ETV Bharat / city

ಮೋದಿ ಸಾಧನೆಗಳೇ ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆ: ಭಾರತಿ ಶೆಟ್ಟಿ - Shimogga

ದೇಶದಲ್ಲಿ ಕಾಂಗ್ರೆಸ್ ದಶಕಗಳ ಕಾಲ ಆಡಳಿತ ನಡೆಸಿತ್ತು. ಆದ್ರೆ ಯಾವ ಸಾಧನೆಯನ್ನು ಮಾಡಲಿಲ್ಲ, ಮೋದಿಯವರು ಕೇವಲ ಐದು ವರ್ಷಗಳಲ್ಲಿ ದೇಶದ ಅಭಿವೃದ್ಧಿಪಡಿಸಿದ್ದಾರೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ತಿಳಿಸಿದರು. ಅಲ್ಲದೆ, ಬಿಜೆಪಿ ಅಭ್ಯರ್ಥಿಗಳಿಗೆ ಈ ಸಾಧನೆಗಳೇ ಶ್ರೀರಕ್ಷೆಯಾಗಲಿದೆ ಎಂದರು.

ಭಾರತಿ ಶೆಟ್ಟಿ
author img

By

Published : Apr 18, 2019, 7:46 PM IST

ಶಿವಮೊಗ್ಗ: ಮೋದಿ ಅವರ ಸಾಧನೆಗಳು ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಲಿವೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ ರಾಘವೇಂದ್ರ ಗೆಲುವು ಸಾಧಿಸುವುದು ಖಚಿತವೆಂದು ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ಭವಿಷ್ಯ ನುಡಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಹಲವು ವರ್ಷಗಳ ಕಾಲ ತನ್ನ ಆಡಳಿತ ನಡೆಸಿದೆ. ಆದರೆ ಯಾವ ಸಾಧನೆಯನ್ನು ಮಾಡಲಿಲ್ಲ ಎಂದು ಆರೋಪಿಸಿದರು. ಮೋದಿಯವರು ಕೇವಲ ಐದು ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಮಾಡಿದ್ದಾರೆ. ವಿಶೇಷವಾಗಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಅವರ ಬದುಕು ಹಸನಾಗಿಸಿದ್ದಾರೆ. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಮಹಿಳೆಯರಿಗೆ ವರದಾನವಾಗಿದೆ ಎಂದರು.

ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ

ಅಂಗನವಾಡಿ ಆಶಾ ಕಾರ್ಯಕರ್ತೆಯರ ವೇತನವನ್ನು ಹೆಚ್ಚಿಸಿದ ಕೀರ್ತಿ ಪ್ರಧಾನಿ ಮೋದಿಗೆ ಸಲ್ಲುತ್ತದೆ. ಮುಸ್ಲಿಂ ಮಹಿಳೆಯರಿಗೆ ಸಂಕಟವಾಗಿದ್ದ ತ್ರಿವಳಿ ತಲಾಕ್ ಅನ್ನು ರದ್ದುಪಡಿಸುವ ಮೂಲಕ ಅವರ ಕುಟುಂಬಕ್ಕೆ ಬೆಳಕು ಕೊಡಲಾಗಿದೆ. ಅಭಿವೃದ್ಧಿಯೇ ನಮ್ಮ ಮಂತ್ರ, ರಾಷ್ಟ್ರೀಯತೆ ಮತ್ತು ಸಾಧನೆ ಅಂತ ಗುಣಾತ್ಮಕ ಗುರಿಯನ್ನಿಟ್ಟುಕೊಂಡು ನಾವು ಜನರ ಬಳಿಗೆ ಹೋಗುತ್ತೇವೆ. ಆದರೆ ಕಾಂಗ್ರೆಸ್​ನವರು ಯಾವ ಸಾಧನೆಯನ್ನು ಇಟ್ಟುಕೊಂಡು ಜನರ ಬಳಿ ಹೋಗುತ್ತಾರೆ ಎಂದು ಭಾರತಿ ಶೆಟ್ಟಿ ಪ್ರಶ್ನಿಸಿದರು.

ಶಿವಮೊಗ್ಗದ ಅಭಿವೃದ್ಧಿ ಬಿಜೆಪಿ ಸರ್ಕಾರದಲ್ಲಿ ಮಾತ್ರ ಆಗಿದೆ. ಮಧು ಬಂಗಾರಪ್ಪನವರು ಜಿಲ್ಲೆಗೆ ತಮ್ಮ ಸಾಧನೆ ಏನು ಎಂಬುದನ್ನು ತಿಳಿಸಬೇಕು. ಯಡಿಯೂರಪ್ಪ ಅನುಷ್ಠಾನಗೊಳಿಸಿದ್ದ ಯೋಜನೆಗಳನ್ನು ಮಧು ಉದ್ಘಾಟನೆ ಮಾಡಿದ್ದಾರೇ, ಹೊರತು ಯಾವುದೇ ಹೊಸ ಯೋಜನೆಗಳನ್ನು ತಂದಿಲ್ಲ ಎಂದರು. ನಾವು ಬಾಯಿಯಲ್ಲಿ ರೈಲು ಬಿಡುವುದಿಲ್ಲ, ನಿಜವಾದ ರೈಲನ್ನು ಜಿಲ್ಲೆಗೆ ಬಿ.ವೈ ರಾಘವೇಂದ್ರ ಅವರು ಬಿಟ್ಟಿದ್ದಾರೆ ಎಂದು ತಿಳಿಸಿದರು.

ನಂತರ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಮಾತನಾಡಿದ ಭಾರತಿ ಶೆಟ್ಟಿ, ಕಾಂಗ್ರೆಸ್ ಪ್ರಣಾಳಿಕೆಯನ್ನು ನೋಡಿದರೆ ಭಯವಾಗುತ್ತಿದೆ. ಇಂದಿರಾ ಗಾಂಧಿ ಕಾಲದಿಂದಲೂ ಗರೀಬಿ ಹಠಾವೋ ಎಂದು ಹೇಳುತ್ತಾ ಬರುತ್ತಿದ್ದಾರೆ. ಈಗ ಅವರ ಮೊಮ್ಮಗ ರಾಹುಲ್ ಗಾಂಧಿ ಸಹ ಅದೇ ಸ್ಲೋಗನ್​ ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ಶಿವಮೊಗ್ಗ: ಮೋದಿ ಅವರ ಸಾಧನೆಗಳು ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಲಿವೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿ.ವೈ ರಾಘವೇಂದ್ರ ಗೆಲುವು ಸಾಧಿಸುವುದು ಖಚಿತವೆಂದು ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ಭವಿಷ್ಯ ನುಡಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಹಲವು ವರ್ಷಗಳ ಕಾಲ ತನ್ನ ಆಡಳಿತ ನಡೆಸಿದೆ. ಆದರೆ ಯಾವ ಸಾಧನೆಯನ್ನು ಮಾಡಲಿಲ್ಲ ಎಂದು ಆರೋಪಿಸಿದರು. ಮೋದಿಯವರು ಕೇವಲ ಐದು ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಮಾಡಿದ್ದಾರೆ. ವಿಶೇಷವಾಗಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಅವರ ಬದುಕು ಹಸನಾಗಿಸಿದ್ದಾರೆ. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಮಹಿಳೆಯರಿಗೆ ವರದಾನವಾಗಿದೆ ಎಂದರು.

ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ

ಅಂಗನವಾಡಿ ಆಶಾ ಕಾರ್ಯಕರ್ತೆಯರ ವೇತನವನ್ನು ಹೆಚ್ಚಿಸಿದ ಕೀರ್ತಿ ಪ್ರಧಾನಿ ಮೋದಿಗೆ ಸಲ್ಲುತ್ತದೆ. ಮುಸ್ಲಿಂ ಮಹಿಳೆಯರಿಗೆ ಸಂಕಟವಾಗಿದ್ದ ತ್ರಿವಳಿ ತಲಾಕ್ ಅನ್ನು ರದ್ದುಪಡಿಸುವ ಮೂಲಕ ಅವರ ಕುಟುಂಬಕ್ಕೆ ಬೆಳಕು ಕೊಡಲಾಗಿದೆ. ಅಭಿವೃದ್ಧಿಯೇ ನಮ್ಮ ಮಂತ್ರ, ರಾಷ್ಟ್ರೀಯತೆ ಮತ್ತು ಸಾಧನೆ ಅಂತ ಗುಣಾತ್ಮಕ ಗುರಿಯನ್ನಿಟ್ಟುಕೊಂಡು ನಾವು ಜನರ ಬಳಿಗೆ ಹೋಗುತ್ತೇವೆ. ಆದರೆ ಕಾಂಗ್ರೆಸ್​ನವರು ಯಾವ ಸಾಧನೆಯನ್ನು ಇಟ್ಟುಕೊಂಡು ಜನರ ಬಳಿ ಹೋಗುತ್ತಾರೆ ಎಂದು ಭಾರತಿ ಶೆಟ್ಟಿ ಪ್ರಶ್ನಿಸಿದರು.

ಶಿವಮೊಗ್ಗದ ಅಭಿವೃದ್ಧಿ ಬಿಜೆಪಿ ಸರ್ಕಾರದಲ್ಲಿ ಮಾತ್ರ ಆಗಿದೆ. ಮಧು ಬಂಗಾರಪ್ಪನವರು ಜಿಲ್ಲೆಗೆ ತಮ್ಮ ಸಾಧನೆ ಏನು ಎಂಬುದನ್ನು ತಿಳಿಸಬೇಕು. ಯಡಿಯೂರಪ್ಪ ಅನುಷ್ಠಾನಗೊಳಿಸಿದ್ದ ಯೋಜನೆಗಳನ್ನು ಮಧು ಉದ್ಘಾಟನೆ ಮಾಡಿದ್ದಾರೇ, ಹೊರತು ಯಾವುದೇ ಹೊಸ ಯೋಜನೆಗಳನ್ನು ತಂದಿಲ್ಲ ಎಂದರು. ನಾವು ಬಾಯಿಯಲ್ಲಿ ರೈಲು ಬಿಡುವುದಿಲ್ಲ, ನಿಜವಾದ ರೈಲನ್ನು ಜಿಲ್ಲೆಗೆ ಬಿ.ವೈ ರಾಘವೇಂದ್ರ ಅವರು ಬಿಟ್ಟಿದ್ದಾರೆ ಎಂದು ತಿಳಿಸಿದರು.

ನಂತರ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಮಾತನಾಡಿದ ಭಾರತಿ ಶೆಟ್ಟಿ, ಕಾಂಗ್ರೆಸ್ ಪ್ರಣಾಳಿಕೆಯನ್ನು ನೋಡಿದರೆ ಭಯವಾಗುತ್ತಿದೆ. ಇಂದಿರಾ ಗಾಂಧಿ ಕಾಲದಿಂದಲೂ ಗರೀಬಿ ಹಠಾವೋ ಎಂದು ಹೇಳುತ್ತಾ ಬರುತ್ತಿದ್ದಾರೆ. ಈಗ ಅವರ ಮೊಮ್ಮಗ ರಾಹುಲ್ ಗಾಂಧಿ ಸಹ ಅದೇ ಸ್ಲೋಗನ್​ ಹೇಳುತ್ತಿದ್ದಾರೆ ಎಂದು ಟೀಕಿಸಿದರು.

Intro:ಶಿವಮೊಗ್ಗ,
ಮೋದಿ ಅವರ ಸಾಧನೆಗಳು ನಮಗೆ ಶ್ರೀರಕ್ಷೆ ಯಾಗಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಭಾರತಿ ಶೆಟ್ಟಿ ತಿಳಿಸಿದರು.


Body:ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು ಭಾರತ ದೇಶದಲ್ಲಿ ಕಾಂಗ್ರೆಸ್ ಹಲವು ವರ್ಷಗಳ ಕಾಲ ತನ್ನ ಆಡಳಿತ ನಡೆಸಿದೆ ,
ಆದರೆ ಯಾವ ಸಾಧನೆಯನ್ನು ಮಾಡಲಿಲ್ಲ, ಮೋದಿಯವರು ಕೇವಲ ಐದು ವರ್ಷಗಳಲ್ಲಿ ದೇಶದ ಅಭಿವೃದ್ಧಿಯನ್ನು ಮಾಡಿದ್ದಾರೆ.
ವಿಶೇಷವಾಗಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಿ ಅವರ ಬದುಕು ಹಸನು ಮಾಡಿದ್ದಾರೆ ಎಂದರು.
ಮೋದಿಯವರ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಮಹಿಳೆಯರಿಗೆ ವರದಾನವಾಗಿದೆ. ಮುದ್ರಾ ಯೋಜನೆ, ಸುಕನ್ಯಾ ಯೋಜನೆ ಗಳು ಜನಪ್ರೀಯವಾಗಿವೆ ಎಂದುರು.


Conclusion:ಅಂಗನವಾಡಿ ಆಶಾ ಕಾರ್ಯಕರ್ತೆಯರ ವೇತನವನ್ನು ಹೆಚ್ಚಿಸಿದ ಕೀರ್ತಿ ಪ್ರಧಾನಿ ಮೋದಿಗೆ ಸಲ್ಲುತ್ತದೆ.
ಹಾಗೂ ಮುಸ್ಲಿಂ ಮಹಿಳೆಯರಿಗೆ ಸಂಕಟ ವಾಗಿದ್ದ ತ್ರಿವಳಿ ತಲಾಕ್ ಅನ್ನು ರದ್ದು ಪಡಿಸುವ ಮೂಲಕ ಅವರ ಕುಟುಂಬಕ್ಕೆ ಬೆಳಕು ಕೋಡಲಾಗಿದೆ ಎಂದರು. ಅಭಿವೃದ್ಧಿಯೇ ನಮ್ಮ ಮಂತ್ರ, ರಾಷ್ಟ್ರೀಯತೆ ಮತ್ತು ಸಾಧನೆ ಅಂತಹ ಪಾಸಿಟಿವ್ ಗುರಿಯನ್ನಿಟ್ಟುಕೊಂಡು ನಾವು ಜನರ ಬಳಿಗೆ ಹೋಗುತ್ತೇವೆ.
ಆದರೆ ಕಾಂಗ್ರೆಸ್ ನವರು ಯಾವ ಸಾಧನೆಯನ್ನು ಇಟ್ಟುಕೊಂಡು ಜನರ ಬಳಿ ಹೋಗುತ್ತದೆ ಎಂದು ಪ್ರಶ್ನಿಸಿದರು.
ಶಿವಮೊಗ್ಗದ ಅಭಿವೃದ್ಧಿ ಯಾವ ಸರ್ಕಾರದಲ್ಲಿ ಆಗಿಲ್ಲ ಅದು ಬಿಜೆಪಿ ಸರ್ಕಾರದಲ್ಲಿ ಮಾತ್ರ ಆಗಿದೆ .
ಮಧು ಬಂಗಾರಪ್ಪನವರ ಜಿಲ್ಲೆಗೆ ತಮ್ಮ ಸಾಧನೆ ಏನು ಎಂಬುದನ್ನು ತಿಳಿಸಬೇಕು ,ಮಧು ಬಂಗಾರಪ್ಪ ಶಾಸಕರಾದ ಯಡಿಯೂರಪ್ಪನವರು ಅನುಷ್ಠಾನಗೊಳಿಸಿದ ಯೋಜನೆಗಳಿಗೆ ಉದ್ಘಾಟನೆಯ ಮಾಡಿದ್ದಾರೆ ಹೊರೆತು ಯಾವುದೇ ಹೊಸ ಯೋಜನೆಗಳನ್ನು ತಂದಿಲ್ಲ ಎಂದರು.
ನಾವು ಬಾಯಿಯಲ್ಲಿ ರೈಲು ಬಿಡುವುದಿಲ್ಲ ನಿಜವಾದ ರೈಲು ಅನ್ನು ಜಿಲ್ಲೆಗೆ ಬಿವೈ ರಾಘವೇಂದ್ರ ಅವರು ಬಿಟ್ಟಿದ್ದಾರೆ .
ಮಧು ಬಂಗಾರಪ್ಪನವರ ಚುನಾವಣೆ ಸೋತ ಬಳಿಕ ಕ್ಷೇತ್ರಕ್ಕೆ ಎಷ್ಟು ಬಾರಿ ಬಂದು ಜನರ ಸಮಸ್ಯೆಗಳನ್ನು ಸ್ಪಂದಿಸಿದ್ದಾರೆ ಎಂದು ಪ್ರಶ್ನಿಸಿದರು. ನಂತರದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಮಾತನಾಡಿದ ಅವರು ಕಾಂಗ್ರೆಸ್ ಪ್ರಣಾಳಿಕೆಯನ್ನು ನೋಡಿದರೆ ಭಯ ವಾಗುತ್ತಿದೆ.
ಇಂದಿರಾಗಾಂಧಿ ಕಾಲದಿಂದಲೂ ಗರೀಬಿ ಹಠಾವೋ ಎಂದು ಹೇಳುತ್ತಾ ಬರುತ್ತಿದ್ದಾರೆ ಈಗ ಅವರ ಮೊಮ್ಮಗ ರಾಹುಲ್ ಗಾಂಧಿ ಸಹ ಅದೇ ಅದೇ ಶ್ಲೋಗನ ಹೇಳುತ್ತಿದ್ದಾರೆ ಹಾಗಾಗಿ ಆಸ್ಲೋಗನ್ ಅನ್ನ ಸೈಡಿಗಿಡಿ ಎಂದರು.
ಭೀಮಾನಾಯ್ಕ ಎಸ್ ಶಿವಮೊಗ್ಗ

For All Latest Updates

TAGGED:

Shimogga
ETV Bharat Logo

Copyright © 2025 Ushodaya Enterprises Pvt. Ltd., All Rights Reserved.