ETV Bharat / city

ಆಯುಷ್ಮಾನ್ ಕಾರ್ಡ್ ಬಿಜೆಪಿಗರಿಗಷ್ಟೇ ಇಲ್ಲ; ಕಾಂಗ್ರೆಸ್​, ಜೆಡಿಎಸ್​ನವರೂ ಉಪಯೋಗಿಸಿಕೊಳ್ಳಿ: ಈಶ್ವರಪ್ಪ - ಶಿವಮೊಗ್ಗ ಸೇವಾ ದಿವಸ್ ಕಾರ್ಯಕ್ರಮ ಸುದ್ದಿ

ಬಡವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಜಾರಿಯಾಗಿರುವುದು ಸಂತಸ ತಂದಿದೆ. ಫಲಾನುಭವಿಗಳು ಕಾಯಿಲೆ ಬರುವವರೆಗೂ ಕಾಯದೆ ಮೊದಲೇ ಈ ಕಾರ್ಡ್ ನ್ನು ಮಾಡಿಸಿಕೊಂಡು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಚಿವ ಈಶ್ವರಪ್ಪ ಕರೆ ನೀಡಿದರು.

shivamogga-district-bjp-seva-divas-program-celebration-news
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ
author img

By

Published : Dec 26, 2019, 7:11 AM IST

ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಡವರ ಆರೋಗ್ಯ ಕಾಪಾಡಲು ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ಕರೆ ನೀಡಿದ್ದಾರೆ.

ನಗರದ ಬೊಮ್ಮನಕಟ್ಟೆಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಅಂಗವಾಗಿ ಸೇವಾ ದಿವಸ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಡವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಜಾರಿಯಾಗಿರುವುದು ಸಂತಸ ತಂದಿದೆ. ಫಲಾನುಭವಿಗಳು ಕಾಯಿಲೆ ಬರುವವರೆಗೂ ಕಾಯದೆ ಮೊದಲೇ ಈ ಕಾರ್ಡ್ ನ್ನು ಮಾಡಿಸಿಕೊಂಡು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ

ಹಲವು ಕಾಯಿಲೆಗಳಿಗೆ ಆಯುಷ್ಮಾನ್ ಕಾರ್ಡ್ ರಾಮಬಾಣವಾಗಿದ್ದು, ತಕ್ಷಣಕ್ಕೆ ಉಚಿತವಾಗಿ ಚಿಕಿತ್ಸೆ ಪಡೆಯಲು ಈ ಕಾರ್ಡ್ ಅನುಕೂಲವಾಗಿದೆ. ಈ ಯೋಜನೆಯಿಂದ ಬಡವರಿಗೆ ಅನುಕೂಲ ಒದಗಿಸಿಕೊಟ್ಟ ಪ್ರಧಾನಿ ನರೇಂದ್ರ ಮೋದಿಯವರಿಗೆ ಈಶ್ವರಪ್ಪ ಧನ್ಯವಾದ ತಿಳಿಸಿದರು.

ಆಯುಷ್ಮಾನ್ ಕಾರ್ಡ್ ನ್ನು ಸೇವಾ ದಿವಸ್ ಅಂಗವಾಗಿ ಬಡವರಿಗೆ ಉಚಿತವಾಗಿ ಮಾಡಿಕೊಡುವ ಕಾರ್ಯ ನಡೆಯುತ್ತಿದೆ. ಇದು ಕೇವಲ ಬಿಜೆಪಿಯವರಿಗೆ ಮಾತ್ರವಲ್ಲದೆ, ಕಾಂಗ್ರೆಸ್ ಜೆಡಿಎಸ್ ಎಲ್ಲರೂ ಸಹ ಇದರ ಉಪಯೋಗ ಪಡೆಯಬೇಕು ಎಂದರು.

ಈ ವೇಳೆ ಸಂಸದ ಬಿ. ವೈ. ರಾಘವೇಂದ್ರ, ಎಂಎಲ್​ಸಿ ರುದ್ರೇಗೌಡ, ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ‌, ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ಹಾಜರಿದ್ದರು.

ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಡವರ ಆರೋಗ್ಯ ಕಾಪಾಡಲು ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ಕರೆ ನೀಡಿದ್ದಾರೆ.

ನಗರದ ಬೊಮ್ಮನಕಟ್ಟೆಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಅಂಗವಾಗಿ ಸೇವಾ ದಿವಸ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಡವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಜಾರಿಯಾಗಿರುವುದು ಸಂತಸ ತಂದಿದೆ. ಫಲಾನುಭವಿಗಳು ಕಾಯಿಲೆ ಬರುವವರೆಗೂ ಕಾಯದೆ ಮೊದಲೇ ಈ ಕಾರ್ಡ್ ನ್ನು ಮಾಡಿಸಿಕೊಂಡು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ

ಹಲವು ಕಾಯಿಲೆಗಳಿಗೆ ಆಯುಷ್ಮಾನ್ ಕಾರ್ಡ್ ರಾಮಬಾಣವಾಗಿದ್ದು, ತಕ್ಷಣಕ್ಕೆ ಉಚಿತವಾಗಿ ಚಿಕಿತ್ಸೆ ಪಡೆಯಲು ಈ ಕಾರ್ಡ್ ಅನುಕೂಲವಾಗಿದೆ. ಈ ಯೋಜನೆಯಿಂದ ಬಡವರಿಗೆ ಅನುಕೂಲ ಒದಗಿಸಿಕೊಟ್ಟ ಪ್ರಧಾನಿ ನರೇಂದ್ರ ಮೋದಿಯವರಿಗೆ ಈಶ್ವರಪ್ಪ ಧನ್ಯವಾದ ತಿಳಿಸಿದರು.

ಆಯುಷ್ಮಾನ್ ಕಾರ್ಡ್ ನ್ನು ಸೇವಾ ದಿವಸ್ ಅಂಗವಾಗಿ ಬಡವರಿಗೆ ಉಚಿತವಾಗಿ ಮಾಡಿಕೊಡುವ ಕಾರ್ಯ ನಡೆಯುತ್ತಿದೆ. ಇದು ಕೇವಲ ಬಿಜೆಪಿಯವರಿಗೆ ಮಾತ್ರವಲ್ಲದೆ, ಕಾಂಗ್ರೆಸ್ ಜೆಡಿಎಸ್ ಎಲ್ಲರೂ ಸಹ ಇದರ ಉಪಯೋಗ ಪಡೆಯಬೇಕು ಎಂದರು.

ಈ ವೇಳೆ ಸಂಸದ ಬಿ. ವೈ. ರಾಘವೇಂದ್ರ, ಎಂಎಲ್​ಸಿ ರುದ್ರೇಗೌಡ, ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ‌, ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ಹಾಜರಿದ್ದರು.

Intro:ಆಯುಷ್ಮಾನ್ ಕಾರ್ಡ್ ಅನ್ನು ಸದುಪಯೋಗಿ ಮಾಡಿಕೊಳ್ಳಿ: ಸಚಿವ ಈಶ್ವರಪ್ಪ ಕರೆ.

ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ಬಡವರ ಆರೋಗ್ಯ ಕಾಪಾಡಲು ಆಯುಷ್ಮಾನ್ ಭಾರತ್ ಕಾರ್ಡ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರ ಸದುಪಯೋಗವನ್ನು ಎಲ್ಲಾರು ಪಡೆದು ಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ದಿ ಹಾಗೂ ಕ್ರೀಡಾ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಶಿವಮೊಗ್ಗ ನಗರ ಬಿಜೆಪಿ ಘಟಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ ಅಂಗವಾಗಿ ಸೇವಾ ದಿವಸ್ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ನಂತ್ರ ಮಾತನಾಡಿದ ಸಚಿವರು , ಬಡವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಜಾರಿಯಾಗಿರುವುದು ಸಂತಸ ತಂದಿದೆ.Body:ಫಲಾನುಭವಿಗಳು ಕಾಯಿಲೆ ಬರುವವರೆಗು ಕಾಯದೇ ಮೊದಲೇ ಈ ಕಾರ್ಡ್ ನ್ನು ಮಾಡಿಸಿ ಕೊಳ್ಳಬೇಕು, ಈ ಯೋಜನೆ ಬಗ್ಗೆ ತಿಳಿದುಕೊಂಡು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ಹಲವು ಕಾಯಿಲೆಗಳಿಗೆ ಆಯುಷ್ಮಾನ್ ಕಾರ್ಡ್ ರಾಮಬಾಣವಾಗಿದ್ದು ತಕ್ಷಣಕ್ಕೆ ಉಚಿತವಾಗಿ ಚಿಕಿತ್ಸೆ ಪಡೆಯಲು ಈ ಕಾರ್ಡ್ ಅನುಕೂಲವಾಗಿದೆ ಎಂದರು. ಈ ಯೋಜನೆಯಿಂದ ಬಡವರಿಗೆ ಅನುಕೂಲ ಒದಗಿಸಿಕೊಟ್ಟ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಚಿವ ಈಶ್ವರಪ್ಪ ಧನ್ಯವಾದ ತಿಳಿಸಿದರು.Conclusion: ಆಯುಷ್ಮಾನ್ ಕಾರ್ಡ್ ನ್ನು ಸೇವಾ ದಿವಸ್ ಅಂಗವಾಗಿ ಬಡವರಿಗೆ ಆಯುಷ್ಮಾನ್ ಕಾರ್ಡ್ ನ್ನು ಉಚಿತವಾಗಿ ಮಾಡಿ ಕೊಡುವ ಕಾರ್ಯ ಮಾಡಲಾಗುತ್ತಿದೆ. ಇದರಿಂದ ಈ ಕಾರ್ಡ್ ಅನ್ನು ಕೇವಲ ಬಿಜೆಪಿಯವರಿಗೆ ಮಾತ್ರ ಅಲ್ಲದೆ, ಕಾಂಗ್ರೆಸ್ ಜೆಡಿಎಸ್ ಎಲ್ಲಾರು ಸಹ ಇದರ ಉಪಯೋಗ ಪಡೆಯಬೇಕು ಎಂದರು. ಈ ವೇಳೆ ಸಂಸದ ಬಿ.ವೈ.ರಾಘವೇಂದ್ರ, ಎಂಎಲ್ಸಿ ರುದ್ರೇಗೌಡರು, ಮೇಯರ್ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ‌, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹಾಜರಿದ್ದರು.

ಬೈಟ್: ಕೆ.ಎಸ್.ಈಶ್ವರಪ್ಪ. ಸಚಿವರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.