾರದು. ಜಿಲ್ಲೆಯ ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಗಳು ಸಾವನ್ನಪ್ಪುತ್ತಿರುವ ಮಾಹಿತಿ ಇದೆ. ಕಳೆದ ಸಾಲಿನಲ್ಲಿ ಆದಂತಹ ಸಾವು-ನೋವುಗಳು, ಅಹಿತಕರ ಘಟನೆಗಳು ಮರುಕಳಿಸದಂತೆ ಆರೋಗ್ಯ ಇಲಾಖೆ, ಪಶುವೈದ್ಯಕೀಯ ಇಲಾಖೆ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ಮಂಗನ ಕಾಯಿಲೆಯ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕಿರಣ್‍ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ 47,474 ರೈತರಿಂದ ಅರ್ಜಿಗಳನ್ನು ಸ್ವೀಕರಿಸಿ, ಆನ್‍ಲೈನ್‍ನಲ್ಲಿ ಉನ್ನತೀಕರಿಸಲಾಗಿದೆ. ಆ ಪೈಕಿ 16,000 ಅರ್ಜಿದಾರರಿಗೆ 14 ಕೋಟಿ ರೂ ಸಹಾಯ ಧನ ವಿತರಿಸಲಾಗಿದೆ. ಉಳಿದಂತಹ ಅರ್ಜಿಗಳ ಫಲಾನುಭವಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೊಂಡ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಿವಮೊಗ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಿಸಲಾಗುತ್ತಿರುವ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಸಮಸ್ಯೆಗಳಿದ್ದು, ಕೂಡಲೇ ಸರಿಪಡಿಸುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಕೆ.ಡಿ.ಪಿ ಸಭೆ

ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್​ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೆ.ಡಿ.ಪಿ ಸಭೆ(ಕರ್ನಾಟಕ ಅಭಿವೃದ್ದಿ ಕಾರ್ಯಕ್ರಗಳ ಸಭೆ) ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಾಸ್ಟೆಲ್‍ಗಳಲ್ಲಿ ಬಿಸಿನೀರು ಒದಗಿಸಲು ಕ್ರಮ ಕೈಗೊಳ್ಳಿ. ಹಾಗೆಯೇ ವಸತಿ ನಿಲಯಗಳು ಸ್ವಚ್ಚವಾಗಿರುವಂತೆ ನೋಡಿಕೊಳ್ಳಿ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ.ಕಾಂತೇಶ್ ಮಾತನಾಡಿ, ಶಿವಮೊಗ್ಗ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ಫಲಾನುಭವಿಯೊಬ್ಬರಿಗೆ ಆಶ್ರಯ ಯೋಜನೆಯಡಿ ನಿರ್ಮಿಸಿಕೊಡಲಾಗಿರುವ ಮನೆಗಳು ಕಳಪೆ ಗುಣಮಟ್ಟದ್ದಾಗಿದ್ದು, ಮಳೆಯಿಂದಾಗಿ ನೆಲಕಚ್ಚಿ ಹೋಗಿದೆ. ಈ ಮನೆಯ ನಿರ್ಮಾಣಕ್ಕೆ ಗುತ್ತಿಗೆ ಪಡೆದ ಗುತ್ತಿಗೆದಾರರಿಗೆ ಮನೆಯ ದುರಸ್ತಿಯಾಗುವವರೆಗೆ ಹಣ ಪಾವತಿಸಬಾರದು. ಜಿಲ್ಲೆಯ ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಗಳು ಸಾವನ್ನಪ್ಪುತ್ತಿರುವ ಮಾಹಿತಿ ಇದೆ. ಕಳೆದ ಸಾಲಿನಲ್ಲಿ ಆದಂತಹ ಸಾವು-ನೋವುಗಳು, ಅಹಿತಕರ ಘಟನೆಗಳು ಮರುಕಳಿಸದಂತೆ ಆರೋಗ್ಯ ಇಲಾಖೆ, ಪಶುವೈದ್ಯಕೀಯ ಇಲಾಖೆ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ಮಂಗನ ಕಾಯಿಲೆಯ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕಿರಣ್‍ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ 47,474 ರೈತರಿಂದ ಅರ್ಜಿಗಳನ್ನು ಸ್ವೀಕರಿಸಿ, ಆನ್‍ಲೈನ್‍ನಲ್ಲಿ ಉನ್ನತೀಕರಿಸಲಾಗಿದೆ. ಆ ಪೈಕಿ 16,000 ಅರ್ಜಿದಾರರಿಗೆ 14 ಕೋಟಿ ರೂ ಸಹಾಯ ಧನ ವಿತರಿಸಲಾಗಿದೆ. ಉಳಿದಂತಹ ಅರ್ಜಿಗಳ ಫಲಾನುಭವಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೊಂಡ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

Intro:ಶಿವಮೊಗ್ಗ,

ವಸತಿನಿಲಯಗಳಿಗೆ ಅಗತ್ಯ ಸೌಲಭ್ಯ ಒದಗಿಸಲು ಸೂಚನೆ : ಜ್ಯೋತಿ ಎಸ್.ಕುಮಾರ್

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಿಸಲಾಗುತ್ತಿರುವ ಜಿಲ್ಲೆಯ ಕೆಲವು ವಸತಿನಿಲಯಗಳಲ್ಲಿ ಸಮಸ್ಯೆಗಳಿದ್ದು, ಅವುಗಳನ್ನು ಕೂಡಲೇ ಸರಿಪಡಿಸುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್ ಅವರು ಹೇಳಿದರು.
ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್‍ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೆ.ಡಿ.ಪಿ.ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಹಾಸ್ಟೆಲ್‍ಗಳಲ್ಲಿ ಬಿಸಿನೀರು ಒದಗಿಸಲು ಕ್ರಮ ವಹಿಸುವಂತೆ ಹಾಗೆಯೇ ವಸತಿನಿಲಯಗಳು ಸ್ವಚ್ಚವಾಗಿರುವಂತೆ ನೋಡಿಕೊಳ್ಳಲು ಅವರು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ.ಕಾಂತೇಶ್ ಅವರು ಮಾತನಾಡಿ, ಶಿವಮೊಗ್ಗ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ಫಲಾನುಭವಿಯೊಬ್ಬರಿಗೆ ಆಶ್ರಯ ಯೋಜನೆಯಡಿ ನಿರ್ಮಿಸಿಕೊಡಲಾಗಿರುವ ಮನೆಯು ಕಳಪೆಗುಣಮಟ್ಟದ್ದಾಗಿದ್ದು, ಮಳೆಯಿಂದಾಗಿ ನೆಲಕಚ್ಚಿ ಹೋಗಿದೆ. ಈ ಮನೆಯ ನಿರ್ಮಾಣಕ್ಕೆ ಗುತ್ತಿಗೆಪಡೆದ ಗುತ್ತಿಗೆದಾರರಿಗೆ ಮನೆಯ ದುರಸ್ತಿಯಾಗುವವರೆಗೆ ಹಣ ಪಾವತಿಸದಂತೆ ಅವರು ಸೂಚಿಸಿದರು.
ಜಿಲ್ಲೆಯ ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಗಳು ಸಾವನ್ನಪ್ಪುತ್ತಿರುವ ಮಾಹಿತಿ ಇದೆ. ಕಳೆದ ಸಾಲಿನಲ್ಲಿ ಆದಂತಹ ಸಾವು-ನೋವುಗಳು, ಅಹಿತಕರ ಘಟನೆಗಳು ಮರುಕಳಿಸದಂತೆ ಆರೋಗ್ಯ ಇಲಾಖೆ, ಪಶುವೈದ್ಯಕೀಯ ಇಲಾಖೆ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ಮಂಗನಕಾಯಿಲೆಯ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಕಾಮಗಾರಿ ಪೂರ್ಣಗೊಂಡಿರುವ ಗ್ರಾಮಗಳಿಗೆ ನೀರಿನ ಘಟಕಗಳನ್ನು ಲೋಕಾರ್ಪಣೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೆಯೇ ಬಾಕಿ ಉಳಿದಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಅವರು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ನಗರ ಪ್ರದೇಶಗಳಲ್ಲಿನ ಶೌಚಗುಂಡಿಗಳನ್ನು ಸ್ವಚ್ಚಗೊಳಿಸಲು ಸ್ಥಳೀಯ ಸಂಸ್ಥೆಗಳು ಸಕ್ಕಿಂಗ್ ಯಂತ್ರಗಳನ್ನು ಬಳಸುತ್ತಿವೆ. ಆದರೆ  
ಗ್ರಾಮೀಣ ಪ್ರದೇಶಗಳಲ್ಲಿ ಶೌಚಗುಂಡಿಗಳನ್ನು ಸ್ವಚ್ಚಗೊಳಿಸಲು ಮಾನವಶಕ್ತಿಯನ್ನು ಬಳಸಲಾಗುತ್ತಿದೆ. ಇದು ಸರಿಯಲ್ಲ. ಗ್ರಾಮೀಣ ಪ್ರದೇಶದ ಶೌಚಗುಂಡಿಗಳ ಬಳಕೆಗಾಗಿ ಪ್ರತ್ಯೇಕವಾಗಿ ಆದ್ದರಿಂದ ಪ್ರತಿ ತಾಲೂಕು ಕೇಂದ್ರಗಳಲ್ಲಿ ಎರಡೆರಡು ಸಕ್ಕಿಂಗ್ ಯಂತ್ರಗಳನ್ನು ಖರೀದಿಸಿ ಬಳಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕೆಂದವರು ನುಡಿದರು.
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿ ಅಗ್ರಪಂಕ್ತಿಯಲ್ಲಿರುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಎಲ್ಲಾ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಿ, ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ|| ಕಿರಣ್‍ಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ 47474ರೈತರಿಂದ ಅರ್ಜಿಗಳನ್ನು ಸ್ವೀಕರಿಸಿ, ಆನ್‍ಲೈನ್‍ನಲ್ಲಿ ಉನ್ನತೀಕರಿಸಲಾಗಿದೆ. ಆ ಪೈಕಿ 16,000ಅರ್ಜಿದಾರರಿಗೆ 14ಕೋಟಿ. ಸಹಾಯಧನ ವಿತರಿಸಲಾಗಿದೆ. ಉಳಿದಂತಹ ಅರ್ಜಿಗಳ ಫಲಾನುಭವಿಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೊಂಡ ನಂತರ ಸಹಾಯಧನ ವಿತರಣೆಗೆ ಕ್ರಮವಹಿಸಲಾಗುವುದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ರಾಜೇಶ್ ಸುರಗೀಹಳ್ಳಿ ಅವರು ಮಾತನಾಡಿ, ಮಂಗನ ಕಾಯಿಲೆ ಜಿಲ್ಲೆಯಲ್ಲಿ ವ್ಯಾಪಿಸದಂತೆ ಕ್ರಮ ಕೈಗೊಳ್ಳಲಾಗಿದೆ. ಅದರ ಭಾಗವಾಗಿ ಜನರಲ್ಲಿ ಕಾಯಿಲೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತಿದೆ ಅಲ್ಲದೇ ಜನರಲ್ಲಿ ಅರಿವು ಮೂಡಿಸಲು ಆಶಾ ಕಾರ್ಯಕರ್ತೆಯರು ಸಕ್ರಿಯರಾಗಿದ್ದಾರೆ. ಅಲ್ಲದೇ ಅಗತ್ಯಕ್ಕೆ ತಕ್ಕಷ್ಟು ಔಷಧದ ದಾಸ್ತಾನು ಮಾಡಲಾಗಿದೆ ಎಂದವರು ನುಡಿದರು
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.