ETV Bharat / city

ಬಾಯಿಗೆ ಬಂದಂತೆ ಮಾತನಾಡಬಲ್ಲ ಏಕೈಕ ರಾಜಕಾರಣಿ ಅಂದ್ರೆ ಅದು ಸಿದ್ದರಾಮಯ್ಯ: ಆಯನೂರು

ಮಾಜಿ ಸಿ.ಎಂ ಸಿದ್ದರಾಮಯ್ಯರಿಗೆ ಮಾಡುವುದಕ್ಕೆ ಕೆಲಸವಿಲ್ಲ, ಹಾಗಾಗಿ ಅವರ ಮಾತುಗಳಿಗೆ ತೂಕವಿಲ್ಲ ಎಂದು ಎಂ.ಎಲ್.ಸಿ ಆಯನೂರು ಮಂಜುನಾಥ್ ಸಿದ್ದು ವಿರುದ್ಧ ಕಿಡಿ ಕಾರಿದ್ದಾರೆ.

author img

By

Published : Nov 4, 2019, 6:28 PM IST

ಸಿದ್ದರಾಮಯ್ಯ ವಿರುದ್ದ ಆಯನೂರು ಮಂಜುನಾಥ್ ಕಿಡಿ

ಶಿವಮೊಗ್ಗ: ಮಾಜಿ ಸಿ.ಎಂ ಸಿದ್ದರಾಮಯ್ಯರಿಗೆ ಮಾಡುವುದಕ್ಕೆ ಕೆಲಸವಿಲ್ಲ, ಹಾಗಾಗಿ ಅವರ ಮಾತುಗಳಿಗೆ ತೂಕವಿಲ್ಲ ಎಂದು ಎಂ.ಎಲ್.ಸಿ ಆಯನೂರು ಮಂಜುನಾಥ್ ಕಿಡಿ ಕಾರಿದ್ದಾರೆ.

ಸಿದ್ದರಾಮಯ್ಯ ವಿರುದ್ದ ಆಯನೂರು ಮಂಜುನಾಥ್ ಕಿಡಿ

ಶಿವಮೊಗ್ಗದಲ್ಲಿ ‌ಇಂದು ಮಾತನಾಡಿದ ಅವರು, ಸಿದ್ದರಾಮಯ್ಯ ಆಡುವ ಭಾಷೆ ಭಾಷೆಯೇ ಅಲ್ಲ. ಆ ಮನುಷ್ಯನ ಭಾಷೆಗೆ ಯಾರೂ ತೂಕ ನೀಡಬಾರದು ಎಂದು ಏಕ ವಚನದಲ್ಲಿಯೇ ನಿಂದಿಸಿದ್ದಾರೆ. ರಾಜ್ಯದಲ್ಲಿ ಬಾಯಿಗೆ ಬಂದಂತೆ ಮಾತನಾಡಬಲ್ಲ ಏಕೈಕ ರಾಜಕಾರಣಿ ಎಂದರೆ ಅದು ಸಿದ್ಧರಾಮಯ್ಯ. ಅವರ ವಿರುದ್ಧ 62 ಕೇಸುಗಳು ಎಸಿಬಿಯಲ್ಲಿ ಬಾಕಿ ಇವೆ. ಅವರೇ ರಾಜೀನಾಮೆ ನೀಡಬೇಕಾಗಿದೆ. ಇಂತವರು ಅಮಿತ್ ಶಾ ರಾಜೀನಾಮೆ ಬಗ್ಗೆ ಮಾತನಾಡುತ್ತಾರೆ ಅಂತ ತಿರುಗೇಟು ನೀಡಿದ್ದಾರೆ.

ಎಸಿಬಿಯ ಹಲ್ಲುಗಳನ್ನು ಮುರಿದು ಉಗುರುಗಳನ್ನು ಮೊಂಡ ಮಾಡಿರುವ ಸಿದ್ದರಾಮಯ್ಯ ಯಾವುದೋ ವಿಡಿಯೋ ಬಗ್ಗೆ ಮಾತನಾಡುತ್ತಾರೆ ಎಂದರೆ ಅದು ಹಾಸ್ಯಾಸ್ಪದ. ತಮ್ಮ ಕೇಸುಗಳಿರುವ ಲೋಕಾಯುಕ್ತವನ್ನು ದುರ್ಬಲಗೊಳಿಸಿ, ಎಸಿಬಿಯನ್ನು ತಂದು ಲೋಕಾಯುಕ್ತವನ್ನು ರದ್ದು ಮಾಡಿದ್ದಾರೆ. ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಿದ್ದರಾಮಯ್ಯ ಮತ್ತೊಬ್ಬರ ಬಗ್ಗೆ ಆರೋಪ ಮಾಡುವ ನೈತಿಕತೆ ಇಲ್ಲ. ಸಿದ್ಧರಾಮಯ್ಯ ಅವರ ಮೇಲೆ ಎಸಿಬಿಯಲ್ಲಿ ಒಂದೇ ಒಂದು ಕೇಸು ಇಲ್ಲ ಎಂದು ಅವರು ಹೇಳಿದರೆ, ಶಿವಮೊಗ್ಗದ ಗೋಪಿ ಸರ್ಕಲ್​ನಲ್ಲಿ ದೊಡ್ಡ ಹಾರ ಹಾಕಿ ಅವರನ್ನು ಸನ್ಮಾನಿಸುವೆ ಎಂದು ಆಯನೂರು ಮಂಜುನಾಥ್ ಟೀಕೆ ಮಾಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿಯೇ ಟೀಕಿಸಿರುವ ಆಯನೂರು ಮಂಜುನಾಥ್, ಆತನ ವ್ಯಾಕರಣದಲ್ಲಿ ಬಹು ವಚನವೇ ಇಲ್ಲ. ಆತ ಅತ್ಯಂತ ಸುಳ್ಳ, ದುರಂಹಕಾರಿ. ಭಾಷೆ ಮೇಲೆ ಹಿಡಿತವಿಲ್ಲದ ವ್ಯಕ್ತಿಯಾಗಿದ್ದು, ಬೇರೆಯವರಿಗೆ ವ್ಯಾಕರಣದ ಬಗ್ಗೆ ಪಾಠ ಮಾಡುತ್ತಾರೆ ಎಂದು ಲೇವಡಿ ಮಾಡಿದರು.

ಶಿವಮೊಗ್ಗ: ಮಾಜಿ ಸಿ.ಎಂ ಸಿದ್ದರಾಮಯ್ಯರಿಗೆ ಮಾಡುವುದಕ್ಕೆ ಕೆಲಸವಿಲ್ಲ, ಹಾಗಾಗಿ ಅವರ ಮಾತುಗಳಿಗೆ ತೂಕವಿಲ್ಲ ಎಂದು ಎಂ.ಎಲ್.ಸಿ ಆಯನೂರು ಮಂಜುನಾಥ್ ಕಿಡಿ ಕಾರಿದ್ದಾರೆ.

ಸಿದ್ದರಾಮಯ್ಯ ವಿರುದ್ದ ಆಯನೂರು ಮಂಜುನಾಥ್ ಕಿಡಿ

ಶಿವಮೊಗ್ಗದಲ್ಲಿ ‌ಇಂದು ಮಾತನಾಡಿದ ಅವರು, ಸಿದ್ದರಾಮಯ್ಯ ಆಡುವ ಭಾಷೆ ಭಾಷೆಯೇ ಅಲ್ಲ. ಆ ಮನುಷ್ಯನ ಭಾಷೆಗೆ ಯಾರೂ ತೂಕ ನೀಡಬಾರದು ಎಂದು ಏಕ ವಚನದಲ್ಲಿಯೇ ನಿಂದಿಸಿದ್ದಾರೆ. ರಾಜ್ಯದಲ್ಲಿ ಬಾಯಿಗೆ ಬಂದಂತೆ ಮಾತನಾಡಬಲ್ಲ ಏಕೈಕ ರಾಜಕಾರಣಿ ಎಂದರೆ ಅದು ಸಿದ್ಧರಾಮಯ್ಯ. ಅವರ ವಿರುದ್ಧ 62 ಕೇಸುಗಳು ಎಸಿಬಿಯಲ್ಲಿ ಬಾಕಿ ಇವೆ. ಅವರೇ ರಾಜೀನಾಮೆ ನೀಡಬೇಕಾಗಿದೆ. ಇಂತವರು ಅಮಿತ್ ಶಾ ರಾಜೀನಾಮೆ ಬಗ್ಗೆ ಮಾತನಾಡುತ್ತಾರೆ ಅಂತ ತಿರುಗೇಟು ನೀಡಿದ್ದಾರೆ.

ಎಸಿಬಿಯ ಹಲ್ಲುಗಳನ್ನು ಮುರಿದು ಉಗುರುಗಳನ್ನು ಮೊಂಡ ಮಾಡಿರುವ ಸಿದ್ದರಾಮಯ್ಯ ಯಾವುದೋ ವಿಡಿಯೋ ಬಗ್ಗೆ ಮಾತನಾಡುತ್ತಾರೆ ಎಂದರೆ ಅದು ಹಾಸ್ಯಾಸ್ಪದ. ತಮ್ಮ ಕೇಸುಗಳಿರುವ ಲೋಕಾಯುಕ್ತವನ್ನು ದುರ್ಬಲಗೊಳಿಸಿ, ಎಸಿಬಿಯನ್ನು ತಂದು ಲೋಕಾಯುಕ್ತವನ್ನು ರದ್ದು ಮಾಡಿದ್ದಾರೆ. ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಿದ್ದರಾಮಯ್ಯ ಮತ್ತೊಬ್ಬರ ಬಗ್ಗೆ ಆರೋಪ ಮಾಡುವ ನೈತಿಕತೆ ಇಲ್ಲ. ಸಿದ್ಧರಾಮಯ್ಯ ಅವರ ಮೇಲೆ ಎಸಿಬಿಯಲ್ಲಿ ಒಂದೇ ಒಂದು ಕೇಸು ಇಲ್ಲ ಎಂದು ಅವರು ಹೇಳಿದರೆ, ಶಿವಮೊಗ್ಗದ ಗೋಪಿ ಸರ್ಕಲ್​ನಲ್ಲಿ ದೊಡ್ಡ ಹಾರ ಹಾಕಿ ಅವರನ್ನು ಸನ್ಮಾನಿಸುವೆ ಎಂದು ಆಯನೂರು ಮಂಜುನಾಥ್ ಟೀಕೆ ಮಾಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿಯೇ ಟೀಕಿಸಿರುವ ಆಯನೂರು ಮಂಜುನಾಥ್, ಆತನ ವ್ಯಾಕರಣದಲ್ಲಿ ಬಹು ವಚನವೇ ಇಲ್ಲ. ಆತ ಅತ್ಯಂತ ಸುಳ್ಳ, ದುರಂಹಕಾರಿ. ಭಾಷೆ ಮೇಲೆ ಹಿಡಿತವಿಲ್ಲದ ವ್ಯಕ್ತಿಯಾಗಿದ್ದು, ಬೇರೆಯವರಿಗೆ ವ್ಯಾಕರಣದ ಬಗ್ಗೆ ಪಾಠ ಮಾಡುತ್ತಾರೆ ಎಂದು ಲೇವಡಿ ಮಾಡಿದರು.

Intro:ಸಿದ್ದರಾಮಯ್ಯ ಸುಳ್ಳು, ದುರಾಹಂಕರಿ: ಭಾಷೆ ಮೇಲೆ ಹಿಡಿತವಿಲ್ಲದ ವ್ಯಕ್ತಿ: ಸಿದ್ದು ವಿರುದ್ದ ಆಯನೂರು ಮಂಜುನಾಥ್ ಕಿಡಿ.


ಶಿವಮೊಗ್ಗ : ಮಾಜಿ ಸಿ.ಎಂ. ಸಿದ್ಧರಾಮಯ್ಯರಿಗೆ ಮಾಡುವುದಕ್ಕೆ ಏನೂ ಕಸುಬು ಇಲ್ಲ. ಹಾಗಾಗಿ ಅವರ ಮಾತುಗಳಿಗೆ ತೂಕವಿಲ್ಲ ಎಂದು ಎಂ.ಎಲ್.ಸಿ. ಆಯನೂರು ಮಂಜುನಾಥ್ ಸಿದ್ಧರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ಶಿವಮೊಗ್ಗದಲ್ಲಿ ‌ಇಂದು ಸಿದ್ಧರಾಮಯ್ಯ ವಿರುದ್ಧ ಹರಿಹಾಯ್ದ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಆತ ಆಡುವ ಭಾಷೆ ಭಾಷೆಯೇ ಅಲ್ಲ. ಆ ಮನುಷ್ಯನ ಭಾಷೆಗೆ ಯಾರೂ ತೂಕ ನೀಡಬಾರದು ಎಂದು ಏಕ ವಚನದಲ್ಲಿಯೇ ನಿಂದಿಸಿದ್ದಾರೆ. ರಾಜ್ಯದಲ್ಲಿ ಬಾಯಿಗೆ ಬಂದಂತೆ ಮಾತನಾಡಬಲ್ಲ ಏಕೈಕ ರಾಜಕಾರಣಿ ಎಂದರೆ ಅದು ಸಿದ್ಧರಾಮಯ್ಯ ಎಂದು ಟೀಕೆ ಮಾಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ 62 ಕೇಸುಗಳು ಎಸಿಬಿಯಲ್ಲಿ ಬಾಕಿ ಇವೆ. ಅವರೇ ರಾಜೀನಾಮೆ ನೀಡಬೇಕಾಗಿದೆ. ಇಂಥವರು ಅಮಿತ್ ಷಾ ರಾಜೀನಾಮೆ ಬಗ್ಗೆ ಮಾತನಾಡುತ್ತಾರೆ ಅಂತಾ ತಿರುಗೇಟು ನೀಡಿದ್ದಾರೆ.Body:ಎಸಿಬಿಯ ಹಲ್ಲುಗಳನ್ನು ಮುರಿದು ಉಗುರುಗಳನ್ನು ಮೊಂಡು ಮಾಡಿರುವ ಸಿದ್ದರಾಮಯ್ಯ ಯಾವುದೋ ವಿಡಿಯೋ ಬಗ್ಗೆ ಮಾತನಾಡುತ್ತಾರೆ ಎಂದರೆ ಅದು ಹಾಸ್ಯಾಸ್ಪದ ಎಂದು ಜರಿದಿದ್ದಾರೆ. ತಮ್ಮ ಕೇಸುಗಳಿರುವ ಲೋಕಾಯುಕ್ತವನ್ನು ದುರ್ಬಲಗೊಳಿಸಿ ಎಸಿಬಿಯನ್ನು ತಂದು ಲೋಕಾಯುಕ್ತವನ್ನು ರದ್ದು ಮಾಡಿದ್ದಾರೆ. ಭ್ರಷ್ಟಾಚಾರದ ಆರೋಪ ಹೊತ್ತಿರುವ ಸಿದ್ದರಾಮಯ್ಯ ಮತ್ತೊಬ್ಬರ ಬಗ್ಗೆ ಆರೋಪ ಮಾಡಲು ನೈತಿಕತೆ ಇಲ್ಲ. ಸಿದ್ಧರಾಮಯ್ಯ ಅವರ ಮೇಲೆ ಎಸಿಬಿಯಲ್ಲಿ ಒಂದೇ ಒಂದು ಕೇಸು ಇಲ್ಲ ಎಂದು ಅವರು ಹೇಳಿದರೆ ಶಿವಮೊಗ್ಗದ ಗೋಪಿ ಸರ್ಕಲ್ ನಲ್ಲಿ ದೊಡ್ಡ ಹಾರ ಹಾಕಿ ಅವರನ್ನು ಸನ್ಮಾನಿಸುವೆ ಎಂದು ಆಯನೂರು ಮಂಜುನಾಥ್ ಟೀಕೆ ಮಾಡಿದ್ದಾರೆ. Conclusion:ಸಿದ್ಧರಾಮಯ್ಯ ಅವರ ಮೇಲೆ ಎಸಿಬಿಯಲ್ಲಿ ಒಂದೇ ಒಂದು ಕೇಸು ಇಲ್ಲ ಎಂದು ಅವರು ಹೇಳಿದರೆ ಶಿವಮೊಗ್ಗದ ಗೋಪಿ ಸರ್ಕಲ್ ನಲ್ಲಿ ದೊಡ್ಡ ಹಾರ ಹಾಕಿ ಅವರನ್ನು ಸನ್ಮಾನಿಸುವೆ ಎಂದು ಆಯನೂರು ಮಂಜುನಾಥ್ ಟೀಕೆ ಮಾಡಿದ್ದಾರೆ. ಸಿದ್ಧರಾಮಯ್ಯ ವಿರುದ್ಧ ಏಕವಚನದಲ್ಲಿಯೇ ಟೀಕಿಸಿರುವ ಆಯನೂರು ಮಂಜುನಾಥ್ ಆತನ ವ್ಯಾಕರಣದಲ್ಲಿ ಬಹುವಚನವೇ ಇಲ್ಲ ಎಂದು ಲೇವಡಿ ಮಾಡಿದ್ದಾರೆ. ಆತ ಅತ್ಯಂತ ಸುಳ್ಳ, ದುರಾಂಹಕಾರಿ, ಭಾಷೆ ಮೇಲೆ ಹಿಡಿತವಿಲ್ಲದ ವ್ಯಕ್ತಿಯಾಗಿದ್ದು, ಬೇರೆಯವರಿಗೆ ವ್ಯಾಕರಣದ ಬಗ್ಗೆ ಸಿದ್ಧರಾಮಯ್ಯ ಪಾಠ ಮಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ. ಇಂತಹ ಸಿದ್ಧರಾಮಯ್ಯ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲವಾಗಿದ್ದು, ಅವರ ಬಗ್ಗೆ ಕಾಂಗ್ರೆಸ್ ನವರೇ ತಲೆ ಕೆಡಿಸಿಕೊಳ್ಳುತ್ತಿಲ್ಲ ಹಾಗಾಗಿ ನಾವು ಕೂಡ ಅವರ ಬಗ್ಗೆ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

ಬೈಟ್... ಆಯನೂರು ಮಂಜುನಾಥ್, ಎಂ.ಎಲ್.ಸಿ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.