ETV Bharat / city

ವೇತನ ಹೆಚ್ಚಳ, ಸೇವಾ ಭದ್ರತೆಗೆ ಒತ್ತಾಯ: ಆಯುಷ್ ವೈದ್ಯರಿಂದ ಸಾಮೂಹಿಕ ರಾಜೀನಾಮೆ - Shimoga news

ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆ ನೀಡುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಆಯುಷ್ ವೈದ್ಯಾಧಿಕಾರಿಗಳು ತಮ್ಮ ಹುದ್ದೆಗೆ ಸಾಮೂಹಿಕ ರಾಜೀನಾಮೆ ನೀಡಿ, ಪ್ರತಿಭಟನೆಗೆ ಮುಂದಾಗಿದ್ದಾರೆ.

Massive resignation from Ayush doctors demanding service security, pay rise
ಸೇವಾ ಭದ್ರತೆ, ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಯುಷ್ ವೈದ್ಯರಿಂದ ಸಾಮೂಹಿಕ ರಾಜೀನಾಮೆ
author img

By

Published : Jul 17, 2020, 8:25 PM IST

ಶಿವಮೊಗ್ಗ: ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆ ನೀಡುವಂತೆ ಆಗ್ರಹಿಸಿ ಜಿಲ್ಲಾ ಆಯುಷ್ ವೈದ್ಯಾಧಿಕಾರಿಗಳು ತಮ್ಮ ಹುದ್ದೆಗೆ ಸಾಮೂಹಿಕ ರಾಜೀನಾಮೆ ನೀಡಿ, ಪ್ರತಿಭಟನೆಗೆ ಮುಂದಾಗಿರುವುದಾಗಿ ಜಿಲ್ಲಾ ಆಯುಷ್ ಫೆಡರೇಷನ್ ಅಧ್ಯಕ್ಷ ಡಾ.ಗುರುರಾಜ್ ತಿಳಿಸಿದ್ದಾರೆ.

ಸೇವಾ ಭದ್ರತೆ, ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಯುಷ್ ವೈದ್ಯರಿಂದ ಸಾಮೂಹಿಕ ರಾಜೀನಾಮೆ

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎನ್​ಆರ್​ಹೆಚ್​ಎಂ/ಎನ್​ಹೆಚ್​ಎಂ/ಆರ್​ಬಿಎಸ್​ಕೆ ಅಡಿ ಕರ್ತವ್ಯ ನಿರ್ವಹಿಸುವ ವೈದ್ಯರಿಗೆ ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆ ನೀಡಿಲ್ಲ. ಹೀಗಾಗಿ ಆಯುಷ್ ವೈದ್ಯರು ತಮ್ಮ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಆರೋಗ್ಯ ಮಂತ್ರಿಗಳಿಗೆ ಮನವಿ ಮಾಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ.

ಈ ಹಿಂದೆ ಆರೋಗ್ಯ ಸಚಿವರ ಜೊತೆ ಚರ್ಚೆ ನಡೆಸಿದ ಮೇಲೆ ಅಲೋಪತಿ ಗುತ್ತಿಗೆ ವೈದ್ಯರಿಗೆ ನೀಡುವ ವೇತನವನ್ನೆ ನೀಡಬೇಕು ಎಂಬ ತೀರ್ಮಾನಕ್ಕೆ ಬರಲಾಯಿತು. ಆದರೆ, ಇದನ್ನು ಜಾರಿ ಮಾಡದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ತುರ್ತು ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಆಯುಷ್ ವೈದ್ಯರಿಗೆ ಅಲೋಪತಿ ಚಿಕಿತ್ಸೆ ನೀಡಲು ಅನುಮತಿ ನೀಡಬೇಕು ಎಂಬ ಬೇಡಿಕೆಯನ್ನು ಸಲ್ಲಿಸಲಾಗಿತ್ತು. ಆದರೆ, ಇದನ್ನು ಪರಿಶೀಲನೆ ನಡೆಸಿಲ್ಲ.

ಕಳೆದ ಎರಡು ತಿಂಗಳಿನಿಂದ ತಮ್ಮ ಬೇಡಿಕೆಗಳನ್ನು‌ ಈಡೇರಿಸಬೇಕು ಎಂದು ಆಗ್ರಹಿಸಿ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು.‌ ಬಳಿಕ ಕಪ್ಪು‌ಪಟ್ಟಿ ‌ಧರಿಸಿ ಕರ್ತವ್ಯ ನಿರ್ವಹಣೆ ಮಾಡಲಾಗಿತ್ತು. ಆರೋಗ್ಯ ಸಚಿವರನ್ನು ಚಿತ್ರದುರ್ಗದಲ್ಲಿ ಭೇಟಿ ಮಾಡಿ, ರಾಜ್ಯ ಸಂಘದ ವತಿಯಿಂದ ರಾಜೀನಾಮೆ ನೀಡಲಾಗಿತ್ತು. ಈಗ ಶಿವಮೊಗ್ಗ ಜಿಲ್ಲೆಯ ಎಲ್ಲಾ ಆಯುಷ್ ಗುತ್ತಿಗೆ ವೈದ್ಯರು ರಾಜೀನಾಮೆ ಸಲ್ಲಿಸಿ, ಕರ್ತವ್ಯವನ್ನು ಸ್ಥಗಿತಗೊಳಿಸಿದ್ದಾರೆ ಎಂದರು.

ಶಿವಮೊಗ್ಗ: ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆ ನೀಡುವಂತೆ ಆಗ್ರಹಿಸಿ ಜಿಲ್ಲಾ ಆಯುಷ್ ವೈದ್ಯಾಧಿಕಾರಿಗಳು ತಮ್ಮ ಹುದ್ದೆಗೆ ಸಾಮೂಹಿಕ ರಾಜೀನಾಮೆ ನೀಡಿ, ಪ್ರತಿಭಟನೆಗೆ ಮುಂದಾಗಿರುವುದಾಗಿ ಜಿಲ್ಲಾ ಆಯುಷ್ ಫೆಡರೇಷನ್ ಅಧ್ಯಕ್ಷ ಡಾ.ಗುರುರಾಜ್ ತಿಳಿಸಿದ್ದಾರೆ.

ಸೇವಾ ಭದ್ರತೆ, ವೇತನ ಹೆಚ್ಚಳಕ್ಕೆ ಆಗ್ರಹಿಸಿ ಆಯುಷ್ ವೈದ್ಯರಿಂದ ಸಾಮೂಹಿಕ ರಾಜೀನಾಮೆ

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಎನ್​ಆರ್​ಹೆಚ್​ಎಂ/ಎನ್​ಹೆಚ್​ಎಂ/ಆರ್​ಬಿಎಸ್​ಕೆ ಅಡಿ ಕರ್ತವ್ಯ ನಿರ್ವಹಿಸುವ ವೈದ್ಯರಿಗೆ ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆ ನೀಡಿಲ್ಲ. ಹೀಗಾಗಿ ಆಯುಷ್ ವೈದ್ಯರು ತಮ್ಮ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಆರೋಗ್ಯ ಮಂತ್ರಿಗಳಿಗೆ ಮನವಿ ಮಾಡಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ.

ಈ ಹಿಂದೆ ಆರೋಗ್ಯ ಸಚಿವರ ಜೊತೆ ಚರ್ಚೆ ನಡೆಸಿದ ಮೇಲೆ ಅಲೋಪತಿ ಗುತ್ತಿಗೆ ವೈದ್ಯರಿಗೆ ನೀಡುವ ವೇತನವನ್ನೆ ನೀಡಬೇಕು ಎಂಬ ತೀರ್ಮಾನಕ್ಕೆ ಬರಲಾಯಿತು. ಆದರೆ, ಇದನ್ನು ಜಾರಿ ಮಾಡದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ತುರ್ತು ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಆಯುಷ್ ವೈದ್ಯರಿಗೆ ಅಲೋಪತಿ ಚಿಕಿತ್ಸೆ ನೀಡಲು ಅನುಮತಿ ನೀಡಬೇಕು ಎಂಬ ಬೇಡಿಕೆಯನ್ನು ಸಲ್ಲಿಸಲಾಗಿತ್ತು. ಆದರೆ, ಇದನ್ನು ಪರಿಶೀಲನೆ ನಡೆಸಿಲ್ಲ.

ಕಳೆದ ಎರಡು ತಿಂಗಳಿನಿಂದ ತಮ್ಮ ಬೇಡಿಕೆಗಳನ್ನು‌ ಈಡೇರಿಸಬೇಕು ಎಂದು ಆಗ್ರಹಿಸಿ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು.‌ ಬಳಿಕ ಕಪ್ಪು‌ಪಟ್ಟಿ ‌ಧರಿಸಿ ಕರ್ತವ್ಯ ನಿರ್ವಹಣೆ ಮಾಡಲಾಗಿತ್ತು. ಆರೋಗ್ಯ ಸಚಿವರನ್ನು ಚಿತ್ರದುರ್ಗದಲ್ಲಿ ಭೇಟಿ ಮಾಡಿ, ರಾಜ್ಯ ಸಂಘದ ವತಿಯಿಂದ ರಾಜೀನಾಮೆ ನೀಡಲಾಗಿತ್ತು. ಈಗ ಶಿವಮೊಗ್ಗ ಜಿಲ್ಲೆಯ ಎಲ್ಲಾ ಆಯುಷ್ ಗುತ್ತಿಗೆ ವೈದ್ಯರು ರಾಜೀನಾಮೆ ಸಲ್ಲಿಸಿ, ಕರ್ತವ್ಯವನ್ನು ಸ್ಥಗಿತಗೊಳಿಸಿದ್ದಾರೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.