ಶಿವಮೊಗ್ಗ: ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮದ ಯುವಕ ನಿರಿಗೆ ಬಿದ್ದಿದ್ದ ಜಿಂಕೆ ಮರಿಯನ್ನು ರಕ್ಷಿಸಿ ಪಶು ವೈದ್ಯರ ಬಳಿ ಚಿಕಿತ್ಸೆ ಕೊಡಿಸಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾನೆ.
![Man saves deer fallen into water](https://etvbharatimages.akamaized.net/etvbharat/prod-images/kn-smg-03-ginkemari-ka10011_24092019225102_2409f_1569345662_774.jpg)
ಭದ್ರಾ ಬಲದಂಡೆಯ ನಾಲೆಗೆ ನೀರು ಕುಡಿಯಲು ಹೋಗಿ ಕಾಲು ಜಾರಿ ಬಿದ್ದ ಜಿಂಕೆ ನಾಲೆಯಲ್ಲಿ ತೇಲಿಕೊಂಡು ಹೋಗುತ್ತಿತ್ತು. ಈ ಸಂದರ್ಭ ಪವನ್ ಎಂಬ ಯುವಕ ತನ್ನ ಪ್ರಾಣವನ್ನೂ ಲೆಕ್ಕಿಸದೆ ನಾಲೆಗೆ ಹಾರಿ ಜಿಂಕೆ ಮರಿಯನ್ನು ರಕ್ಷಿಸಿದ್ದಾನೆ.
ಯುವಕನ ಕಾರ್ಯಕ್ಕೆ ಅರಕೆರೆ ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಶ್ಲಾಘಿಸಿದ್ದಾರೆ.