ETV Bharat / city

ರಾಜ್ಯಪಾಲರಿಗೆ ಪತ್ರ ವಿಚಾರಕ್ಕೆ ಅಷ್ಟೊಂದು ಮಹತ್ವ ನೀಡಬೇಕಿಲ್ಲ: ಸಚಿವ ಈಶ್ವರಪ್ಪ

author img

By

Published : Apr 1, 2021, 10:37 AM IST

ನಮ್ಮ ಗ್ರಾಮೀಣಾಭಿವೃದ್ಧಿ ಇಲಾಖೆಯ ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ಮಾಡಬೇಕಿತ್ತು. ಹಾಗಾಗಿ ರಾಜ್ಯಪಾಲರ ಬಳಿ ಹೋಗಿ ಚರ್ಚೆ ಮಾಡಿಕೊಂಡು ಬಂದಿದ್ದೇನೆ. ಇದಕ್ಕೆ ಇಷ್ಟೊಂದು ಪ್ರಾಮುಖ್ಯತೆ ನೀಡುವ ಅವಶ್ಯಕತೆ ಇಲ್ಲ ಎಂದು ಸಚಿವ ಕೆ.ಎಸ್​.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.

Minister KS Eshwarappa
ಸಚಿವ ಕೆ.ಎಸ್​.ಈಶ್ವರಪ್ಪ

ಶಿವಮೊಗ್ಗ: ನಮ್ಮ ಇಲಾಖೆಯ ವಿಚಾರಗಳನ್ನು ರಾಜ್ಯಪಾಲರ ಗಮನಕ್ಕೆ ತರಬೇಕಿತ್ತು. ಅದನ್ನ ತಂದಿದ್ದೇನೆ ಅದರಲ್ಲಿ ವಿಶೇಷವೇನಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ನಮ್ಮ ಇಲಾಖೆಯ ವಿಚಾರಗಳನ್ನು ರಾಜ್ಯಪಾಲರ ಗಮನಕ್ಕೆ ತರಬೇಕಿತ್ತು, ಅದನ್ನ ತಂದಿದ್ದೇನಷ್ಟೇ:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಇಲಾಖೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲ ವಜುಭಾಯ್ ವಾಲಾ ಸೇರಿ ಬಿಜೆಪಿ ಹೈಕಮಾಂಡ್​ಗೆ ಪತ್ರದ ಮೂಲಕ ದೂರು ನೀಡಿದ್ದರು. ಈ ಕುರಿತು ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಈಶ್ವರಪ್ಪ, ಬಹಳ ವಿಶೇಷವೇನಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯ ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ಮಾಡಬೇಕಿತ್ತು. ಹಾಗಾಗಿ ರಾಜ್ಯಪಾಲರ ಬಳಿ ಹೋಗಿ ಚರ್ಚೆ ಮಾಡಿಕೊಂಡು ಬಂದಿದ್ದೇನೆ.

ಹೀಗಾಗಿ, ಇದಕ್ಕೆ ಇಷ್ಟೊಂದು ಪ್ರಾಮುಖ್ಯತೆ ನೀಡುವ ಅವಶ್ಯಕತೆ ಇಲ್ಲ. ನಮ್ಮ ಇಲಾಖೆಯ ವಿಚಾರಗಳನ್ನು ರಾಜ್ಯಪಾಲರ ಗಮನಕ್ಕೆ ತರಬೇಕು. ಅದನ್ನ ಅವರ ಗಮನಕ್ಕೆ ತಂದಿದ್ದೇನೆ ಅಷ್ಟೇ ಎಂದರು.

ಓದಿ: ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಆರೋಪ: ಬಿಎಸ್​ವೈ ವಿರುದ್ಧ ಪ್ರಧಾನಿ ಮೋದಿ, ಗವರ್ನರ್​ಗೆ ಈಶ್ವರಪ್ಪ ಪತ್ರ

ಶಿವಮೊಗ್ಗ: ನಮ್ಮ ಇಲಾಖೆಯ ವಿಚಾರಗಳನ್ನು ರಾಜ್ಯಪಾಲರ ಗಮನಕ್ಕೆ ತರಬೇಕಿತ್ತು. ಅದನ್ನ ತಂದಿದ್ದೇನೆ ಅದರಲ್ಲಿ ವಿಶೇಷವೇನಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ನಮ್ಮ ಇಲಾಖೆಯ ವಿಚಾರಗಳನ್ನು ರಾಜ್ಯಪಾಲರ ಗಮನಕ್ಕೆ ತರಬೇಕಿತ್ತು, ಅದನ್ನ ತಂದಿದ್ದೇನಷ್ಟೇ:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಇಲಾಖೆಯಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲ ವಜುಭಾಯ್ ವಾಲಾ ಸೇರಿ ಬಿಜೆಪಿ ಹೈಕಮಾಂಡ್​ಗೆ ಪತ್ರದ ಮೂಲಕ ದೂರು ನೀಡಿದ್ದರು. ಈ ಕುರಿತು ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ ಈಶ್ವರಪ್ಪ, ಬಹಳ ವಿಶೇಷವೇನಿಲ್ಲ. ಗ್ರಾಮೀಣಾಭಿವೃದ್ಧಿ ಇಲಾಖೆಯ ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ಮಾಡಬೇಕಿತ್ತು. ಹಾಗಾಗಿ ರಾಜ್ಯಪಾಲರ ಬಳಿ ಹೋಗಿ ಚರ್ಚೆ ಮಾಡಿಕೊಂಡು ಬಂದಿದ್ದೇನೆ.

ಹೀಗಾಗಿ, ಇದಕ್ಕೆ ಇಷ್ಟೊಂದು ಪ್ರಾಮುಖ್ಯತೆ ನೀಡುವ ಅವಶ್ಯಕತೆ ಇಲ್ಲ. ನಮ್ಮ ಇಲಾಖೆಯ ವಿಚಾರಗಳನ್ನು ರಾಜ್ಯಪಾಲರ ಗಮನಕ್ಕೆ ತರಬೇಕು. ಅದನ್ನ ಅವರ ಗಮನಕ್ಕೆ ತಂದಿದ್ದೇನೆ ಅಷ್ಟೇ ಎಂದರು.

ಓದಿ: ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಆರೋಪ: ಬಿಎಸ್​ವೈ ವಿರುದ್ಧ ಪ್ರಧಾನಿ ಮೋದಿ, ಗವರ್ನರ್​ಗೆ ಈಶ್ವರಪ್ಪ ಪತ್ರ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.